Homeಮುಖಪುಟನಾನು ಪ್ರತಿದಿನ ಗೋಮೂತ್ರ ಕುಡಿಯುತ್ತೇನೆ, ಹಾಗಾಗಿ ಕೋವಿಡ್ ಬಂದಿಲ್ಲ: ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ನಾನು ಪ್ರತಿದಿನ ಗೋಮೂತ್ರ ಕುಡಿಯುತ್ತೇನೆ, ಹಾಗಾಗಿ ಕೋವಿಡ್ ಬಂದಿಲ್ಲ: ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

- Advertisement -
- Advertisement -

ಇಡೀ ದೇಶ ಕೋವಿಡ್‌ ಎರಡನೇ ಅಲೆಗೆ ತತ್ತರಿಸಿಹೋಗಿರುವ ಸಂದರ್ಭದಲ್ಲಿ ನಾನು ಪ್ರತಿದಿನ ಗೋಮೂತ್ರ ಕುಡಿಯುತ್ತೇನೆ, ಹಾಗಾಗಿ ನನಗೆ ಕೋವಿಡ್ ಬಂದಿಲ್ಲ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ. ಅಲ್ಲದೇ ಗೋಮೂತ್ರವು ಕೋವಿಡ್‌ನಿಂದ ಉಂಟಾಗುವ ಶ್ವಾಸಕೋಶದ ಸೋಂಕನ್ನು ಗುಣಪಡಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಕುರಿತ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ಅವರು, “ಹಸುವಿನ ಮೂತ್ರವು ಜೀವ ರಕ್ಷಕ. ನಾವು ಪ್ರತಿದಿನ ದೇಸಿ ಹಸುವಿನಿಂದ ಮೂತ್ರ ತೆಗೆದುಕೊಂಡರೆ ಅದು ಕೋವಿಡ್‌ನಿಂದ ಶ್ವಾಸಕೋಶದ ಸೋಂಕನ್ನು ಗುಣಪಡಿಸುತ್ತದೆ. ನಾನು ತೀವ್ರ ನೋವಿನಲ್ಲಿದ್ದೇನೆ ಆದರೆ ನಾನು ಪ್ರತಿದಿನ ಹಸುವಿನ ಮೂತ್ರವನ್ನು ತೆಗೆದುಕೊಳ್ಳುತ್ತೇನೆ. ಹಾಗಾಗಿ ಈಗ ನಾನು ಕರೋನಾ ವಿರುದ್ಧ ಯಾವುದೇ ಔಷಧಿ ತೆಗೆದುಕೊಳ್ಳಬೇಕಾಗಿಲ್ಲ ಮತ್ತು ನನಗೆ ಕರೋನಾ ಇಲ್ಲ” ಎಂದು ಪ್ರಗ್ಯಾ ಠಾಕೂರ್ ಅವರು ಪಕ್ಷದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಇಂದಿನಿಂದ ಅಗಸ್ಟ್ 5 ರವರೆಗೂ ಎಲ್ಲರೂ ಪ್ರತಿ ದಿನ ಐದು ಬಾರಿ ಹನುಮಾನ್ ಚಾಲೀಸಾ ಪಠಿಸಿ, ಇದರಿಂದ ಕೋವಿಡ್ ಬಿಕ್ಕಟ್ಟು ಜಗತ್ತಿನಿಂದ ದೂರವಾಗುತ್ತದೆ’ ಎಂದು ಬಿಜೆಪಿಯ ಸಂಸದೆ ಪ್ರಗ್ಯಾ ಠಾಕೂರ್ 2020ರ ಜುಲೈನಲ್ಲಿ ಹೇಳಿದ್ದರು.

ಕಳೆದ ವರ್ಷ 2020ರ ಡಿಸೆಂಬರ್‌ನಲ್ಲಿ ಇದೇ ಪ್ರಗ್ಯಾ ಠಾಕೂರ್ ಕೋವಿಡ್ ಲಕ್ಷಣಗಳ ಕಾಣಿಸಿಕೊಂಡ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಅಲ್ಲದೆ ಪ್ರಗ್ಯಾ ಠಾಕೂರ್ ಎರಡು ವರ್ಷದ ಹಿಂದೆ ಗೋ ಮೂತ್ರ ಮತ್ತು ಇತರ ಗೋ ಉತ್ಪನ್ನಗಳ ಮಿಶ್ರಣಗಳು ತನ್ನನ್ನು ಕ್ಯಾನ್ಸರ್‌ನಿಂದ ಗುಣಪಡಿಸಿದವು ಎಂಬ ಹೇಳಿಕೆ ನೀಡಿದ್ದರು.

ಕೋವಿಡ್‌ನ ಚಿಕಿತ್ಸೆ ಅಥವಾ ತಡೆಗಟ್ಟುವಿಕೆಗೆ ಗೋವಿನ ಸಗಣಿ ಅಥವಾ ಮೂತ್ರವು ಸಹಾಯ ಮಾಡುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಹೇಳಿದೆ. “ಗೋವಿನ ಸಗಣಿ ಅಥವಾ ಮೂತ್ರವು COVID-19 ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬುದಕ್ಕೆ ಯಾವುದೇ ದೃಢವಾದ ವೈಜ್ಞಾನಿಕ ಪುರಾವೆಗಳಿಲ್ಲ” ಎಂದು ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥ ಡಾ.ಜೆ.ಎ.ಜಯಲಾಲ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಇನ್ನು ಮಣಿಪುರದ ಬಿಜೆಪಿ ಅಧ್ಯಕ್ಷ ಸೈಖೋಮ್ ತಿಕೇಂದ್ರ ಸಿಂಗ್ ಕೋವಿಡ್‌ನಿಂದ ಮೃತಪಟ್ಟಾಗ ಇಬ್ಬರು ಸಾಮಾಜಿಕ ಕಾರ್ಯಕರ್ತರು ಗೋ ಮೂತ್ರ ನಿಮ್ಮನ್ನು ಉಳಿಸಲಿಲ್ಲ ಎಂದು ಫೇಸ್‌ಬುಕ್‌ನಲ್ಲಿ ಬರೆದುದ್ದಕ್ಕೆ ಅವರನ್ನ ಬಂಧಿಸಲಾಗಿತ್ತು. “ಹಸುವಿನ ಸೆಗಣಿ, ಹಸುವಿನ ಗಂಜಲ ಕೆಲಸ ಮಾಡುವುದಿಲ್ಲ. ಆಧಾರವಿಲ್ಲದ ವಾದಗಳು. ನಾನು ನಾಳೆ ಮೀನು ತಿನ್ನುತ್ತೇನೆ” ಎಂದು ಫೇಸ್‌ಬುಕ್‌ನಲ್ಲಿ ವಾಂಗ್‌ಖೆಮ್ ಬರೆದಿದ್ದರು ಎನ್ನಲಾಗಿದೆ. ಅದೇ ರೀತಿ ಎರೆಂಡ್ರೊ ಲೈಚೋಂಬಮ್‌ ಕೂಡ “ಹಸುವಿನ ಸೆಗಣಿ, ಹಸುವಿನ ಗಂಜಲದಿಂದ ಕೊರೊನಾ ವಾಸಿಯಾಗುವುದಿಲ್ಲ. ವಿಜ್ಞಾನ ಮತ್ತು ಸಾಮಾನ್ಯ ಜ್ಞಾನದಿಂದ ವಾಸಿಯಾಗುತ್ತದೆ ಪ್ರೊಫೆಸರ್‌ಜಿ, RIP” ಎಂದು ಬರೆದಿದ್ದರು. ಈ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...