Homeಮುಖಪುಟನಾನು ಪ್ರತಿದಿನ ಗೋಮೂತ್ರ ಕುಡಿಯುತ್ತೇನೆ, ಹಾಗಾಗಿ ಕೋವಿಡ್ ಬಂದಿಲ್ಲ: ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ನಾನು ಪ್ರತಿದಿನ ಗೋಮೂತ್ರ ಕುಡಿಯುತ್ತೇನೆ, ಹಾಗಾಗಿ ಕೋವಿಡ್ ಬಂದಿಲ್ಲ: ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

- Advertisement -
- Advertisement -

ಇಡೀ ದೇಶ ಕೋವಿಡ್‌ ಎರಡನೇ ಅಲೆಗೆ ತತ್ತರಿಸಿಹೋಗಿರುವ ಸಂದರ್ಭದಲ್ಲಿ ನಾನು ಪ್ರತಿದಿನ ಗೋಮೂತ್ರ ಕುಡಿಯುತ್ತೇನೆ, ಹಾಗಾಗಿ ನನಗೆ ಕೋವಿಡ್ ಬಂದಿಲ್ಲ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ. ಅಲ್ಲದೇ ಗೋಮೂತ್ರವು ಕೋವಿಡ್‌ನಿಂದ ಉಂಟಾಗುವ ಶ್ವಾಸಕೋಶದ ಸೋಂಕನ್ನು ಗುಣಪಡಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಕುರಿತ ಅವರ ವಿಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ಅವರು, “ಹಸುವಿನ ಮೂತ್ರವು ಜೀವ ರಕ್ಷಕ. ನಾವು ಪ್ರತಿದಿನ ದೇಸಿ ಹಸುವಿನಿಂದ ಮೂತ್ರ ತೆಗೆದುಕೊಂಡರೆ ಅದು ಕೋವಿಡ್‌ನಿಂದ ಶ್ವಾಸಕೋಶದ ಸೋಂಕನ್ನು ಗುಣಪಡಿಸುತ್ತದೆ. ನಾನು ತೀವ್ರ ನೋವಿನಲ್ಲಿದ್ದೇನೆ ಆದರೆ ನಾನು ಪ್ರತಿದಿನ ಹಸುವಿನ ಮೂತ್ರವನ್ನು ತೆಗೆದುಕೊಳ್ಳುತ್ತೇನೆ. ಹಾಗಾಗಿ ಈಗ ನಾನು ಕರೋನಾ ವಿರುದ್ಧ ಯಾವುದೇ ಔಷಧಿ ತೆಗೆದುಕೊಳ್ಳಬೇಕಾಗಿಲ್ಲ ಮತ್ತು ನನಗೆ ಕರೋನಾ ಇಲ್ಲ” ಎಂದು ಪ್ರಗ್ಯಾ ಠಾಕೂರ್ ಅವರು ಪಕ್ಷದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಇಂದಿನಿಂದ ಅಗಸ್ಟ್ 5 ರವರೆಗೂ ಎಲ್ಲರೂ ಪ್ರತಿ ದಿನ ಐದು ಬಾರಿ ಹನುಮಾನ್ ಚಾಲೀಸಾ ಪಠಿಸಿ, ಇದರಿಂದ ಕೋವಿಡ್ ಬಿಕ್ಕಟ್ಟು ಜಗತ್ತಿನಿಂದ ದೂರವಾಗುತ್ತದೆ’ ಎಂದು ಬಿಜೆಪಿಯ ಸಂಸದೆ ಪ್ರಗ್ಯಾ ಠಾಕೂರ್ 2020ರ ಜುಲೈನಲ್ಲಿ ಹೇಳಿದ್ದರು.

ಕಳೆದ ವರ್ಷ 2020ರ ಡಿಸೆಂಬರ್‌ನಲ್ಲಿ ಇದೇ ಪ್ರಗ್ಯಾ ಠಾಕೂರ್ ಕೋವಿಡ್ ಲಕ್ಷಣಗಳ ಕಾಣಿಸಿಕೊಂಡ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಅಲ್ಲದೆ ಪ್ರಗ್ಯಾ ಠಾಕೂರ್ ಎರಡು ವರ್ಷದ ಹಿಂದೆ ಗೋ ಮೂತ್ರ ಮತ್ತು ಇತರ ಗೋ ಉತ್ಪನ್ನಗಳ ಮಿಶ್ರಣಗಳು ತನ್ನನ್ನು ಕ್ಯಾನ್ಸರ್‌ನಿಂದ ಗುಣಪಡಿಸಿದವು ಎಂಬ ಹೇಳಿಕೆ ನೀಡಿದ್ದರು.

ಕೋವಿಡ್‌ನ ಚಿಕಿತ್ಸೆ ಅಥವಾ ತಡೆಗಟ್ಟುವಿಕೆಗೆ ಗೋವಿನ ಸಗಣಿ ಅಥವಾ ಮೂತ್ರವು ಸಹಾಯ ಮಾಡುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಹೇಳಿದೆ. “ಗೋವಿನ ಸಗಣಿ ಅಥವಾ ಮೂತ್ರವು COVID-19 ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂಬುದಕ್ಕೆ ಯಾವುದೇ ದೃಢವಾದ ವೈಜ್ಞಾನಿಕ ಪುರಾವೆಗಳಿಲ್ಲ” ಎಂದು ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥ ಡಾ.ಜೆ.ಎ.ಜಯಲಾಲ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಇನ್ನು ಮಣಿಪುರದ ಬಿಜೆಪಿ ಅಧ್ಯಕ್ಷ ಸೈಖೋಮ್ ತಿಕೇಂದ್ರ ಸಿಂಗ್ ಕೋವಿಡ್‌ನಿಂದ ಮೃತಪಟ್ಟಾಗ ಇಬ್ಬರು ಸಾಮಾಜಿಕ ಕಾರ್ಯಕರ್ತರು ಗೋ ಮೂತ್ರ ನಿಮ್ಮನ್ನು ಉಳಿಸಲಿಲ್ಲ ಎಂದು ಫೇಸ್‌ಬುಕ್‌ನಲ್ಲಿ ಬರೆದುದ್ದಕ್ಕೆ ಅವರನ್ನ ಬಂಧಿಸಲಾಗಿತ್ತು. “ಹಸುವಿನ ಸೆಗಣಿ, ಹಸುವಿನ ಗಂಜಲ ಕೆಲಸ ಮಾಡುವುದಿಲ್ಲ. ಆಧಾರವಿಲ್ಲದ ವಾದಗಳು. ನಾನು ನಾಳೆ ಮೀನು ತಿನ್ನುತ್ತೇನೆ” ಎಂದು ಫೇಸ್‌ಬುಕ್‌ನಲ್ಲಿ ವಾಂಗ್‌ಖೆಮ್ ಬರೆದಿದ್ದರು ಎನ್ನಲಾಗಿದೆ. ಅದೇ ರೀತಿ ಎರೆಂಡ್ರೊ ಲೈಚೋಂಬಮ್‌ ಕೂಡ “ಹಸುವಿನ ಸೆಗಣಿ, ಹಸುವಿನ ಗಂಜಲದಿಂದ ಕೊರೊನಾ ವಾಸಿಯಾಗುವುದಿಲ್ಲ. ವಿಜ್ಞಾನ ಮತ್ತು ಸಾಮಾನ್ಯ ಜ್ಞಾನದಿಂದ ವಾಸಿಯಾಗುತ್ತದೆ ಪ್ರೊಫೆಸರ್‌ಜಿ, RIP” ಎಂದು ಬರೆದಿದ್ದರು. ಈ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...