Homeಮುಖಪುಟನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

- Advertisement -
- Advertisement -

ಮೇಘಾಲಯದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು, ”ನಾನು ಗೋಮಾಂಸ ತಿನ್ನುತ್ತೇನೆ. ಆದರೂ ಬಿಜೆಪಿಯಲ್ಲಿದ್ದೇನೆ. ಇದರಿಂದ ಯಾವುದೇ ಸಮಸ್ಯೆಯೂ ಆಗಿಲ್ಲ” ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿ ಸಂಸ್ಥೆ ಐಎಎನ್‌ಎಸ್‌ ನಡೆಸಿರುವ ಸಂದರ್ಶನದಲ್ಲಿ ಅರ್ನೆಸ್ಟ್ ಮಾವ್ರಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಶೇಕಡ 90ರಷ್ಟು ಕ್ರೈಸ್ತರು ಇದ್ದಾರೆ. ಇಲ್ಲಿ ಗೋಮಾಂಸ ನಿಷೇಧ, ಸಿಎಎ ಮತ್ತು ಇತರ ವಿಷಯಗಳ ಬಗ್ಗೆ ಬಿಜೆಪಿಯ ಕಠಿಣ ನಿಲುವುಗಳನ್ನು ಒಪ್ಪಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ನೀವು ನಂಬುತ್ತೀರಾ? ಎಂದು ಪ್ರಶ್ನೆ ಕೇಳಿದ್ದಾರೆ.

ಅದಕ್ಕೆ ಉತ್ತರಿಸಿರುವ ಅರ್ನೆಸ್ಟ್‌ ಮಾವ್ರಿ, ”ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ಯಾವುದೇ ಚರ್ಚ್ ದಾಳಿಗಳು ನಡೆದಿರುವುದನ್ನು ನಾವು ನೋಡಿಲ್ಲ. ಗೋಮಾಂಸ ಸೇವನೆಗೂ ಯಾವುದೇ ನಿರ್ಬಂಧವಿಲ್ಲ. ನಾನು ಗೋಮಾಂಸ ತಿನ್ನುತ್ತೇನೆ. ನಾನು ಬಿಜೆಪಿಯಲ್ಲೇ ಇದ್ದೇನೆ. ಇದರಿಂದ ಯಾವುದೇ ಸಮಸ್ಯೆಯಾಗಿದ್ದನ್ನು ನಾನು ಕಂಡಿಲ್ಲ. ಮೇಘಾಲಯದ ಜನತೆ ಈ ಬಾರಿ ಬಿಜೆಪಿ ಜೊತೆಗಿದ್ದಾರೆ. ಅದನ್ನು ಮಾರ್ಚ್ 2ರಂದು ಎಲ್ಲರೂ ನೋಡಲಿದ್ದಾರೆ” ಎಂದು ಹೇಳಿದ್ದಾರೆ.

ಫೆಬ್ರುವರಿ 27ರಂದು ಮೇಘಾಲಯ ವಿಧಾನಸಭೆಯ ಮತದಾನ ನಡೆಯಲಿದೆ. ಮಾರ್ಚ್‌ 2ರಂದು ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ ಬಿಜೆಪಿಯು ಎನ್‌ಪಿಪಿಯೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದ್ದು, 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.

ಇದನ್ನೂ ಓದಿ: ಒಡಿಶಾ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ

ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರಗಳಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ಈ ಹಿಂದೆ ಅಸ್ಸಾಂ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರು ಗೋಮಾಂಸ ಭಾರತದ ‘ರಾಷ್ಟ್ರೀಯ ಆಹಾರ’ ಎಂದು ಹೇಳಿ ಅಚ್ಚರಿ ಮೂಡಿಸಿದ್ದರು. ಅಸ್ಸಾಂನ ಬಿಜೆಪಿ ನಾಯಕ ಬನೇಂದ್ರ ಕುಮಾರ್‌ ಮುಷಾರಿ ಅವರು, ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು.

”ಗೋಮಾಂಸವನ್ನು ನಿಷೇಧಿಸಲು ಸಾಧ್ಯವಿಲ್ಲ. ಇದು ಭಾರತದ ರಾಷ್ಟ್ರೀಯ ಆಹಾರವಾಗಿದೆ” ಎಂದು ಮುಷಾರ ಹೇಳಿದ್ದರು. ಇವರ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಮೇಲೆ ಎಫ್‌ಐಆರ್ ಕೂಡ ದಾಖಲಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...