Homeಮುಖಪುಟನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

- Advertisement -
- Advertisement -

ಮೇಘಾಲಯದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು, ”ನಾನು ಗೋಮಾಂಸ ತಿನ್ನುತ್ತೇನೆ. ಆದರೂ ಬಿಜೆಪಿಯಲ್ಲಿದ್ದೇನೆ. ಇದರಿಂದ ಯಾವುದೇ ಸಮಸ್ಯೆಯೂ ಆಗಿಲ್ಲ” ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿ ಸಂಸ್ಥೆ ಐಎಎನ್‌ಎಸ್‌ ನಡೆಸಿರುವ ಸಂದರ್ಶನದಲ್ಲಿ ಅರ್ನೆಸ್ಟ್ ಮಾವ್ರಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಶೇಕಡ 90ರಷ್ಟು ಕ್ರೈಸ್ತರು ಇದ್ದಾರೆ. ಇಲ್ಲಿ ಗೋಮಾಂಸ ನಿಷೇಧ, ಸಿಎಎ ಮತ್ತು ಇತರ ವಿಷಯಗಳ ಬಗ್ಗೆ ಬಿಜೆಪಿಯ ಕಠಿಣ ನಿಲುವುಗಳನ್ನು ಒಪ್ಪಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ನೀವು ನಂಬುತ್ತೀರಾ? ಎಂದು ಪ್ರಶ್ನೆ ಕೇಳಿದ್ದಾರೆ.

ಅದಕ್ಕೆ ಉತ್ತರಿಸಿರುವ ಅರ್ನೆಸ್ಟ್‌ ಮಾವ್ರಿ, ”ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ಯಾವುದೇ ಚರ್ಚ್ ದಾಳಿಗಳು ನಡೆದಿರುವುದನ್ನು ನಾವು ನೋಡಿಲ್ಲ. ಗೋಮಾಂಸ ಸೇವನೆಗೂ ಯಾವುದೇ ನಿರ್ಬಂಧವಿಲ್ಲ. ನಾನು ಗೋಮಾಂಸ ತಿನ್ನುತ್ತೇನೆ. ನಾನು ಬಿಜೆಪಿಯಲ್ಲೇ ಇದ್ದೇನೆ. ಇದರಿಂದ ಯಾವುದೇ ಸಮಸ್ಯೆಯಾಗಿದ್ದನ್ನು ನಾನು ಕಂಡಿಲ್ಲ. ಮೇಘಾಲಯದ ಜನತೆ ಈ ಬಾರಿ ಬಿಜೆಪಿ ಜೊತೆಗಿದ್ದಾರೆ. ಅದನ್ನು ಮಾರ್ಚ್ 2ರಂದು ಎಲ್ಲರೂ ನೋಡಲಿದ್ದಾರೆ” ಎಂದು ಹೇಳಿದ್ದಾರೆ.

ಫೆಬ್ರುವರಿ 27ರಂದು ಮೇಘಾಲಯ ವಿಧಾನಸಭೆಯ ಮತದಾನ ನಡೆಯಲಿದೆ. ಮಾರ್ಚ್‌ 2ರಂದು ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ ಬಿಜೆಪಿಯು ಎನ್‌ಪಿಪಿಯೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದ್ದು, 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.

ಇದನ್ನೂ ಓದಿ: ಒಡಿಶಾ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ

ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರಗಳಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ಈ ಹಿಂದೆ ಅಸ್ಸಾಂ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರು ಗೋಮಾಂಸ ಭಾರತದ ‘ರಾಷ್ಟ್ರೀಯ ಆಹಾರ’ ಎಂದು ಹೇಳಿ ಅಚ್ಚರಿ ಮೂಡಿಸಿದ್ದರು. ಅಸ್ಸಾಂನ ಬಿಜೆಪಿ ನಾಯಕ ಬನೇಂದ್ರ ಕುಮಾರ್‌ ಮುಷಾರಿ ಅವರು, ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು.

”ಗೋಮಾಂಸವನ್ನು ನಿಷೇಧಿಸಲು ಸಾಧ್ಯವಿಲ್ಲ. ಇದು ಭಾರತದ ರಾಷ್ಟ್ರೀಯ ಆಹಾರವಾಗಿದೆ” ಎಂದು ಮುಷಾರ ಹೇಳಿದ್ದರು. ಇವರ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಮೇಲೆ ಎಫ್‌ಐಆರ್ ಕೂಡ ದಾಖಲಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...