Homeಮುಖಪುಟನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

- Advertisement -
- Advertisement -

ಮೇಘಾಲಯದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು, ”ನಾನು ಗೋಮಾಂಸ ತಿನ್ನುತ್ತೇನೆ. ಆದರೂ ಬಿಜೆಪಿಯಲ್ಲಿದ್ದೇನೆ. ಇದರಿಂದ ಯಾವುದೇ ಸಮಸ್ಯೆಯೂ ಆಗಿಲ್ಲ” ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿ ಸಂಸ್ಥೆ ಐಎಎನ್‌ಎಸ್‌ ನಡೆಸಿರುವ ಸಂದರ್ಶನದಲ್ಲಿ ಅರ್ನೆಸ್ಟ್ ಮಾವ್ರಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಶೇಕಡ 90ರಷ್ಟು ಕ್ರೈಸ್ತರು ಇದ್ದಾರೆ. ಇಲ್ಲಿ ಗೋಮಾಂಸ ನಿಷೇಧ, ಸಿಎಎ ಮತ್ತು ಇತರ ವಿಷಯಗಳ ಬಗ್ಗೆ ಬಿಜೆಪಿಯ ಕಠಿಣ ನಿಲುವುಗಳನ್ನು ಒಪ್ಪಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ನೀವು ನಂಬುತ್ತೀರಾ? ಎಂದು ಪ್ರಶ್ನೆ ಕೇಳಿದ್ದಾರೆ.

ಅದಕ್ಕೆ ಉತ್ತರಿಸಿರುವ ಅರ್ನೆಸ್ಟ್‌ ಮಾವ್ರಿ, ”ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ಯಾವುದೇ ಚರ್ಚ್ ದಾಳಿಗಳು ನಡೆದಿರುವುದನ್ನು ನಾವು ನೋಡಿಲ್ಲ. ಗೋಮಾಂಸ ಸೇವನೆಗೂ ಯಾವುದೇ ನಿರ್ಬಂಧವಿಲ್ಲ. ನಾನು ಗೋಮಾಂಸ ತಿನ್ನುತ್ತೇನೆ. ನಾನು ಬಿಜೆಪಿಯಲ್ಲೇ ಇದ್ದೇನೆ. ಇದರಿಂದ ಯಾವುದೇ ಸಮಸ್ಯೆಯಾಗಿದ್ದನ್ನು ನಾನು ಕಂಡಿಲ್ಲ. ಮೇಘಾಲಯದ ಜನತೆ ಈ ಬಾರಿ ಬಿಜೆಪಿ ಜೊತೆಗಿದ್ದಾರೆ. ಅದನ್ನು ಮಾರ್ಚ್ 2ರಂದು ಎಲ್ಲರೂ ನೋಡಲಿದ್ದಾರೆ” ಎಂದು ಹೇಳಿದ್ದಾರೆ.

ಫೆಬ್ರುವರಿ 27ರಂದು ಮೇಘಾಲಯ ವಿಧಾನಸಭೆಯ ಮತದಾನ ನಡೆಯಲಿದೆ. ಮಾರ್ಚ್‌ 2ರಂದು ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ ಬಿಜೆಪಿಯು ಎನ್‌ಪಿಪಿಯೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದ್ದು, 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.

ಇದನ್ನೂ ಓದಿ: ಒಡಿಶಾ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ

ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರಗಳಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ಈ ಹಿಂದೆ ಅಸ್ಸಾಂ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರು ಗೋಮಾಂಸ ಭಾರತದ ‘ರಾಷ್ಟ್ರೀಯ ಆಹಾರ’ ಎಂದು ಹೇಳಿ ಅಚ್ಚರಿ ಮೂಡಿಸಿದ್ದರು. ಅಸ್ಸಾಂನ ಬಿಜೆಪಿ ನಾಯಕ ಬನೇಂದ್ರ ಕುಮಾರ್‌ ಮುಷಾರಿ ಅವರು, ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು.

”ಗೋಮಾಂಸವನ್ನು ನಿಷೇಧಿಸಲು ಸಾಧ್ಯವಿಲ್ಲ. ಇದು ಭಾರತದ ರಾಷ್ಟ್ರೀಯ ಆಹಾರವಾಗಿದೆ” ಎಂದು ಮುಷಾರ ಹೇಳಿದ್ದರು. ಇವರ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಮೇಲೆ ಎಫ್‌ಐಆರ್ ಕೂಡ ದಾಖಲಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...