Homeಮುಖಪುಟನಮ್ಮಿಬ್ಬರ ಸ್ನೇಹದ ವಿರುದ್ಧವಿದ್ದ ಕುಟುಂಬವೇ ಆಕೆಯ ಕೊಲೆ ಮಾಡಿದೆ: ಪೊಲೀಸರಿಗೆ ಪತ್ರ ಬರೆದ ಹತ್ರಾಸ್ ಆರೋಪಿ

ನಮ್ಮಿಬ್ಬರ ಸ್ನೇಹದ ವಿರುದ್ಧವಿದ್ದ ಕುಟುಂಬವೇ ಆಕೆಯ ಕೊಲೆ ಮಾಡಿದೆ: ಪೊಲೀಸರಿಗೆ ಪತ್ರ ಬರೆದ ಹತ್ರಾಸ್ ಆರೋಪಿ

ಅವರ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ನಮಗೆ ಯಾವುದೇ ಪರಿಹಾರ ಅಥವಾ ಹಣ ಬೇಕಾಗಿಲ್ಲ. ನಮಗೆ ನ್ಯಾಯ ಬೇಕು ಎಂದು ಸಂತ್ರಸ್ತೆಯ ತಂದೆ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಗೆ ಪತ್ರ ಬರೆದಿದ್ದು, ಈ ಪ್ರಕರಣದಲ್ಲಿ ತಾನು ಮತ್ತು ಇತರ ಮೂವರನ್ನು ಬಲಿಪಶು ಮಾಡಲಾಗಿದೆ ಎಂದು ಹೇಳಿದ್ದಾನೆ. ಅಲ್ಲದೇ ನಮ್ಮಿಬ್ಬರ ಸ್ನೇಹವನ್ನು ಒಪ್ಪದ ಕಾರಣಕ್ಕೆ ಯುವತಿಯನ್ನು ತಾಯಿ ಮತ್ತು ಸಹೋದರ ಸೇರಿ ಹಿಂಸಿಸಿದ್ದಾರೆ ಎಂದು ಆರೋಪಿಸಿದ್ದಾನೆ.

ಆರೋಪಿಗಳಲ್ಲಿ ಒಬ್ಬನು ಸಂತ್ರಸ್ತೆಯ ಕುಟುಂಬಕ್ಕೆ ಈ ಹಿಂದೆಯೆ ಪರಿಚಯವಿದ್ದುದ್ದಕ್ಕೆ ಪುರಾವೆಗಳಿವೆ ಎಂದು ಪೊಲೀಸರು ಹೇಳಿಕೊಂಡ ಬೆನ್ನಿಗೆ ಈ ಪತ್ರ ಹೊರಬಿದ್ದಿದೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಯುವತಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ತಾನು ಮತ್ತು ಸಂತ್ರಸ್ತೆ ಯುವತಿ “ಸ್ನೇಹಿತರು” ಎಂದು ಹೇಳಿರುವ ಆರೋಪಿ ಸಂದೀಪ್ ಠಾಕೂರ್, “ಭೇಟಿಯ ಹೊರತಾಗಿಯು, ನಾವು ಕೆಲವೊಮ್ಮೆ ಫೋನ್‌ನಲ್ಲಿ ಮಾತನಾಡಿಕೊಳ್ಳುತ್ತಿದ್ದೆವು” ಎಂದು ಪತ್ರದಲ್ಲಿ ಹೇಳಿದ್ದಾನೆ.

ಆರೋಪಿ ಸಂದೀಪ್ ಠಾಕೂರ್ ಜೊತೆ ಯುವತಿಯ ಸಹೋದರ ಸಂಪರ್ಕ ಹೊಂದಿರುವುದು ಮೊಬೈಲ್ ಕಾಲ್ ದಾಖಲೆಗಳು ಬಹಿರಂಗಪಡಿಸುತ್ತವೆ ಎಂದಿರುವ ಯುಪಿ ಪೊಲೀಸರು, ಕಳೆದ ವರ್ಷ ಅಕ್ಟೋಬರ್‌ನಿಂದ ಮಾರ್ಚ್‌ವರೆಗೆ ಯುವತಿಯ ಸಹೋದರ ಮತ್ತು ಸಂದೀಪ್ ಠಾಕೂರ್ ನಡುವೆ ಸುಮಾರು 104 ಕರೆಗಳನ್ನು ಮಾಡಲಾಗಿದೆ ಎಂದಿದ್ದಾರೆ.

Photo Courtesy: The Guardian

ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

“ಇದರ ನಂತರ ನಾವಿಬ್ಬರು ಸ್ನೇಹ ಹೊಂದಿದ್ದಕ್ಕಾಗಿ ಯುವತಿಯ ತಾಯಿ ಮತ್ತು ಸಹೋದರ ಯುವತಿಯನ್ನು ಕ್ರೂರವಾಗಿ ಥಳಿಸಿ ಗಾಯಗೊಳಿಸಿದ್ದಾರೆ ಎಂದು ಗ್ರಾಮಸ್ಥರ ಮೂಲಕ ತಿಳಿದುಕೊಂಡೆ. ನಾನು ಯುವತಿಯನ್ನು ಎಂದಿಗೂ ಥಳಿಸಿಲ್ಲ ಹಾಗೂ ತಪ್ಪಾಗಿ ನಡೆದುಕೊಂಡಿಲ್ಲ. ಯುವತಿಯ ತಾಯಿ ಮತ್ತು ಸಹೋದರ ನನ್ನ ಮೇಲೆ ಮತ್ತು ಇತರ ಮೂವರನ್ನು ಸುಳ್ಳು ಆರೋಪ ಮಾಡಿ ನಮ್ಮನ್ನು ಜೈಲಿಗೆ ಕಳುಹಿಸಿದ್ದಾರೆ. ನಾವೆಲ್ಲರೂ ನಿರಪರಾಧಿಗಳು. ದಯವಿಟ್ಟು ತನಿಖೆ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡುವಂತೆ ವಿನಂತಿಸುತ್ತೇವೆ” ಎಂದು ಬರೆದಿದ್ದಾನೆ.

ಆರೋಪಿಗಳು ಇರುವ ಅಲಿಗಡ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಆರೋಪಿಗಳು ಹತ್ರಾಸ್ ಪೊಲೀಸರಿಗೆ ಪತ್ರ ಬರೆದಿರುವುದನ್ನು ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಆರೋಪಿಗಳು ನಿನ್ನೆ ಸಂಜೆ ಹತ್ರಾಸ್ ಪೊಲೀಸ್ ಅಧೀಕ್ಷಕರಿಗೆ ತಮ್ಮ ಪತ್ರವನ್ನು ಕಳುಹಿಸಿದ್ದು, ಕಾನೂನಿನ ಪ್ರಕಾರ ನಾವು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಿದ್ದೇವೆ. ಮುಂದಿನದು ತನಿಖಾ ಸಂಸ್ಥೆಗಳು ನೋಡಿಕೊಳ್ಳುತ್ತವೆ” ಎಂದು ಅಲಿಗಡ್ ಜೈಲಿನ ಹಿರಿಯ ಅಧೀಕ್ಷಕ ಅಲೋಕ್ ಸಿಂಗ್ ತಿಳಿಸಿದ್ದಾರೆ.

ಅತ್ಯಾಚಾರ ಆರೋಪಿಗಳು ಮಾಡಿದ ಆರೋಪಗಳನ್ನು ಸಂತ್ರಸ್ತೆಯ ತಂದೆ ನಿರಾಕರಿಸಿದ್ದಾರೆ. “ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಈಗ ಅವರು ನಮ್ಮನ್ನು ಕೆಣಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ. ಅವರ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ನಮಗೆ ಯಾವುದೇ ಪರಿಹಾರ ಅಥವಾ ಹಣ ಬೇಕಾಗಿಲ್ಲ. ನಮಗೆ ನ್ಯಾಯ ಬೇಕು” ಎಂದಿದ್ದಾರೆ.

ಹತ್ರಾಸ್ ಪ್ರಕರಣದಲ್ಲಿ ನಡೆಯುತ್ತಿರುವ ಹೊಸ ಬೆಳವಣಿಗೆಯ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹೆಣ್ಣುಮಗಳ ಚಾರಿತ್ರ್ಯಹರಣ ಮಾಡುವ ನಿರೂಪಣೆಗಳನ್ನು ಹರಿಯಬಿಟ್ಟು, ಅವಳ ವಿರುದ್ಧದ ಅಪರಾಧಕ್ಕೆ ಯಾರೋ ಕಾರಣ ಎಂದು ತಿರುಚಲಾಗುತ್ತಿದೆ. ಅಮಾನುಷ ಅಪರಾಧ ನಡೆದು 20 ವರ್ಷದ ಯುವತಿ ಪ್ರಾಣ ಬಿಟ್ಟಿದ್ದಾಳೆ. ಯುವತಿಯ ದೇಹವನ್ನು ಕುಟುಂಬದ ಉಪಸ್ಥಿತಿಯಿಲ್ಲದೆ ಹಾಗೂ ಒಪ್ಪಿಗೆಯಿಲ್ಲದೆ ಸುಡಲಾಗಿದೆ. ಯುವತಿಗೆ ನ್ಯಾಯ ಬೇಕಾಗಿದೆ, ಅಪನಿಂದನೆಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....