Homeಮುಖಪುಟನಮ್ಮಿಬ್ಬರ ಸ್ನೇಹದ ವಿರುದ್ಧವಿದ್ದ ಕುಟುಂಬವೇ ಆಕೆಯ ಕೊಲೆ ಮಾಡಿದೆ: ಪೊಲೀಸರಿಗೆ ಪತ್ರ ಬರೆದ ಹತ್ರಾಸ್ ಆರೋಪಿ

ನಮ್ಮಿಬ್ಬರ ಸ್ನೇಹದ ವಿರುದ್ಧವಿದ್ದ ಕುಟುಂಬವೇ ಆಕೆಯ ಕೊಲೆ ಮಾಡಿದೆ: ಪೊಲೀಸರಿಗೆ ಪತ್ರ ಬರೆದ ಹತ್ರಾಸ್ ಆರೋಪಿ

ಅವರ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ನಮಗೆ ಯಾವುದೇ ಪರಿಹಾರ ಅಥವಾ ಹಣ ಬೇಕಾಗಿಲ್ಲ. ನಮಗೆ ನ್ಯಾಯ ಬೇಕು ಎಂದು ಸಂತ್ರಸ್ತೆಯ ತಂದೆ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಗೆ ಪತ್ರ ಬರೆದಿದ್ದು, ಈ ಪ್ರಕರಣದಲ್ಲಿ ತಾನು ಮತ್ತು ಇತರ ಮೂವರನ್ನು ಬಲಿಪಶು ಮಾಡಲಾಗಿದೆ ಎಂದು ಹೇಳಿದ್ದಾನೆ. ಅಲ್ಲದೇ ನಮ್ಮಿಬ್ಬರ ಸ್ನೇಹವನ್ನು ಒಪ್ಪದ ಕಾರಣಕ್ಕೆ ಯುವತಿಯನ್ನು ತಾಯಿ ಮತ್ತು ಸಹೋದರ ಸೇರಿ ಹಿಂಸಿಸಿದ್ದಾರೆ ಎಂದು ಆರೋಪಿಸಿದ್ದಾನೆ.

ಆರೋಪಿಗಳಲ್ಲಿ ಒಬ್ಬನು ಸಂತ್ರಸ್ತೆಯ ಕುಟುಂಬಕ್ಕೆ ಈ ಹಿಂದೆಯೆ ಪರಿಚಯವಿದ್ದುದ್ದಕ್ಕೆ ಪುರಾವೆಗಳಿವೆ ಎಂದು ಪೊಲೀಸರು ಹೇಳಿಕೊಂಡ ಬೆನ್ನಿಗೆ ಈ ಪತ್ರ ಹೊರಬಿದ್ದಿದೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಯುವತಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ತಾನು ಮತ್ತು ಸಂತ್ರಸ್ತೆ ಯುವತಿ “ಸ್ನೇಹಿತರು” ಎಂದು ಹೇಳಿರುವ ಆರೋಪಿ ಸಂದೀಪ್ ಠಾಕೂರ್, “ಭೇಟಿಯ ಹೊರತಾಗಿಯು, ನಾವು ಕೆಲವೊಮ್ಮೆ ಫೋನ್‌ನಲ್ಲಿ ಮಾತನಾಡಿಕೊಳ್ಳುತ್ತಿದ್ದೆವು” ಎಂದು ಪತ್ರದಲ್ಲಿ ಹೇಳಿದ್ದಾನೆ.

ಆರೋಪಿ ಸಂದೀಪ್ ಠಾಕೂರ್ ಜೊತೆ ಯುವತಿಯ ಸಹೋದರ ಸಂಪರ್ಕ ಹೊಂದಿರುವುದು ಮೊಬೈಲ್ ಕಾಲ್ ದಾಖಲೆಗಳು ಬಹಿರಂಗಪಡಿಸುತ್ತವೆ ಎಂದಿರುವ ಯುಪಿ ಪೊಲೀಸರು, ಕಳೆದ ವರ್ಷ ಅಕ್ಟೋಬರ್‌ನಿಂದ ಮಾರ್ಚ್‌ವರೆಗೆ ಯುವತಿಯ ಸಹೋದರ ಮತ್ತು ಸಂದೀಪ್ ಠಾಕೂರ್ ನಡುವೆ ಸುಮಾರು 104 ಕರೆಗಳನ್ನು ಮಾಡಲಾಗಿದೆ ಎಂದಿದ್ದಾರೆ.

Photo Courtesy: The Guardian

ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

“ಇದರ ನಂತರ ನಾವಿಬ್ಬರು ಸ್ನೇಹ ಹೊಂದಿದ್ದಕ್ಕಾಗಿ ಯುವತಿಯ ತಾಯಿ ಮತ್ತು ಸಹೋದರ ಯುವತಿಯನ್ನು ಕ್ರೂರವಾಗಿ ಥಳಿಸಿ ಗಾಯಗೊಳಿಸಿದ್ದಾರೆ ಎಂದು ಗ್ರಾಮಸ್ಥರ ಮೂಲಕ ತಿಳಿದುಕೊಂಡೆ. ನಾನು ಯುವತಿಯನ್ನು ಎಂದಿಗೂ ಥಳಿಸಿಲ್ಲ ಹಾಗೂ ತಪ್ಪಾಗಿ ನಡೆದುಕೊಂಡಿಲ್ಲ. ಯುವತಿಯ ತಾಯಿ ಮತ್ತು ಸಹೋದರ ನನ್ನ ಮೇಲೆ ಮತ್ತು ಇತರ ಮೂವರನ್ನು ಸುಳ್ಳು ಆರೋಪ ಮಾಡಿ ನಮ್ಮನ್ನು ಜೈಲಿಗೆ ಕಳುಹಿಸಿದ್ದಾರೆ. ನಾವೆಲ್ಲರೂ ನಿರಪರಾಧಿಗಳು. ದಯವಿಟ್ಟು ತನಿಖೆ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡುವಂತೆ ವಿನಂತಿಸುತ್ತೇವೆ” ಎಂದು ಬರೆದಿದ್ದಾನೆ.

ಆರೋಪಿಗಳು ಇರುವ ಅಲಿಗಡ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಆರೋಪಿಗಳು ಹತ್ರಾಸ್ ಪೊಲೀಸರಿಗೆ ಪತ್ರ ಬರೆದಿರುವುದನ್ನು ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಆರೋಪಿಗಳು ನಿನ್ನೆ ಸಂಜೆ ಹತ್ರಾಸ್ ಪೊಲೀಸ್ ಅಧೀಕ್ಷಕರಿಗೆ ತಮ್ಮ ಪತ್ರವನ್ನು ಕಳುಹಿಸಿದ್ದು, ಕಾನೂನಿನ ಪ್ರಕಾರ ನಾವು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಿದ್ದೇವೆ. ಮುಂದಿನದು ತನಿಖಾ ಸಂಸ್ಥೆಗಳು ನೋಡಿಕೊಳ್ಳುತ್ತವೆ” ಎಂದು ಅಲಿಗಡ್ ಜೈಲಿನ ಹಿರಿಯ ಅಧೀಕ್ಷಕ ಅಲೋಕ್ ಸಿಂಗ್ ತಿಳಿಸಿದ್ದಾರೆ.

ಅತ್ಯಾಚಾರ ಆರೋಪಿಗಳು ಮಾಡಿದ ಆರೋಪಗಳನ್ನು ಸಂತ್ರಸ್ತೆಯ ತಂದೆ ನಿರಾಕರಿಸಿದ್ದಾರೆ. “ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಈಗ ಅವರು ನಮ್ಮನ್ನು ಕೆಣಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ. ಅವರ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ನಮಗೆ ಯಾವುದೇ ಪರಿಹಾರ ಅಥವಾ ಹಣ ಬೇಕಾಗಿಲ್ಲ. ನಮಗೆ ನ್ಯಾಯ ಬೇಕು” ಎಂದಿದ್ದಾರೆ.

ಹತ್ರಾಸ್ ಪ್ರಕರಣದಲ್ಲಿ ನಡೆಯುತ್ತಿರುವ ಹೊಸ ಬೆಳವಣಿಗೆಯ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹೆಣ್ಣುಮಗಳ ಚಾರಿತ್ರ್ಯಹರಣ ಮಾಡುವ ನಿರೂಪಣೆಗಳನ್ನು ಹರಿಯಬಿಟ್ಟು, ಅವಳ ವಿರುದ್ಧದ ಅಪರಾಧಕ್ಕೆ ಯಾರೋ ಕಾರಣ ಎಂದು ತಿರುಚಲಾಗುತ್ತಿದೆ. ಅಮಾನುಷ ಅಪರಾಧ ನಡೆದು 20 ವರ್ಷದ ಯುವತಿ ಪ್ರಾಣ ಬಿಟ್ಟಿದ್ದಾಳೆ. ಯುವತಿಯ ದೇಹವನ್ನು ಕುಟುಂಬದ ಉಪಸ್ಥಿತಿಯಿಲ್ಲದೆ ಹಾಗೂ ಒಪ್ಪಿಗೆಯಿಲ್ಲದೆ ಸುಡಲಾಗಿದೆ. ಯುವತಿಗೆ ನ್ಯಾಯ ಬೇಕಾಗಿದೆ, ಅಪನಿಂದನೆಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...