Homeಮುಖಪುಟನಮ್ಮಿಬ್ಬರ ಸ್ನೇಹದ ವಿರುದ್ಧವಿದ್ದ ಕುಟುಂಬವೇ ಆಕೆಯ ಕೊಲೆ ಮಾಡಿದೆ: ಪೊಲೀಸರಿಗೆ ಪತ್ರ ಬರೆದ ಹತ್ರಾಸ್ ಆರೋಪಿ

ನಮ್ಮಿಬ್ಬರ ಸ್ನೇಹದ ವಿರುದ್ಧವಿದ್ದ ಕುಟುಂಬವೇ ಆಕೆಯ ಕೊಲೆ ಮಾಡಿದೆ: ಪೊಲೀಸರಿಗೆ ಪತ್ರ ಬರೆದ ಹತ್ರಾಸ್ ಆರೋಪಿ

ಅವರ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ನಮಗೆ ಯಾವುದೇ ಪರಿಹಾರ ಅಥವಾ ಹಣ ಬೇಕಾಗಿಲ್ಲ. ನಮಗೆ ನ್ಯಾಯ ಬೇಕು ಎಂದು ಸಂತ್ರಸ್ತೆಯ ತಂದೆ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಗೆ ಪತ್ರ ಬರೆದಿದ್ದು, ಈ ಪ್ರಕರಣದಲ್ಲಿ ತಾನು ಮತ್ತು ಇತರ ಮೂವರನ್ನು ಬಲಿಪಶು ಮಾಡಲಾಗಿದೆ ಎಂದು ಹೇಳಿದ್ದಾನೆ. ಅಲ್ಲದೇ ನಮ್ಮಿಬ್ಬರ ಸ್ನೇಹವನ್ನು ಒಪ್ಪದ ಕಾರಣಕ್ಕೆ ಯುವತಿಯನ್ನು ತಾಯಿ ಮತ್ತು ಸಹೋದರ ಸೇರಿ ಹಿಂಸಿಸಿದ್ದಾರೆ ಎಂದು ಆರೋಪಿಸಿದ್ದಾನೆ.

ಆರೋಪಿಗಳಲ್ಲಿ ಒಬ್ಬನು ಸಂತ್ರಸ್ತೆಯ ಕುಟುಂಬಕ್ಕೆ ಈ ಹಿಂದೆಯೆ ಪರಿಚಯವಿದ್ದುದ್ದಕ್ಕೆ ಪುರಾವೆಗಳಿವೆ ಎಂದು ಪೊಲೀಸರು ಹೇಳಿಕೊಂಡ ಬೆನ್ನಿಗೆ ಈ ಪತ್ರ ಹೊರಬಿದ್ದಿದೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಯುವತಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ತಾನು ಮತ್ತು ಸಂತ್ರಸ್ತೆ ಯುವತಿ “ಸ್ನೇಹಿತರು” ಎಂದು ಹೇಳಿರುವ ಆರೋಪಿ ಸಂದೀಪ್ ಠಾಕೂರ್, “ಭೇಟಿಯ ಹೊರತಾಗಿಯು, ನಾವು ಕೆಲವೊಮ್ಮೆ ಫೋನ್‌ನಲ್ಲಿ ಮಾತನಾಡಿಕೊಳ್ಳುತ್ತಿದ್ದೆವು” ಎಂದು ಪತ್ರದಲ್ಲಿ ಹೇಳಿದ್ದಾನೆ.

ಆರೋಪಿ ಸಂದೀಪ್ ಠಾಕೂರ್ ಜೊತೆ ಯುವತಿಯ ಸಹೋದರ ಸಂಪರ್ಕ ಹೊಂದಿರುವುದು ಮೊಬೈಲ್ ಕಾಲ್ ದಾಖಲೆಗಳು ಬಹಿರಂಗಪಡಿಸುತ್ತವೆ ಎಂದಿರುವ ಯುಪಿ ಪೊಲೀಸರು, ಕಳೆದ ವರ್ಷ ಅಕ್ಟೋಬರ್‌ನಿಂದ ಮಾರ್ಚ್‌ವರೆಗೆ ಯುವತಿಯ ಸಹೋದರ ಮತ್ತು ಸಂದೀಪ್ ಠಾಕೂರ್ ನಡುವೆ ಸುಮಾರು 104 ಕರೆಗಳನ್ನು ಮಾಡಲಾಗಿದೆ ಎಂದಿದ್ದಾರೆ.

Photo Courtesy: The Guardian

ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

“ಇದರ ನಂತರ ನಾವಿಬ್ಬರು ಸ್ನೇಹ ಹೊಂದಿದ್ದಕ್ಕಾಗಿ ಯುವತಿಯ ತಾಯಿ ಮತ್ತು ಸಹೋದರ ಯುವತಿಯನ್ನು ಕ್ರೂರವಾಗಿ ಥಳಿಸಿ ಗಾಯಗೊಳಿಸಿದ್ದಾರೆ ಎಂದು ಗ್ರಾಮಸ್ಥರ ಮೂಲಕ ತಿಳಿದುಕೊಂಡೆ. ನಾನು ಯುವತಿಯನ್ನು ಎಂದಿಗೂ ಥಳಿಸಿಲ್ಲ ಹಾಗೂ ತಪ್ಪಾಗಿ ನಡೆದುಕೊಂಡಿಲ್ಲ. ಯುವತಿಯ ತಾಯಿ ಮತ್ತು ಸಹೋದರ ನನ್ನ ಮೇಲೆ ಮತ್ತು ಇತರ ಮೂವರನ್ನು ಸುಳ್ಳು ಆರೋಪ ಮಾಡಿ ನಮ್ಮನ್ನು ಜೈಲಿಗೆ ಕಳುಹಿಸಿದ್ದಾರೆ. ನಾವೆಲ್ಲರೂ ನಿರಪರಾಧಿಗಳು. ದಯವಿಟ್ಟು ತನಿಖೆ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡುವಂತೆ ವಿನಂತಿಸುತ್ತೇವೆ” ಎಂದು ಬರೆದಿದ್ದಾನೆ.

ಆರೋಪಿಗಳು ಇರುವ ಅಲಿಗಡ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಆರೋಪಿಗಳು ಹತ್ರಾಸ್ ಪೊಲೀಸರಿಗೆ ಪತ್ರ ಬರೆದಿರುವುದನ್ನು ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಆರೋಪಿಗಳು ನಿನ್ನೆ ಸಂಜೆ ಹತ್ರಾಸ್ ಪೊಲೀಸ್ ಅಧೀಕ್ಷಕರಿಗೆ ತಮ್ಮ ಪತ್ರವನ್ನು ಕಳುಹಿಸಿದ್ದು, ಕಾನೂನಿನ ಪ್ರಕಾರ ನಾವು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಿದ್ದೇವೆ. ಮುಂದಿನದು ತನಿಖಾ ಸಂಸ್ಥೆಗಳು ನೋಡಿಕೊಳ್ಳುತ್ತವೆ” ಎಂದು ಅಲಿಗಡ್ ಜೈಲಿನ ಹಿರಿಯ ಅಧೀಕ್ಷಕ ಅಲೋಕ್ ಸಿಂಗ್ ತಿಳಿಸಿದ್ದಾರೆ.

ಅತ್ಯಾಚಾರ ಆರೋಪಿಗಳು ಮಾಡಿದ ಆರೋಪಗಳನ್ನು ಸಂತ್ರಸ್ತೆಯ ತಂದೆ ನಿರಾಕರಿಸಿದ್ದಾರೆ. “ನಾನು ನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಈಗ ಅವರು ನಮ್ಮನ್ನು ಕೆಣಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ. ಅವರ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ನಮಗೆ ಯಾವುದೇ ಪರಿಹಾರ ಅಥವಾ ಹಣ ಬೇಕಾಗಿಲ್ಲ. ನಮಗೆ ನ್ಯಾಯ ಬೇಕು” ಎಂದಿದ್ದಾರೆ.

ಹತ್ರಾಸ್ ಪ್ರಕರಣದಲ್ಲಿ ನಡೆಯುತ್ತಿರುವ ಹೊಸ ಬೆಳವಣಿಗೆಯ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹೆಣ್ಣುಮಗಳ ಚಾರಿತ್ರ್ಯಹರಣ ಮಾಡುವ ನಿರೂಪಣೆಗಳನ್ನು ಹರಿಯಬಿಟ್ಟು, ಅವಳ ವಿರುದ್ಧದ ಅಪರಾಧಕ್ಕೆ ಯಾರೋ ಕಾರಣ ಎಂದು ತಿರುಚಲಾಗುತ್ತಿದೆ. ಅಮಾನುಷ ಅಪರಾಧ ನಡೆದು 20 ವರ್ಷದ ಯುವತಿ ಪ್ರಾಣ ಬಿಟ್ಟಿದ್ದಾಳೆ. ಯುವತಿಯ ದೇಹವನ್ನು ಕುಟುಂಬದ ಉಪಸ್ಥಿತಿಯಿಲ್ಲದೆ ಹಾಗೂ ಒಪ್ಪಿಗೆಯಿಲ್ಲದೆ ಸುಡಲಾಗಿದೆ. ಯುವತಿಗೆ ನ್ಯಾಯ ಬೇಕಾಗಿದೆ, ಅಪನಿಂದನೆಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ವಿಡಿಯೋ ನೋಡಿ: ರಾಮ ರಾಜ್ಯ ಎಂದರೆ ದಲಿತ, ಮಹಿಳೆ, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ, ದಾಳಿ ಮಾಡುವಂತದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...