Homeಮುಖಪುಟ‘ನನ್ನೊಂದಿಗೆ ಸಹೋದರಿ ಇದ್ದಾಳೆ’: 2022ರ ಯುಪಿ ಚುನಾವಣೆಗೆ ಫಿಲ್ಮ್‌ ಡೈಲಾಗ್‌ ನೆನಪಿಸಿಕೊಂಡ ಪ್ರಿಯಾಂಕಾ ಗಾಂಧಿ

‘ನನ್ನೊಂದಿಗೆ ಸಹೋದರಿ ಇದ್ದಾಳೆ’: 2022ರ ಯುಪಿ ಚುನಾವಣೆಗೆ ಫಿಲ್ಮ್‌ ಡೈಲಾಗ್‌ ನೆನಪಿಸಿಕೊಂಡ ಪ್ರಿಯಾಂಕಾ ಗಾಂಧಿ

- Advertisement -
- Advertisement -

“ನನಗೆ ಸಹೋದರಿ ಇದ್ದಾಳೆ” (ಮೇರೆ ಪಾಸ್ ಬೆಹೆನ್ ಹೈ) ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರದಂದು ಬಾಲಿವುಡ್ ಚಲನಚಿತ್ರ ‘ದೀವಾರ್’ನ ಜನಪ್ರಿಯ ಡೈಲಾಗ್‌ ಒಂದನ್ನು ನೆನಪಿಸಿಕೊಂಡಿದ್ದಾರೆ.

‘‘ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಯಾವುದೇ ನೆಲೆಯಿಲ್ಲದ ಕಾರಣ ಕಾಂಗ್ರೆಸ್ ತನ್ನ ರ್‍ಯಾಲಿಗಳಲ್ಲಿ ಮಹಿಳೆಯರ ಬಗ್ಗೆ ಮಾತನಾಡುತ್ತಿದೆ’’ ಎಂಬ ಪ್ರತಿಸ್ಪರ್ಧಿ ಪಕ್ಷಗಳ ಟೀಕೆಗಳಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರಿಯಾಂಕ ಗಾಂಧಿ ಈ ಮಾತನ್ನು ಹೇಳಿದ್ದಾರೆ. ಇದರ ವಿಡಿಯೊವನ್ನು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಸಹೋದರರಾಗಿ ನಟಿಸಿದ ದೀವಾರ್ ಸಂಭಾಷಣೆಯನ್ನು ನೀವು ಕೇಳಿದ್ದೀರಾ ಎಂದು ಅವರು ತನ್ನನ್ನು ಸಂದರ್ಶಿಸುತ್ತಿದ್ದ ಪತ್ರಕರ್ತರನ್ನು ಉದ್ದೇಶಿಸಿ ಕೇಳಿದ್ದಾರೆ.

“ಅಮಿತಾಭ್, ಶಶಿ ಕಪೂರ್ ಅವರಿಗೆ, ‘ನನ್ನ ಬಳಿ ಕಾರು ಇದೆ, ನನ್ನ ಬಳಿ ಬಂಗಲೆ ಇದೆ ಅದು ಇದು, ಇದು ಇದೆ’ ಎಂದು ಹೇಳುವಾಗ, ಶಶಿ ಕಪೂರ್ ಹೇಳುತ್ತಾರೆ, ನನಗೆ ತಾಯಿ ಇದ್ದಾರೆ ಎಂದು. ಆದ್ದರಿಂದ ನಾನು ಹೇಳುತ್ತೇನೆ. ನನ್ನ ಬಳಿ ಸಹೋದರಿ ಇದ್ದಾಳೆ” ಎಂದು ಉತ್ತರ ಪ್ರದೇಶದ ಮಹಿಳೆಯರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಈ ವಿಡಿಯೊ ಜೊತೆಗೆ , “ನನಗೆ ಸಹೋದರಿಯರಿದ್ದಾರೆ…ಸಹೋದರಿಯರು ರಾಜಕೀಯದಲ್ಲಿ ಬದಲಾವಣೆ ತರುತ್ತಾರೆ” ಎಂದು ಬರೆದಿರುವ ಅವರು “ಮಹಿಳೆ ನಾನು, ಹೋರಾಟ ಮಾಡಬಲ್ಲೆ” ಎಂಬ ಹ್ಯಾಶ್ ಟ್ಯಾಗ್‌‌ ಮಾಡಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ-2022: ಮಹಿಳೆಯರಿಗೆ ಮತ್ತೇ ಭರ್ಜರಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ

2022 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ 40% ಮೀಸಲಾತಿಯನ್ನು ಕಾಂಗ್ರೆಸ್ ಈಗಾಗಲೇ ಘೋಷಿಸಿದೆ.

ಮಂಗಳವಾರ, ಪ್ರಯಾಗ್‌ರಾಜ್‌ನಲ್ಲಿ ಮಹಿಳಾ ಸಬಲೀಕರಣದ ಕುರಿತು ಪ್ರಧಾನ ಮಂತ್ರಿಯವರ ಕಾರ್ಯಕ್ರಮವು ಮಹಿಳೆಯರ ಮುಂದೆ ಮೋದಿ ಬಾಗಿದ್ದನ್ನು ತೋರಿಸುತ್ತದೆ. ಸಹೋದರಿಯರ ಒಗ್ಗಟ್ಟಿನಿಂದ ಕ್ರಾಂತಿ ಮಾಡುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಪ್ರಿಯಾಂಕಾ ಗಾಂಧಿ ಈ ಹಿಂದೆ ‘ಶಕ್ತಿ ವಿಧಾನ’ ಎಂಬ ಶೀರ್ಷಿಕೆಯ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಮಹಿಳೆಯರಿಗಾಗಿಯೆ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ:ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...