Homeಮುಖಪುಟ‘ನನ್ನೊಂದಿಗೆ ಸಹೋದರಿ ಇದ್ದಾಳೆ’: 2022ರ ಯುಪಿ ಚುನಾವಣೆಗೆ ಫಿಲ್ಮ್‌ ಡೈಲಾಗ್‌ ನೆನಪಿಸಿಕೊಂಡ ಪ್ರಿಯಾಂಕಾ ಗಾಂಧಿ

‘ನನ್ನೊಂದಿಗೆ ಸಹೋದರಿ ಇದ್ದಾಳೆ’: 2022ರ ಯುಪಿ ಚುನಾವಣೆಗೆ ಫಿಲ್ಮ್‌ ಡೈಲಾಗ್‌ ನೆನಪಿಸಿಕೊಂಡ ಪ್ರಿಯಾಂಕಾ ಗಾಂಧಿ

- Advertisement -
- Advertisement -

“ನನಗೆ ಸಹೋದರಿ ಇದ್ದಾಳೆ” (ಮೇರೆ ಪಾಸ್ ಬೆಹೆನ್ ಹೈ) ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರದಂದು ಬಾಲಿವುಡ್ ಚಲನಚಿತ್ರ ‘ದೀವಾರ್’ನ ಜನಪ್ರಿಯ ಡೈಲಾಗ್‌ ಒಂದನ್ನು ನೆನಪಿಸಿಕೊಂಡಿದ್ದಾರೆ.

‘‘ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಯಾವುದೇ ನೆಲೆಯಿಲ್ಲದ ಕಾರಣ ಕಾಂಗ್ರೆಸ್ ತನ್ನ ರ್‍ಯಾಲಿಗಳಲ್ಲಿ ಮಹಿಳೆಯರ ಬಗ್ಗೆ ಮಾತನಾಡುತ್ತಿದೆ’’ ಎಂಬ ಪ್ರತಿಸ್ಪರ್ಧಿ ಪಕ್ಷಗಳ ಟೀಕೆಗಳಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರಿಯಾಂಕ ಗಾಂಧಿ ಈ ಮಾತನ್ನು ಹೇಳಿದ್ದಾರೆ. ಇದರ ವಿಡಿಯೊವನ್ನು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಸಹೋದರರಾಗಿ ನಟಿಸಿದ ದೀವಾರ್ ಸಂಭಾಷಣೆಯನ್ನು ನೀವು ಕೇಳಿದ್ದೀರಾ ಎಂದು ಅವರು ತನ್ನನ್ನು ಸಂದರ್ಶಿಸುತ್ತಿದ್ದ ಪತ್ರಕರ್ತರನ್ನು ಉದ್ದೇಶಿಸಿ ಕೇಳಿದ್ದಾರೆ.

“ಅಮಿತಾಭ್, ಶಶಿ ಕಪೂರ್ ಅವರಿಗೆ, ‘ನನ್ನ ಬಳಿ ಕಾರು ಇದೆ, ನನ್ನ ಬಳಿ ಬಂಗಲೆ ಇದೆ ಅದು ಇದು, ಇದು ಇದೆ’ ಎಂದು ಹೇಳುವಾಗ, ಶಶಿ ಕಪೂರ್ ಹೇಳುತ್ತಾರೆ, ನನಗೆ ತಾಯಿ ಇದ್ದಾರೆ ಎಂದು. ಆದ್ದರಿಂದ ನಾನು ಹೇಳುತ್ತೇನೆ. ನನ್ನ ಬಳಿ ಸಹೋದರಿ ಇದ್ದಾಳೆ” ಎಂದು ಉತ್ತರ ಪ್ರದೇಶದ ಮಹಿಳೆಯರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಈ ವಿಡಿಯೊ ಜೊತೆಗೆ , “ನನಗೆ ಸಹೋದರಿಯರಿದ್ದಾರೆ…ಸಹೋದರಿಯರು ರಾಜಕೀಯದಲ್ಲಿ ಬದಲಾವಣೆ ತರುತ್ತಾರೆ” ಎಂದು ಬರೆದಿರುವ ಅವರು “ಮಹಿಳೆ ನಾನು, ಹೋರಾಟ ಮಾಡಬಲ್ಲೆ” ಎಂಬ ಹ್ಯಾಶ್ ಟ್ಯಾಗ್‌‌ ಮಾಡಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ-2022: ಮಹಿಳೆಯರಿಗೆ ಮತ್ತೇ ಭರ್ಜರಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ

2022 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ 40% ಮೀಸಲಾತಿಯನ್ನು ಕಾಂಗ್ರೆಸ್ ಈಗಾಗಲೇ ಘೋಷಿಸಿದೆ.

ಮಂಗಳವಾರ, ಪ್ರಯಾಗ್‌ರಾಜ್‌ನಲ್ಲಿ ಮಹಿಳಾ ಸಬಲೀಕರಣದ ಕುರಿತು ಪ್ರಧಾನ ಮಂತ್ರಿಯವರ ಕಾರ್ಯಕ್ರಮವು ಮಹಿಳೆಯರ ಮುಂದೆ ಮೋದಿ ಬಾಗಿದ್ದನ್ನು ತೋರಿಸುತ್ತದೆ. ಸಹೋದರಿಯರ ಒಗ್ಗಟ್ಟಿನಿಂದ ಕ್ರಾಂತಿ ಮಾಡುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಪ್ರಿಯಾಂಕಾ ಗಾಂಧಿ ಈ ಹಿಂದೆ ‘ಶಕ್ತಿ ವಿಧಾನ’ ಎಂಬ ಶೀರ್ಷಿಕೆಯ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಮಹಿಳೆಯರಿಗಾಗಿಯೆ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ:ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...