Homeಕರ್ನಾಟಕಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ: ಬಸನಗೌಡ...

ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ: ಬಸನಗೌಡ ಯತ್ನಾಲ್

- Advertisement -
- Advertisement -

‘ನನಗೆ ಮಂತ್ರಿ ಮತ್ತು ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಯಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಬುಧವಾರ ಹೇಳಿದ್ದಾರೆ. ರಾಜ್ಯದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಈ ಹೇಳಿಕೆಯನ್ನು ಅವರು ನೀಡಿದ್ದಾರೆ.

ಯತ್ನಾಲ್ ಅವರು ಯಡಿಯೂರಪ್ಪ ಅವರನ್ನು ನಿರಂತರವಾಗಿ ಟೀಕಿಸುತ್ತಲೆ ಬಂದಿದ್ದಾರೆ. ಇದೀಗ ಯಡಿಯೂರಪ್ಪ ಅವರಿಗೆ ಉನ್ನತ ಸ್ಥಾನಮಾನ ನೀಡಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರಿಗೆ ಸ್ಥಾನಮಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅಭಿನಂಧನೆಗಳು. ಇದರ ಬಗ್ಗೆ ಯಾವುದೇ ವಿವಾದಾತ್ಮಕ ಹೇಳಿಕೆಗಳು ಇಲ್ಲ” ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದ ಹೈಕಮಾಂಡ್‌ ಎಲ್ಲವೂ ಗಮನಿಸಿ ಸೂಕ್ತ ಕಾಲಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಬಹುಮತದ ಸರ್ಕಾರ ಬರುವಂತಾಗಲು ಏನು ಮಾಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂಬ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

“ಪಕ್ಷದ ಹೈಕಮಾಂಡ್ ನಿರ್ಣಯ ತೆಗೆದುಕೊಂಡಿದ್ದರೆ ಅದಕ್ಕೆ ನಾನು ತಲೆಬಾಗುತ್ತೇನೆ. ಹೈಕಮಾಂಡ್ ಬಹಳ ಮುಂದಾಲೋಚನೆ ಮಾಡಿ ಈ ನಿರ್ಧಾರಕ್ಕೆ ಬಂದಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

“ಪ್ರಧಾನಿ 75ನೇ ಸ್ವಾತಂತ್ಯ್ರೋತ್ಸವ ಆಚರಿಸುವ ವೇಳೆ ಮಾತನಾಡುತ್ತಾ, ‘ಭವಿಷ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ನಾನು ಅಂತ್ಯ ಹಾಡುತ್ತೇನೆ’ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಅಂತಹ ಕಾಲ ಅಮೃತ ಮಹೋತ್ಸವದಿಂದ ಪ್ರಾರಂಭವಾಗುತ್ತದೆ. ನನಗೆ, ನನ್ನ ಮಕ್ಕಳಿಗೆ ಎಂಪಿ ಬೇಕು, ಎಮ್‌ಎಲ್‌ಎ ಬೇಕು, ಎಮ್‌ಎಲ್‌ಸಿ ಬೇಕು ಎನ್ನುವುದೆಲ್ಲಾ ಇನ್ನು ಮುಂದೆ ದೇಶದಲ್ಲಿ ನಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಚುನಾವಣೆ ಸಮಿತಿಯಲ್ಲಿ ಯಡಿಯೂರಪ್ಪ ಅವರು ಇದ್ದು, ಟಿಕೆಟ್‌ ಹಂಚಿಕೆಯಲ್ಲಿ ಅವರ ಅಭಿಪ್ರಾಯ ಕೂಡಾ ತೆಗೆದುಕೊಳ್ಳುತ್ತಾರೆ ಅಲ್ಲವೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಅವರು ಇದ್ದರೆ ಏನಾಯ್ತು? ಒಮ್ಮೊಮ್ಮೆ ಈ ಸಮಿತಿಯಲ್ಲಿ ಇರುವವರಿಗೂ ಟಿಕೆಟ್ ಸಿಗುವುದಿಲ್ಲ. ಅದಕ್ಕೆ ಏನು ಹೇಳುತ್ತೀರಿ? ಇದಕ್ಕೆ ಹಲವು ಉದಾಹರಣೆ ಇವೆ. ನಾನೂ ಕೂಡಾ ಕರ್ನಾಟಕದ ಚುನಾವಣಾ ಸಮಿತಿಯಲ್ಲಿ ಇದ್ದೆ, ನನಗೆ ಕೂಡಾ ಲೋಕಸಭಾ ಟಿಕೆಟ್‌ ಪಡೆಯಲು ಆಗಲಿಲ್ಲ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರಿಗೆ ಸ್ಥಾನಮಾನ ನೀಡಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಲ್,“ಪ್ರಧಾನ ಮಂತ್ರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

“ಯಡಿಯೂಪ್ಪ ಅವರು ಜಡ್ಜ್‌ ಸೀಟಲ್ಲಿ ಕುಳಿತಿರುವುದರಿಂದ, ಕರ್ನಾಟಕದಲ್ಲಿ ಹೆಚ್ಚಿನ ಸೀಟು ಪಡೆಯಬೇಕೆಂದರೆ ನನಗೆ ಸೇರಿದಂತೆ ಎಲ್ಲರಿಗೂ ಟಿಕೆಟ್‌ ಕೊಡುವ ಅನಿವಾರ್ಯತೆ ಬರುತ್ತದೆ. ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೀವು ಭಾವಿಸಿದ್ದೀರಾ? ಆದರೆ, ಹಾಗೇನೂ ಆಗುವುದಿಲ್ಲ. ನನಗೆ ಟಿಕೆಟ್‌ ಸಿಕ್ಕಿ, ಮುಂದಿನ ಬಾರಿಯೂ ಶಾಸಕ ಆಗುತ್ತೇನೆ. ನನಗೆ ಸಚಿವನಾಗುವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಅಭ್ಯರ್ಥಿಯಾದರೆ ಪಕ್ಷವೂ 150 ಸೀಟುಗಳನ್ನು ಪಡೆಯುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...