Homeಕರ್ನಾಟಕಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ: ಬಸನಗೌಡ...

ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ: ಬಸನಗೌಡ ಯತ್ನಾಲ್

- Advertisement -
- Advertisement -

‘ನನಗೆ ಮಂತ್ರಿ ಮತ್ತು ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಯಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಬುಧವಾರ ಹೇಳಿದ್ದಾರೆ. ರಾಜ್ಯದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಈ ಹೇಳಿಕೆಯನ್ನು ಅವರು ನೀಡಿದ್ದಾರೆ.

ಯತ್ನಾಲ್ ಅವರು ಯಡಿಯೂರಪ್ಪ ಅವರನ್ನು ನಿರಂತರವಾಗಿ ಟೀಕಿಸುತ್ತಲೆ ಬಂದಿದ್ದಾರೆ. ಇದೀಗ ಯಡಿಯೂರಪ್ಪ ಅವರಿಗೆ ಉನ್ನತ ಸ್ಥಾನಮಾನ ನೀಡಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರಿಗೆ ಸ್ಥಾನಮಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅಭಿನಂಧನೆಗಳು. ಇದರ ಬಗ್ಗೆ ಯಾವುದೇ ವಿವಾದಾತ್ಮಕ ಹೇಳಿಕೆಗಳು ಇಲ್ಲ” ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದ ಹೈಕಮಾಂಡ್‌ ಎಲ್ಲವೂ ಗಮನಿಸಿ ಸೂಕ್ತ ಕಾಲಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಬಹುಮತದ ಸರ್ಕಾರ ಬರುವಂತಾಗಲು ಏನು ಮಾಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂಬ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

“ಪಕ್ಷದ ಹೈಕಮಾಂಡ್ ನಿರ್ಣಯ ತೆಗೆದುಕೊಂಡಿದ್ದರೆ ಅದಕ್ಕೆ ನಾನು ತಲೆಬಾಗುತ್ತೇನೆ. ಹೈಕಮಾಂಡ್ ಬಹಳ ಮುಂದಾಲೋಚನೆ ಮಾಡಿ ಈ ನಿರ್ಧಾರಕ್ಕೆ ಬಂದಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

“ಪ್ರಧಾನಿ 75ನೇ ಸ್ವಾತಂತ್ಯ್ರೋತ್ಸವ ಆಚರಿಸುವ ವೇಳೆ ಮಾತನಾಡುತ್ತಾ, ‘ಭವಿಷ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ನಾನು ಅಂತ್ಯ ಹಾಡುತ್ತೇನೆ’ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಅಂತಹ ಕಾಲ ಅಮೃತ ಮಹೋತ್ಸವದಿಂದ ಪ್ರಾರಂಭವಾಗುತ್ತದೆ. ನನಗೆ, ನನ್ನ ಮಕ್ಕಳಿಗೆ ಎಂಪಿ ಬೇಕು, ಎಮ್‌ಎಲ್‌ಎ ಬೇಕು, ಎಮ್‌ಎಲ್‌ಸಿ ಬೇಕು ಎನ್ನುವುದೆಲ್ಲಾ ಇನ್ನು ಮುಂದೆ ದೇಶದಲ್ಲಿ ನಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಚುನಾವಣೆ ಸಮಿತಿಯಲ್ಲಿ ಯಡಿಯೂರಪ್ಪ ಅವರು ಇದ್ದು, ಟಿಕೆಟ್‌ ಹಂಚಿಕೆಯಲ್ಲಿ ಅವರ ಅಭಿಪ್ರಾಯ ಕೂಡಾ ತೆಗೆದುಕೊಳ್ಳುತ್ತಾರೆ ಅಲ್ಲವೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಅವರು ಇದ್ದರೆ ಏನಾಯ್ತು? ಒಮ್ಮೊಮ್ಮೆ ಈ ಸಮಿತಿಯಲ್ಲಿ ಇರುವವರಿಗೂ ಟಿಕೆಟ್ ಸಿಗುವುದಿಲ್ಲ. ಅದಕ್ಕೆ ಏನು ಹೇಳುತ್ತೀರಿ? ಇದಕ್ಕೆ ಹಲವು ಉದಾಹರಣೆ ಇವೆ. ನಾನೂ ಕೂಡಾ ಕರ್ನಾಟಕದ ಚುನಾವಣಾ ಸಮಿತಿಯಲ್ಲಿ ಇದ್ದೆ, ನನಗೆ ಕೂಡಾ ಲೋಕಸಭಾ ಟಿಕೆಟ್‌ ಪಡೆಯಲು ಆಗಲಿಲ್ಲ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರಿಗೆ ಸ್ಥಾನಮಾನ ನೀಡಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಲ್,“ಪ್ರಧಾನ ಮಂತ್ರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

“ಯಡಿಯೂಪ್ಪ ಅವರು ಜಡ್ಜ್‌ ಸೀಟಲ್ಲಿ ಕುಳಿತಿರುವುದರಿಂದ, ಕರ್ನಾಟಕದಲ್ಲಿ ಹೆಚ್ಚಿನ ಸೀಟು ಪಡೆಯಬೇಕೆಂದರೆ ನನಗೆ ಸೇರಿದಂತೆ ಎಲ್ಲರಿಗೂ ಟಿಕೆಟ್‌ ಕೊಡುವ ಅನಿವಾರ್ಯತೆ ಬರುತ್ತದೆ. ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೀವು ಭಾವಿಸಿದ್ದೀರಾ? ಆದರೆ, ಹಾಗೇನೂ ಆಗುವುದಿಲ್ಲ. ನನಗೆ ಟಿಕೆಟ್‌ ಸಿಕ್ಕಿ, ಮುಂದಿನ ಬಾರಿಯೂ ಶಾಸಕ ಆಗುತ್ತೇನೆ. ನನಗೆ ಸಚಿವನಾಗುವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಅಭ್ಯರ್ಥಿಯಾದರೆ ಪಕ್ಷವೂ 150 ಸೀಟುಗಳನ್ನು ಪಡೆಯುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....