Homeಕರ್ನಾಟಕಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ: ಬಸನಗೌಡ...

ಮಂತ್ರಿಯಾಗುವ ಎಲ್ಲಾ ಅರ್ಹತೆ ನನಗಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ: ಬಸನಗೌಡ ಯತ್ನಾಲ್

- Advertisement -
- Advertisement -

‘ನನಗೆ ಮಂತ್ರಿ ಮತ್ತು ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಯಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಪಕ್ಷಕ್ಕೆ 150 ಸೀಟು ಬರುತ್ತದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಬುಧವಾರ ಹೇಳಿದ್ದಾರೆ. ರಾಜ್ಯದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಈ ಹೇಳಿಕೆಯನ್ನು ಅವರು ನೀಡಿದ್ದಾರೆ.

ಯತ್ನಾಲ್ ಅವರು ಯಡಿಯೂರಪ್ಪ ಅವರನ್ನು ನಿರಂತರವಾಗಿ ಟೀಕಿಸುತ್ತಲೆ ಬಂದಿದ್ದಾರೆ. ಇದೀಗ ಯಡಿಯೂರಪ್ಪ ಅವರಿಗೆ ಉನ್ನತ ಸ್ಥಾನಮಾನ ನೀಡಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರಿಗೆ ಸ್ಥಾನಮಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅಭಿನಂಧನೆಗಳು. ಇದರ ಬಗ್ಗೆ ಯಾವುದೇ ವಿವಾದಾತ್ಮಕ ಹೇಳಿಕೆಗಳು ಇಲ್ಲ” ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದ ಹೈಕಮಾಂಡ್‌ ಎಲ್ಲವೂ ಗಮನಿಸಿ ಸೂಕ್ತ ಕಾಲಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಬಹುಮತದ ಸರ್ಕಾರ ಬರುವಂತಾಗಲು ಏನು ಮಾಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂಬ ವಿಶ್ವಾಸವಿದೆ” ಎಂದು ಅವರು ಹೇಳಿದ್ದಾರೆ.

“ಪಕ್ಷದ ಹೈಕಮಾಂಡ್ ನಿರ್ಣಯ ತೆಗೆದುಕೊಂಡಿದ್ದರೆ ಅದಕ್ಕೆ ನಾನು ತಲೆಬಾಗುತ್ತೇನೆ. ಹೈಕಮಾಂಡ್ ಬಹಳ ಮುಂದಾಲೋಚನೆ ಮಾಡಿ ಈ ನಿರ್ಧಾರಕ್ಕೆ ಬಂದಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿ: ‘ಹಿಂದೂರಾಷ್ಟ್ರ’ ಎಂದಿರುವ ಪ್ಲೆಕ್ಸ್‌ಗೆ ಪೊಲೀಸ್ ಭದ್ರತೆ; ಸಾವರ್ಕರ್‌‌ ಫೋಟೋ ವೈಭವೀಕರಣ!

“ಪ್ರಧಾನಿ 75ನೇ ಸ್ವಾತಂತ್ಯ್ರೋತ್ಸವ ಆಚರಿಸುವ ವೇಳೆ ಮಾತನಾಡುತ್ತಾ, ‘ಭವಿಷ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ನಾನು ಅಂತ್ಯ ಹಾಡುತ್ತೇನೆ’ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಅಂತಹ ಕಾಲ ಅಮೃತ ಮಹೋತ್ಸವದಿಂದ ಪ್ರಾರಂಭವಾಗುತ್ತದೆ. ನನಗೆ, ನನ್ನ ಮಕ್ಕಳಿಗೆ ಎಂಪಿ ಬೇಕು, ಎಮ್‌ಎಲ್‌ಎ ಬೇಕು, ಎಮ್‌ಎಲ್‌ಸಿ ಬೇಕು ಎನ್ನುವುದೆಲ್ಲಾ ಇನ್ನು ಮುಂದೆ ದೇಶದಲ್ಲಿ ನಡೆಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಚುನಾವಣೆ ಸಮಿತಿಯಲ್ಲಿ ಯಡಿಯೂರಪ್ಪ ಅವರು ಇದ್ದು, ಟಿಕೆಟ್‌ ಹಂಚಿಕೆಯಲ್ಲಿ ಅವರ ಅಭಿಪ್ರಾಯ ಕೂಡಾ ತೆಗೆದುಕೊಳ್ಳುತ್ತಾರೆ ಅಲ್ಲವೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಅವರು ಇದ್ದರೆ ಏನಾಯ್ತು? ಒಮ್ಮೊಮ್ಮೆ ಈ ಸಮಿತಿಯಲ್ಲಿ ಇರುವವರಿಗೂ ಟಿಕೆಟ್ ಸಿಗುವುದಿಲ್ಲ. ಅದಕ್ಕೆ ಏನು ಹೇಳುತ್ತೀರಿ? ಇದಕ್ಕೆ ಹಲವು ಉದಾಹರಣೆ ಇವೆ. ನಾನೂ ಕೂಡಾ ಕರ್ನಾಟಕದ ಚುನಾವಣಾ ಸಮಿತಿಯಲ್ಲಿ ಇದ್ದೆ, ನನಗೆ ಕೂಡಾ ಲೋಕಸಭಾ ಟಿಕೆಟ್‌ ಪಡೆಯಲು ಆಗಲಿಲ್ಲ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರಿಗೆ ಸ್ಥಾನಮಾನ ನೀಡಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಲ್,“ಪ್ರಧಾನ ಮಂತ್ರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

“ಯಡಿಯೂಪ್ಪ ಅವರು ಜಡ್ಜ್‌ ಸೀಟಲ್ಲಿ ಕುಳಿತಿರುವುದರಿಂದ, ಕರ್ನಾಟಕದಲ್ಲಿ ಹೆಚ್ಚಿನ ಸೀಟು ಪಡೆಯಬೇಕೆಂದರೆ ನನಗೆ ಸೇರಿದಂತೆ ಎಲ್ಲರಿಗೂ ಟಿಕೆಟ್‌ ಕೊಡುವ ಅನಿವಾರ್ಯತೆ ಬರುತ್ತದೆ. ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೀವು ಭಾವಿಸಿದ್ದೀರಾ? ಆದರೆ, ಹಾಗೇನೂ ಆಗುವುದಿಲ್ಲ. ನನಗೆ ಟಿಕೆಟ್‌ ಸಿಕ್ಕಿ, ಮುಂದಿನ ಬಾರಿಯೂ ಶಾಸಕ ಆಗುತ್ತೇನೆ. ನನಗೆ ಸಚಿವನಾಗುವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಅಭ್ಯರ್ಥಿಯಾದರೆ ಪಕ್ಷವೂ 150 ಸೀಟುಗಳನ್ನು ಪಡೆಯುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...