Homeಕರ್ನಾಟಕನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

ನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.
ನಾನು ಮೊದಲಿಂದಲೂ ಸನಾತನವಾದಿ ಆರ್‌ಎಸ್‌ಎಸ್‌, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಗಾಂಧಿ ನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರ್‌ಎಸ್‌ಎಸ್‌ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೆ ನಾನು ಆರ್‌ಎಸ್‌ಎಸ್‌ ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದು ಸಿಎಂ ಹೇಳಿದರು.

ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್‌ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್‌ಗಳೂ ಆಗಿದ್ದಾರೆ. ನಾನು 1983ರಲ್ಲಿ ಶಾಸಕನಾಗಿ 1984ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ. ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು, ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದೆ ಎಂದು ಸಿಎಂ ನೆನಪಿಸಿಕೊಂಡರು.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ, ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು. ಈ ಇತಿಹಾಸ ಗೊತ್ತಿದ್ದವರು ಬಹಿರಂಗವಾಗಿ ಮಾತಾಡಬೇಕಿತ್ತು. ಅವರು ಯಾರೂ ಮಾತಾಡದ ಕಾರಣಕ್ಕೆ, ನಾನು ಮಾತಾಡಬಾರದು ಅಂದುಕೊಂಡಿದ್ದವನು ಎಲ್ಲವನ್ನೂ ಮಾತಾಡಬೇಕಾಗಿ ಬಂತು ಎಂದರು.

ಧರ್ಮಸ್ಥಳ ಪ್ರಕರಣ : ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...