Homeಕರ್ನಾಟಕನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

ನಾನು ಮೊದಲಿನಿಂದಲೂ ಸನಾತನವಾದಿ ಆರ್‌ಎಸ್‌ಎಸ್‌ಗೆ ವಿರುದ್ಧ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.
ನಾನು ಮೊದಲಿಂದಲೂ ಸನಾತನವಾದಿ ಆರ್‌ಎಸ್‌ಎಸ್‌, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಗಾಂಧಿ ನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರ್‌ಎಸ್‌ಎಸ್‌ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೆ ನಾನು ಆರ್‌ಎಸ್‌ಎಸ್‌ ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದು ಸಿಎಂ ಹೇಳಿದರು.

ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್‌ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್‌ಗಳೂ ಆಗಿದ್ದಾರೆ. ನಾನು 1983ರಲ್ಲಿ ಶಾಸಕನಾಗಿ 1984ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ. ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು, ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದೆ ಎಂದು ಸಿಎಂ ನೆನಪಿಸಿಕೊಂಡರು.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ, ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು. ಈ ಇತಿಹಾಸ ಗೊತ್ತಿದ್ದವರು ಬಹಿರಂಗವಾಗಿ ಮಾತಾಡಬೇಕಿತ್ತು. ಅವರು ಯಾರೂ ಮಾತಾಡದ ಕಾರಣಕ್ಕೆ, ನಾನು ಮಾತಾಡಬಾರದು ಅಂದುಕೊಂಡಿದ್ದವನು ಎಲ್ಲವನ್ನೂ ಮಾತಾಡಬೇಕಾಗಿ ಬಂತು ಎಂದರು.

ಧರ್ಮಸ್ಥಳ ಪ್ರಕರಣ : ಎಸ್ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...