Homeಮುಖಪುಟ'ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ..'; ಬಿಜೆಪಿ ಸೇರುವ ಊಹಾಪೋಹ ತಳ್ಳಿಹಾಕಿದ ಚಂಪೈ

‘ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ..’; ಬಿಜೆಪಿ ಸೇರುವ ಊಹಾಪೋಹ ತಳ್ಳಿಹಾಕಿದ ಚಂಪೈ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ದೆಹಲಿಗೆ ಆಗಮಿಸಿದ ನಂತರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ. ತಮ್ಮ ಮಗಳನ್ನು ಭೇಟಿ ಮಾಡುವುದು ಸೇರಿದಂತೆ ವೈಯಕ್ತಿಕ ಕಾರಣಗಳಿಗಾಗಿ ರಾಜಧಾನಿಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸೊರೇನ್ ಅವರು ಅಪೋಲೋ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗಾಗಿ ಮುಂದಿನ ಮೂರು ದಿನಗಳ ಕಾಲ ದೆಹಲಿಯಲ್ಲೇ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಬಿಜೆಪಿಗೆ ಸೇರುವ ಸಾಧ್ಯತೆಯ ಬಗ್ಗೆ ಊಹಾಪೋಹಗಳ ನಡುವೆ ಇತರ ನಾಲ್ಕು ಜೆಎಂಎಂ ಶಾಸಕರೊಂದಿಗೆ ದೆಹಲಿಗೆ ಹಾರಿದರು ಎಂದು ಈ ಹಿಂದೆ ವರದಿಯಾಗಿತ್ತು.

ಪಕ್ಷಕ್ಕೆ ಸೇರುವ ಷರತ್ತುಗಳ ಬಗ್ಗೆ ಚರ್ಚಿಸಲು ಅವರು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಊಹಿಸಲಾಗಿದೆ.

ಚಂಪೈ ಸೊರೇನ್ ಅವರು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನು ಕೋಲ್ಕತ್ತಾದಲ್ಲಿ ಭೇಟಿಯಾದರು ಎಂಬ ವದಂತಿಯೂ ಹಬ್ಬಿತ್ತು. ಈ ಬಗ್ಗೆ ಕೇಳಿದಾಗ, ಅವರು ಆರೋಪಗಳನ್ನು ನಿರಾಕರಿಸಿದರು. “ನಾನು ಯಾರನ್ನೂ ಭೇಟಿ ಮಾಡಿಲ್ಲ, ನಾನು ವೈಯಕ್ತಿಕ ಕೆಲಸಕ್ಕಾಗಿ ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಅವರು ಬಿಜೆಪಿಗೆ ಸೇರುವ ಊಹಾಪೋಹಗಳನ್ನು ಎಂದಿಗೂ ತಿರಸ್ಕರಿಸಲಿಲ್ಲ ಮತ್ತು ಕೇಸರಿ ಪಕ್ಷಕ್ಕೆ ಸೇರುವ ಸಾಧ್ಯತೆಗಳ ಬಗ್ಗೆ ಪ್ರಶ್ನೆಯಿಂದ ತಪ್ಪಿಸಿಕೊಂಡರು.

ಚಂಪೈ ಸೊರೇನ್ ಅವರು 10:30 ರ ಸುಮಾರಿಗೆ ಕೋಲ್ಕತ್ತಾ ಮೂಲಕ ದೆಹಲಿಗೆ ತೆರಳಿದ್ದರು ಮತ್ತು ಮಧ್ಯಾಹ್ನ 12:30 ಕ್ಕೆ ದೆಹಲಿ ತಲುಪಿದ್ದರು.

ಅವರೊಂದಿಗೆ ಜೆಎಂಎಂ ಶಾಸಕರಾದ ದಶರತ್ ಗಗ್ರಾಯ್, ರಾಮದಾಸ್ ಸೊರೇನ್, ಚಾಮ್ರಾ ಲಿಂಡಾ, ಲೋಬಿನ್ ಹೆಂಬ್ರಾಮ್ ಮತ್ತು ಸಮೀರ್ ಮೊಹಾಂತಿ ಇದ್ದಾರೆ ಎಂದು ಮೂಲಗಳು ಹೇಳಿಕೊಂಡಿವೆ. ಜೆಎಂಎಂ ನಾಯಕತ್ವವು ಈ ಶಾಸಕರೊಂದಿಗೆ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.

ಮೊನ್ನೆ ಶನಿವಾರ, ಉಚ್ಛಾಟಿತ ಜೆಎಂಎಂ ಶಾಸಕ ಲೋಬಿನ್ ಹೆಂಬ್ರೋಮ್ ಅವರು ಚಂಪೈ ಸೊರೇನ್ ಅವರನ್ನು ಭೇಟಿಯಾದರು. ಅವರು ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳಿಗೆ ಕಾರಣವಾಯಿತು. ಆದರೆ, ಇಂತಹ ವದಂತಿಗಳನ್ನು ಚಂಪೈ ಸೊರೇನ್ ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ; ಮೂವರು ಶಾಸಕರೊಂದಿಗೆ ದೆಹಲಿಗೆ ಹೊರಟ ಜೆಎಂಎಂ ನಾಯಕ ಚಂಪೈ ಸೊರೇನ್; ಬಿಜೆಪಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...