Homeಸಿನಿಮಾಕ್ರೀಡೆಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

ಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

- Advertisement -
- Advertisement -

ಐಪಿಎಲ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡುತ್ತಿದ್ದ ಬೆಂಗಳೂರಿಗರ ನೆಚ್ಚಿನ ಆಟಗಾರ ದಕ್ಷಿಣ ಆಫ್ರಿಕದ ಎಬಿ ಡಿವಿಲಿಯರ್ಸ್ ಇಂದು ಎಲ್ಲಾ ವಿಭಾಗದ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದು ಹಲವು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

360 ಡಿಗ್ರಿ ಆಟಗಾರ ಎಂದೇ ಖ್ಯಾತರಾದ ಡಿವಿಲಿಯರ್ಸ್ ಚೆಂಡನ್ನು ಅಂಗಳದ ಎಲ್ಲಾ ಮೂಲೆಗೂ ಅಟ್ಟುವುದರಲ್ಲಿ ಪ್ರಸಿದ್ದರಾಗಿದ್ದರು. ಕಷ್ಟದ ಸಮಯದಲ್ಲಿ ಕ್ರೀಸ್‌ಗೆ ಬಂದು ಲೀಲಾಜಾಲವಾಗಿ ಬ್ಯಾಟ್ ಬೀಸಿ ಎಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಅವರು ಈಗ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಅಭಿಮಾನಿಗಳಿಗೆ ದೊಡ್ಡ ನಷ್ಟವಾಗಿದೆ.

ಎಬಿಡಿ ಎಂದೇ ಕರೆಯಲ್ಪಡುತ್ತಿದ್ದ ಅವರು ಬೆಂಗಳೂರು ಮತ್ತು ಕರ್ನಾಟಕದ ಜೊತೆಗೆ ವಿಶಿಷ್ಟ ನಂಟು ಹೊಂದಿದ್ದರು. ಅವರ ಅಭಿಮಾನಿಗಳು ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿದ್ದಾರೆ ಎನ್ನಲಾಗುತ್ತಿದೆ. ನಟ ಯೂಟ್ಯೂಬರ್ ದಾನಿಷ್ ಸೇಠ್ ಜೊತೆಗೆ ಎಬಿಡಿ ಕನ್ನಡದಲ್ಲಿ ಮಾತಾಡಿ, ಕನ್ನಡ ಹಾಡು ಹಾಡಿ ಗಮನ ಸೆಳೆದಿದ್ದರು.

ತಮ್ಮ ವಿದಾಯವನ್ನು ಟ್ವಿಟರ್‌ನಲ್ಲಿ ಘೋಷಿಸಿರುವ ಅವರು, “ಇದೊಂದು ಅದ್ಭುತ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಅಂಗಳದಲ್ಲಿ ಆನಂದ ಮತ್ತು ಮಿತಿಯಿಲ್ಲದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ನನ್ನೊಳಗಿನ ಜ್ವಾಲೆಯು ಅಷ್ಟು ಪ್ರಕಾಶಮಾನವಾಗಿಲ್ಲದಿರುವಾಗ ಈಗ 37 ನೇ ವಯಸ್ಸಿನಲ್ಲಿ ವಿದಾಯ ಘೋಷಿಸುತ್ತಿದ್ದೇನೆ” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಹೇಳಿದ್ದಾರೆ.

“ಅದು ನಾನು ಒಪ್ಪಿಕೊಳ್ಳಲೇಬೇಕಾದ ವಾಸ್ತವ, ಮತ್ತು ಅದು ಹಠಾತ್ತಾಗಿ ಕಂಡರೂ ಸಹ, ಅದಕ್ಕಾಗಿಯೇ ನಾನು ಇಂದು ಈ ಘೋಷಣೆ ಮಾಡುತ್ತಿದ್ದೇನೆ. ನಾನು ನನ್ನ ಸಮಯವನ್ನು ಅನುಭವಿಸಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಕರುಣೆ ತೋರಿದೆ. ಟೈಟಾನ್ಸ್, ಪ್ರೋಟೀಸ್, ಅಥವಾ RCB ಅಥವಾ ಪ್ರಪಂಚದಾದ್ಯಂತ ಯಾವುದೇ ಲೀಗ್‌ನಲ್ಲಿ ಆಡುತ್ತಿರಲಿ ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ ಮತ್ತು ಅದಕ್ಕೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ಕೊನೆಯದಾಗಿ, ನನ್ನ ಕುಟುಂಬ – ನನ್ನ ಹೆತ್ತವರು, ನನ್ನ ಸಹೋದರರು, ನನ್ನ ಹೆಂಡತಿ ನನಗಾಗಿ ಬಹಳ ತ್ಯಾಗ ಮಾಡಿದ್ದಾರೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಡಿವಿಲಿಯರ್ಸ್ ಐಪಿಎಲ್‌ನಲ್ಲಿ 184 ಪಂದ್ಯಗಳಲ್ಲಿ 39.70 ಸರಾಸರಿಯಲ್ಲಿ 5,162 ರನ್ ಗಳಿಸುವ ಮೂಲಕ ಸಾರ್ವಕಾಲಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರ ಸ್ಟ್ರೈಕ್ ರೇಟ್ 151.68 ಆಗಿದ್ದು ಪಂದ್ಯಾವಳಿಯಲ್ಲಿ ಅಗ್ರ 20 ರನ್ ಗಳಿಸಿದವರಿಗಿಂತ ಉತ್ತಮವಾಗಿದೆ. ಅವರು ಐಪಿಎಲ್ 2021 ರಲ್ಲಿ 15 ಪಂದ್ಯಗಳನ್ನು ಆಡಿದರು, 31.30 ರ ಸರಾಸರಿಯಲ್ಲಿ 313 ರನ್ ಗಳಿಸಿದರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...