Homeಸಿನಿಮಾಕ್ರೀಡೆಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

ಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

- Advertisement -
- Advertisement -

ಐಪಿಎಲ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡುತ್ತಿದ್ದ ಬೆಂಗಳೂರಿಗರ ನೆಚ್ಚಿನ ಆಟಗಾರ ದಕ್ಷಿಣ ಆಫ್ರಿಕದ ಎಬಿ ಡಿವಿಲಿಯರ್ಸ್ ಇಂದು ಎಲ್ಲಾ ವಿಭಾಗದ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದು ಹಲವು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

360 ಡಿಗ್ರಿ ಆಟಗಾರ ಎಂದೇ ಖ್ಯಾತರಾದ ಡಿವಿಲಿಯರ್ಸ್ ಚೆಂಡನ್ನು ಅಂಗಳದ ಎಲ್ಲಾ ಮೂಲೆಗೂ ಅಟ್ಟುವುದರಲ್ಲಿ ಪ್ರಸಿದ್ದರಾಗಿದ್ದರು. ಕಷ್ಟದ ಸಮಯದಲ್ಲಿ ಕ್ರೀಸ್‌ಗೆ ಬಂದು ಲೀಲಾಜಾಲವಾಗಿ ಬ್ಯಾಟ್ ಬೀಸಿ ಎಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಅವರು ಈಗ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಅಭಿಮಾನಿಗಳಿಗೆ ದೊಡ್ಡ ನಷ್ಟವಾಗಿದೆ.

ಎಬಿಡಿ ಎಂದೇ ಕರೆಯಲ್ಪಡುತ್ತಿದ್ದ ಅವರು ಬೆಂಗಳೂರು ಮತ್ತು ಕರ್ನಾಟಕದ ಜೊತೆಗೆ ವಿಶಿಷ್ಟ ನಂಟು ಹೊಂದಿದ್ದರು. ಅವರ ಅಭಿಮಾನಿಗಳು ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿದ್ದಾರೆ ಎನ್ನಲಾಗುತ್ತಿದೆ. ನಟ ಯೂಟ್ಯೂಬರ್ ದಾನಿಷ್ ಸೇಠ್ ಜೊತೆಗೆ ಎಬಿಡಿ ಕನ್ನಡದಲ್ಲಿ ಮಾತಾಡಿ, ಕನ್ನಡ ಹಾಡು ಹಾಡಿ ಗಮನ ಸೆಳೆದಿದ್ದರು.

ತಮ್ಮ ವಿದಾಯವನ್ನು ಟ್ವಿಟರ್‌ನಲ್ಲಿ ಘೋಷಿಸಿರುವ ಅವರು, “ಇದೊಂದು ಅದ್ಭುತ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಅಂಗಳದಲ್ಲಿ ಆನಂದ ಮತ್ತು ಮಿತಿಯಿಲ್ಲದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ನನ್ನೊಳಗಿನ ಜ್ವಾಲೆಯು ಅಷ್ಟು ಪ್ರಕಾಶಮಾನವಾಗಿಲ್ಲದಿರುವಾಗ ಈಗ 37 ನೇ ವಯಸ್ಸಿನಲ್ಲಿ ವಿದಾಯ ಘೋಷಿಸುತ್ತಿದ್ದೇನೆ” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಹೇಳಿದ್ದಾರೆ.

“ಅದು ನಾನು ಒಪ್ಪಿಕೊಳ್ಳಲೇಬೇಕಾದ ವಾಸ್ತವ, ಮತ್ತು ಅದು ಹಠಾತ್ತಾಗಿ ಕಂಡರೂ ಸಹ, ಅದಕ್ಕಾಗಿಯೇ ನಾನು ಇಂದು ಈ ಘೋಷಣೆ ಮಾಡುತ್ತಿದ್ದೇನೆ. ನಾನು ನನ್ನ ಸಮಯವನ್ನು ಅನುಭವಿಸಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಕರುಣೆ ತೋರಿದೆ. ಟೈಟಾನ್ಸ್, ಪ್ರೋಟೀಸ್, ಅಥವಾ RCB ಅಥವಾ ಪ್ರಪಂಚದಾದ್ಯಂತ ಯಾವುದೇ ಲೀಗ್‌ನಲ್ಲಿ ಆಡುತ್ತಿರಲಿ ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ ಮತ್ತು ಅದಕ್ಕೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ಕೊನೆಯದಾಗಿ, ನನ್ನ ಕುಟುಂಬ – ನನ್ನ ಹೆತ್ತವರು, ನನ್ನ ಸಹೋದರರು, ನನ್ನ ಹೆಂಡತಿ ನನಗಾಗಿ ಬಹಳ ತ್ಯಾಗ ಮಾಡಿದ್ದಾರೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಡಿವಿಲಿಯರ್ಸ್ ಐಪಿಎಲ್‌ನಲ್ಲಿ 184 ಪಂದ್ಯಗಳಲ್ಲಿ 39.70 ಸರಾಸರಿಯಲ್ಲಿ 5,162 ರನ್ ಗಳಿಸುವ ಮೂಲಕ ಸಾರ್ವಕಾಲಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರ ಸ್ಟ್ರೈಕ್ ರೇಟ್ 151.68 ಆಗಿದ್ದು ಪಂದ್ಯಾವಳಿಯಲ್ಲಿ ಅಗ್ರ 20 ರನ್ ಗಳಿಸಿದವರಿಗಿಂತ ಉತ್ತಮವಾಗಿದೆ. ಅವರು ಐಪಿಎಲ್ 2021 ರಲ್ಲಿ 15 ಪಂದ್ಯಗಳನ್ನು ಆಡಿದರು, 31.30 ರ ಸರಾಸರಿಯಲ್ಲಿ 313 ರನ್ ಗಳಿಸಿದರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...