Homeಸಿನಿಮಾಕ್ರೀಡೆಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

ಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

- Advertisement -
- Advertisement -

ಐಪಿಎಲ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡುತ್ತಿದ್ದ ಬೆಂಗಳೂರಿಗರ ನೆಚ್ಚಿನ ಆಟಗಾರ ದಕ್ಷಿಣ ಆಫ್ರಿಕದ ಎಬಿ ಡಿವಿಲಿಯರ್ಸ್ ಇಂದು ಎಲ್ಲಾ ವಿಭಾಗದ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದು ಹಲವು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

360 ಡಿಗ್ರಿ ಆಟಗಾರ ಎಂದೇ ಖ್ಯಾತರಾದ ಡಿವಿಲಿಯರ್ಸ್ ಚೆಂಡನ್ನು ಅಂಗಳದ ಎಲ್ಲಾ ಮೂಲೆಗೂ ಅಟ್ಟುವುದರಲ್ಲಿ ಪ್ರಸಿದ್ದರಾಗಿದ್ದರು. ಕಷ್ಟದ ಸಮಯದಲ್ಲಿ ಕ್ರೀಸ್‌ಗೆ ಬಂದು ಲೀಲಾಜಾಲವಾಗಿ ಬ್ಯಾಟ್ ಬೀಸಿ ಎಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಅವರು ಈಗ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಅಭಿಮಾನಿಗಳಿಗೆ ದೊಡ್ಡ ನಷ್ಟವಾಗಿದೆ.

ಎಬಿಡಿ ಎಂದೇ ಕರೆಯಲ್ಪಡುತ್ತಿದ್ದ ಅವರು ಬೆಂಗಳೂರು ಮತ್ತು ಕರ್ನಾಟಕದ ಜೊತೆಗೆ ವಿಶಿಷ್ಟ ನಂಟು ಹೊಂದಿದ್ದರು. ಅವರ ಅಭಿಮಾನಿಗಳು ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿದ್ದಾರೆ ಎನ್ನಲಾಗುತ್ತಿದೆ. ನಟ ಯೂಟ್ಯೂಬರ್ ದಾನಿಷ್ ಸೇಠ್ ಜೊತೆಗೆ ಎಬಿಡಿ ಕನ್ನಡದಲ್ಲಿ ಮಾತಾಡಿ, ಕನ್ನಡ ಹಾಡು ಹಾಡಿ ಗಮನ ಸೆಳೆದಿದ್ದರು.

ತಮ್ಮ ವಿದಾಯವನ್ನು ಟ್ವಿಟರ್‌ನಲ್ಲಿ ಘೋಷಿಸಿರುವ ಅವರು, “ಇದೊಂದು ಅದ್ಭುತ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಅಂಗಳದಲ್ಲಿ ಆನಂದ ಮತ್ತು ಮಿತಿಯಿಲ್ಲದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ನನ್ನೊಳಗಿನ ಜ್ವಾಲೆಯು ಅಷ್ಟು ಪ್ರಕಾಶಮಾನವಾಗಿಲ್ಲದಿರುವಾಗ ಈಗ 37 ನೇ ವಯಸ್ಸಿನಲ್ಲಿ ವಿದಾಯ ಘೋಷಿಸುತ್ತಿದ್ದೇನೆ” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಹೇಳಿದ್ದಾರೆ.

“ಅದು ನಾನು ಒಪ್ಪಿಕೊಳ್ಳಲೇಬೇಕಾದ ವಾಸ್ತವ, ಮತ್ತು ಅದು ಹಠಾತ್ತಾಗಿ ಕಂಡರೂ ಸಹ, ಅದಕ್ಕಾಗಿಯೇ ನಾನು ಇಂದು ಈ ಘೋಷಣೆ ಮಾಡುತ್ತಿದ್ದೇನೆ. ನಾನು ನನ್ನ ಸಮಯವನ್ನು ಅನುಭವಿಸಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಕರುಣೆ ತೋರಿದೆ. ಟೈಟಾನ್ಸ್, ಪ್ರೋಟೀಸ್, ಅಥವಾ RCB ಅಥವಾ ಪ್ರಪಂಚದಾದ್ಯಂತ ಯಾವುದೇ ಲೀಗ್‌ನಲ್ಲಿ ಆಡುತ್ತಿರಲಿ ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ ಮತ್ತು ಅದಕ್ಕೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ಕೊನೆಯದಾಗಿ, ನನ್ನ ಕುಟುಂಬ – ನನ್ನ ಹೆತ್ತವರು, ನನ್ನ ಸಹೋದರರು, ನನ್ನ ಹೆಂಡತಿ ನನಗಾಗಿ ಬಹಳ ತ್ಯಾಗ ಮಾಡಿದ್ದಾರೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಡಿವಿಲಿಯರ್ಸ್ ಐಪಿಎಲ್‌ನಲ್ಲಿ 184 ಪಂದ್ಯಗಳಲ್ಲಿ 39.70 ಸರಾಸರಿಯಲ್ಲಿ 5,162 ರನ್ ಗಳಿಸುವ ಮೂಲಕ ಸಾರ್ವಕಾಲಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರ ಸ್ಟ್ರೈಕ್ ರೇಟ್ 151.68 ಆಗಿದ್ದು ಪಂದ್ಯಾವಳಿಯಲ್ಲಿ ಅಗ್ರ 20 ರನ್ ಗಳಿಸಿದವರಿಗಿಂತ ಉತ್ತಮವಾಗಿದೆ. ಅವರು ಐಪಿಎಲ್ 2021 ರಲ್ಲಿ 15 ಪಂದ್ಯಗಳನ್ನು ಆಡಿದರು, 31.30 ರ ಸರಾಸರಿಯಲ್ಲಿ 313 ರನ್ ಗಳಿಸಿದರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...