Homeಸಿನಿಮಾಕ್ರೀಡೆಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

ಎಲ್ಲಾ ವಿಭಾಗದ ಕ್ರಿಕೆಟ್‌ಗೆ ಗುಡ್‌ಬೈ: ಬೆಂಗಳೂರಿಗರ ನೆಚ್ಚಿನ ಆಟಗಾರ ಎಬಿ ಡಿವಿಲಿಯರ್ಸ್ ವಿದಾಯ

- Advertisement -
- Advertisement -

ಐಪಿಎಲ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡುತ್ತಿದ್ದ ಬೆಂಗಳೂರಿಗರ ನೆಚ್ಚಿನ ಆಟಗಾರ ದಕ್ಷಿಣ ಆಫ್ರಿಕದ ಎಬಿ ಡಿವಿಲಿಯರ್ಸ್ ಇಂದು ಎಲ್ಲಾ ವಿಭಾಗದ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದು ಹಲವು ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

360 ಡಿಗ್ರಿ ಆಟಗಾರ ಎಂದೇ ಖ್ಯಾತರಾದ ಡಿವಿಲಿಯರ್ಸ್ ಚೆಂಡನ್ನು ಅಂಗಳದ ಎಲ್ಲಾ ಮೂಲೆಗೂ ಅಟ್ಟುವುದರಲ್ಲಿ ಪ್ರಸಿದ್ದರಾಗಿದ್ದರು. ಕಷ್ಟದ ಸಮಯದಲ್ಲಿ ಕ್ರೀಸ್‌ಗೆ ಬಂದು ಲೀಲಾಜಾಲವಾಗಿ ಬ್ಯಾಟ್ ಬೀಸಿ ಎಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಅವರು ಈಗ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಅಭಿಮಾನಿಗಳಿಗೆ ದೊಡ್ಡ ನಷ್ಟವಾಗಿದೆ.

ಎಬಿಡಿ ಎಂದೇ ಕರೆಯಲ್ಪಡುತ್ತಿದ್ದ ಅವರು ಬೆಂಗಳೂರು ಮತ್ತು ಕರ್ನಾಟಕದ ಜೊತೆಗೆ ವಿಶಿಷ್ಟ ನಂಟು ಹೊಂದಿದ್ದರು. ಅವರ ಅಭಿಮಾನಿಗಳು ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿದ್ದಾರೆ ಎನ್ನಲಾಗುತ್ತಿದೆ. ನಟ ಯೂಟ್ಯೂಬರ್ ದಾನಿಷ್ ಸೇಠ್ ಜೊತೆಗೆ ಎಬಿಡಿ ಕನ್ನಡದಲ್ಲಿ ಮಾತಾಡಿ, ಕನ್ನಡ ಹಾಡು ಹಾಡಿ ಗಮನ ಸೆಳೆದಿದ್ದರು.

ತಮ್ಮ ವಿದಾಯವನ್ನು ಟ್ವಿಟರ್‌ನಲ್ಲಿ ಘೋಷಿಸಿರುವ ಅವರು, “ಇದೊಂದು ಅದ್ಭುತ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಅಂಗಳದಲ್ಲಿ ಆನಂದ ಮತ್ತು ಮಿತಿಯಿಲ್ಲದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ನನ್ನೊಳಗಿನ ಜ್ವಾಲೆಯು ಅಷ್ಟು ಪ್ರಕಾಶಮಾನವಾಗಿಲ್ಲದಿರುವಾಗ ಈಗ 37 ನೇ ವಯಸ್ಸಿನಲ್ಲಿ ವಿದಾಯ ಘೋಷಿಸುತ್ತಿದ್ದೇನೆ” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಹೇಳಿದ್ದಾರೆ.

“ಅದು ನಾನು ಒಪ್ಪಿಕೊಳ್ಳಲೇಬೇಕಾದ ವಾಸ್ತವ, ಮತ್ತು ಅದು ಹಠಾತ್ತಾಗಿ ಕಂಡರೂ ಸಹ, ಅದಕ್ಕಾಗಿಯೇ ನಾನು ಇಂದು ಈ ಘೋಷಣೆ ಮಾಡುತ್ತಿದ್ದೇನೆ. ನಾನು ನನ್ನ ಸಮಯವನ್ನು ಅನುಭವಿಸಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಕರುಣೆ ತೋರಿದೆ. ಟೈಟಾನ್ಸ್, ಪ್ರೋಟೀಸ್, ಅಥವಾ RCB ಅಥವಾ ಪ್ರಪಂಚದಾದ್ಯಂತ ಯಾವುದೇ ಲೀಗ್‌ನಲ್ಲಿ ಆಡುತ್ತಿರಲಿ ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ ಮತ್ತು ಅದಕ್ಕೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ಕೊನೆಯದಾಗಿ, ನನ್ನ ಕುಟುಂಬ – ನನ್ನ ಹೆತ್ತವರು, ನನ್ನ ಸಹೋದರರು, ನನ್ನ ಹೆಂಡತಿ ನನಗಾಗಿ ಬಹಳ ತ್ಯಾಗ ಮಾಡಿದ್ದಾರೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ” ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಡಿವಿಲಿಯರ್ಸ್ ಐಪಿಎಲ್‌ನಲ್ಲಿ 184 ಪಂದ್ಯಗಳಲ್ಲಿ 39.70 ಸರಾಸರಿಯಲ್ಲಿ 5,162 ರನ್ ಗಳಿಸುವ ಮೂಲಕ ಸಾರ್ವಕಾಲಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರ ಸ್ಟ್ರೈಕ್ ರೇಟ್ 151.68 ಆಗಿದ್ದು ಪಂದ್ಯಾವಳಿಯಲ್ಲಿ ಅಗ್ರ 20 ರನ್ ಗಳಿಸಿದವರಿಗಿಂತ ಉತ್ತಮವಾಗಿದೆ. ಅವರು ಐಪಿಎಲ್ 2021 ರಲ್ಲಿ 15 ಪಂದ್ಯಗಳನ್ನು ಆಡಿದರು, 31.30 ರ ಸರಾಸರಿಯಲ್ಲಿ 313 ರನ್ ಗಳಿಸಿದರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...