Homeಮುಖಪುಟ’ನಾನು 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ’- ನಟ ಸೋನು ಸೂದ್

’ನಾನು 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ’- ನಟ ಸೋನು ಸೂದ್

- Advertisement -
- Advertisement -

’ನಾನು 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ’, ರಾಜಕೀಯಕ್ಕೆ ಸೇರಲು ಮಾನಸಿಕವಾಗಿ ಸಿದ್ಧವಾಗಿಲ್ಲ ಎಂದು ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಮುಂಬೈನ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ, ನಂತರ ತೆರಿಗೆ ವಂಚನೆ ಮತ್ತು ಅಕ್ರಮ ಹಣದ ಆರೋಪವನ್ನು ಹೊರಿಸಿತ್ತು. ಆರೋಪ ನಿರಾಕರಿಸಿರುವ ನಟ, ತಾನು ಕಾನೂನಿನ ನಿಯಮಗಳನ್ನು ಪಾಲಿಸುವ ನಾಗರಿಕ ಎಂದು ಹೇಳಿದ್ದಾರೆ.

“ಆದಾಯ ತೆರಿಗೆ ಇಲಾಖೆಯವರು ಕೇಳಿದ ಎಲ್ಲಾ ದಾಖಲೆಗಳು, ವಿವರಗಳನ್ನು ನೀಡಿದ್ದೇವೆ. ಅವರು ಏನೇ ಪ್ರಶ್ನೆಗಳನ್ನು ಕೇಳಿದರೋ ಅವುಗಳಿಗೆ ನಾನು ಉತ್ತರಿಸಿದ್ದೇನೆ. ನನ್ನ ಕೆಲಸ ನಾನು ಮಾಡಿದ್ದೇನೆ, ಅವರು ತಮ್ಮ ಕೆಲಸವನ್ನು ಮಾಡಿದ್ದಾರೆ” ಎಂದು ನಟ ಸೋನು ಸೂದ್ ತಿಳಿಸಿದ್ದಾರೆ.

ಕೊರೊನಾ ಕಾಲದ ಬಡವರ ಆಪದ್ಬಾಂಧವ ಅನಿಸಿಕೊಂಡಿದ್ದ ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ ಕೇಳಿ ಬಂದಿದ್ದು, 20 ಕೋಟಿಗೂ ಅಧಿಕ ತೆರಿಗೆಯನ್ನು ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

“ನಾನು ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ನೀವು ನನ್ನನ್ನು ಯಾವುದೇ ರಾಜ್ಯಕ್ಕೆ ಕರೆದರು ಹೋಗುತ್ತೇನೆ. ಬಿಜೆಪಿ, ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿಯೂ ನಾನು ಕೆಲಸ ಮಾಡಿದ್ದೇನೆ” ಎಂದು ಆಮ್ ಆದ್ಮಿ ಜೊತೆಗಿನ ಮೈತ್ರಿ ಬಗ್ಗೆ ಮಾತನಾಡಿದ್ದಾರೆ.

“ನಾನು ಎರಡು ಬೇರೆ ಬೇರೆ ಪಕ್ಷಗಳಿಂದ ಬಂದ ರಾಜ್ಯಸಭಾ ಸ್ಥಾನಗಳ ಆಹ್ವಾನವನ್ನು ಎರಡು ಬಾರಿ ತಿರಸ್ಕರಿಸಿದ್ದೇನೆ.  ಪ್ರಸ್ತುತ ನಾನು ನನ್ನ ಕೆಲಸಗಳಲ್ಲಿ ಸಂತೋಷವಾಗಿದ್ದೇನೆ. ನಾನು ರಾಜಕೀಯಕ್ಕೆ ಸಿದ್ಧನಾದಾಗ, ನಾನು ಸಿದ್ಧ ಎಂದು ಎಲ್ಲರಿಗೂ ತಿಳಿಯುವಂತೆ ಕೂಗುತ್ತೇನೆ” ಎಂದು ಹೇಳಿದ್ದಾರೆ.

“ನನ್ನ ಬಳಿ 54,000 ಓದದಿರುವ ಇ-ಮೇಲ್‌ಗಳು, ಸಾವಿರಾರು ಸಂದೇಶಗಳು WhatsApp, Facebook, Twitter ನಲ್ಲಿ ಇವೆ. 18 ಕೋಟಿಗಳನ್ನು ಮುಗಿಸಲು 18 ಗಂಟೆಗಳು ಕೂಡ ತೆಗೆದುಕೊಳ್ಳುವುದಿಲ್ಲ. ಆದರೆ ಪ್ರತಿಯೊಂದು ರೂಪಾಯಿಯನ್ನು ಸರಿಯಾದ ರೀತಿಯಲ್ಲಿ, ನಿಜವಾದ ಮತ್ತು ನಿರ್ಗತಿಕ ವ್ಯಕ್ತಿಗಾಗಿತೇ ಬಳಸಲಾಗಿದೆಯೆ ಎಂದು ನಾನು ಖಚಿತಪಡಿಸಿಕೊಳ್ಳಬೇಕು. ಹೀಗಾಗಿ ಇನ್ನು ಹಣ ಇದೆ” ಎಂದಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಸ್ಥಾಪಿಸಲಾದ ಸೂದ್ ಚಾರಿಟಿ ಫೌಂಡೇಶನ್, ಈ ವರ್ಷದ ಏಪ್ರಿಲ್ ಒಳಗೆ 18 ಕೋಟಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಅದರಲ್ಲಿ 1.9 ಕೋಟಿ ಪರಿಹಾರ ಕಾರ್ಯಕ್ಕಾಗಿ ಖರ್ಚು ಮಾಡಲಾಗಿದೆ. ಉಳಿದ 17 ಕೋಟಿ ರೂಪಾಯಿಗಳನ್ನು ಸೂದ್ ಚಾರಿಟಿ ಫೌಂಡೇಶನ್ ಬ್ಯಾಂಕ್ ಖಾತೆಯಲ್ಲಿ ಬಳಕೆಯಾಗದೆ ಹಾಗೆ ಉಳಿದಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...