Homeಮುಖಪುಟದೆಹಲಿ ಹಿಂಸಾಚಾರ: ನಾನೇನೂ ತಪ್ಪು ಮಾಡಿಲ್ಲ ಎಂದ ಕಪಿಲ್ ಮಿಶ್ರ

ದೆಹಲಿ ಹಿಂಸಾಚಾರ: ನಾನೇನೂ ತಪ್ಪು ಮಾಡಿಲ್ಲ ಎಂದ ಕಪಿಲ್ ಮಿಶ್ರ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಪೌರತ್ವ ಕಾನೂನಿನ ವಿರುದ್ದ ಪ್ರತಿಭಟಿಸುವವರನ್ನು ತೆರವುಗೊಳಿಸಲು ಅಥವಾ ಪರಿಣಾಮಗಳನ್ನು ಎದುರಿಸಲು ಭಾನುವಾರ ದೆಹಲಿ ಪೊಲೀಸರಿಗೆ ಮೂರು ದಿನಗಳ ಗಡುವು ನೀಡಿದ್ದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಈಗ ಅವರ ಪ್ರಚೋದನಕಾರಿ ಹೇಳಿಕೆಗಳಿಗಾಗಿ ಆವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದವರ ಮೇಲೆ ತಿರುಗಿ ಬಿದ್ದಿದ್ದಾರೆ.

“ಬುರ್ಹಾನ್ ವಾನಿ ಮತ್ತು ಅಫ್ಜಲ್ ಗುರುಗಳನ್ನು ಭಯೋತ್ಪಾದಕರು ಎಂದು ಪರಿಗಣಿಸದವರು ಕಪಿಲ್ ಮಿಶ್ರಾ ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಯಾಕೂಬ್ ಮೆಮನ್, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯಕ್ಕೆ ಹೋಗುವವರು ಕಪಿಲ್ ಮಿಶ್ರಾ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜೈ ಶ್ರೀ ರಾಮ್,” ಎಂದು ಕಪಿಲ್‌ ಮಿಶ್ರಾ ಇಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೇ ದೆಹಲಿ ಹೈಕೋರ್ಟ್‌ ಈಗ ಕಪಿಲ್‌ ಮಿಶ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ನಿರ್ದೇಶನ ಸಹ ನೀಡಿದೆ.

ಕೋಮು ಮತ್ತು ದ್ವೇಷ ಹರಡುವ ಟ್ವೀಟ್‌ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಅವರು ಭಾನುವಾರ ಜಾಫ್ರಾಬಾದ್ ಬಳಿಯ ಈಶಾನ್ಯ ದೆಹಲಿಯ ಮೌಜ್‌ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ್ಯಾಲಿಯನ್ನು ಮುನ್ನಡೆಸಿದ್ದರು. ಅಲ್ಲಿ ಈಗಾಗಲೇ ಪೌರತ್ವ ಕಾನೂನಿನ ವಿರುದ್ಧ ಶನಿವಾರ ರಾತ್ರಿಯಿಂದ ಪ್ರತಿಭಟನೆ ನಡೆಯುತ್ತಿತ್ತು. ರ್ಯಾಲಿಯಲ್ಲಿ ಅವರು ಪ್ರದೇಶದ ರಸ್ತೆಗಳನ್ನು ತೆರವುಗೊಳಿಸಲು ದೆಹಲಿ ಪೊಲೀಸರಿಗೆ ಗಡುವು ನೀಡಿದ್ದರು. ಇಲ್ಲದಿದ್ದರೆ ನಾವೂ ಬೀದಿಗಿಳಿಯಬೇಕಾಗುತ್ತದೆ ಎಂದು ಹೇಳಿದ್ದರು. ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನಾಕಾರರು ಮತ್ತು ಕಾನೂನನ್ನು ಬೆಂಬಲಿಸುವ ಗುಂಪಿನ ನಡುವೆ ಘರ್ಷಣೆಗಳು ಸಂಭವಿಸುವ ಕೆಲವೇ ಗಂಟೆಗಳ ಮೊದಲು ಮಿಶ್ರಾ ಈ ಹೇಳಿಕೆ ನೀಡಿದ್ದರು.

ಸರಣಿ ಟ್ವೀಟ್‌ಗಳಲ್ಲಿ ಮಿಶ್ರಾ ಅವರನ್ನು ನಿಂದಿಸಲಾಗುತ್ತಿದೆ. ಅಲ್ಲದೆ ನನಗೆ ಪ್ರಾಣ ಬೆದರಿಕೆ ಬಂದಿದೆ. ಸಿಎಎಗೆ ಬೆಂಬಲ ನೀಡುವ ಮೂಲಕ ನಾನು ಅಪರಾಧ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

“ನನ್ನನ್ನು ಕೊಲ್ಲಲು ನನಗೆ ಅನೇಕರಿಂದ ಕರೆಗಳು ಬಂದಿವೆ. ರಾಜಕಾರಣಿಗಳು ಮತ್ತು ಪತ್ರಕರ್ತರು ಸೇರಿದಂತೆ ಅನೇಕರು ನನ್ನನ್ನು ನಿಂದಿಸುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ನಾನು ಹೆದರುವುದಿಲ್ಲ” ಎಂದು ಕಪಿಲ್ ಮಿಶ್ರ ಹೇಳಿದ್ದಾರೆ.

ಈ ತಿಂಗಳ ದೆಹಲಿ ಚುನಾವಣೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಿದ ಕಪಿಲ್ ಮಿಶ್ರಾ, “ದೇಶದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಗಳನ್ನು ಕೂಗುವುದು ಸೇರಿದಂತೆ ಎರಡು ತಿಂಗಳ ಹಿಂದೆ ಸಿಎಎ ವಿರುದ್ಧ ಪ್ರತಿಭಟನೆಗಳು ನಡೆದಾಗಿನಿಂದ ಅವರ ದ್ವೇಷದ ಭಾಷಣಗಳನ್ನು ವ್ಯಾಪಕವಾಗಿ ಖಂಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...