Homeಮುಖಪುಟದೆಹಲಿ ಹಿಂಸಾಚಾರ: ನಾನೇನೂ ತಪ್ಪು ಮಾಡಿಲ್ಲ ಎಂದ ಕಪಿಲ್ ಮಿಶ್ರ

ದೆಹಲಿ ಹಿಂಸಾಚಾರ: ನಾನೇನೂ ತಪ್ಪು ಮಾಡಿಲ್ಲ ಎಂದ ಕಪಿಲ್ ಮಿಶ್ರ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಪೌರತ್ವ ಕಾನೂನಿನ ವಿರುದ್ದ ಪ್ರತಿಭಟಿಸುವವರನ್ನು ತೆರವುಗೊಳಿಸಲು ಅಥವಾ ಪರಿಣಾಮಗಳನ್ನು ಎದುರಿಸಲು ಭಾನುವಾರ ದೆಹಲಿ ಪೊಲೀಸರಿಗೆ ಮೂರು ದಿನಗಳ ಗಡುವು ನೀಡಿದ್ದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಈಗ ಅವರ ಪ್ರಚೋದನಕಾರಿ ಹೇಳಿಕೆಗಳಿಗಾಗಿ ಆವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದವರ ಮೇಲೆ ತಿರುಗಿ ಬಿದ್ದಿದ್ದಾರೆ.

“ಬುರ್ಹಾನ್ ವಾನಿ ಮತ್ತು ಅಫ್ಜಲ್ ಗುರುಗಳನ್ನು ಭಯೋತ್ಪಾದಕರು ಎಂದು ಪರಿಗಣಿಸದವರು ಕಪಿಲ್ ಮಿಶ್ರಾ ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಯಾಕೂಬ್ ಮೆಮನ್, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯಕ್ಕೆ ಹೋಗುವವರು ಕಪಿಲ್ ಮಿಶ್ರಾ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜೈ ಶ್ರೀ ರಾಮ್,” ಎಂದು ಕಪಿಲ್‌ ಮಿಶ್ರಾ ಇಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೇ ದೆಹಲಿ ಹೈಕೋರ್ಟ್‌ ಈಗ ಕಪಿಲ್‌ ಮಿಶ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ನಿರ್ದೇಶನ ಸಹ ನೀಡಿದೆ.

ಕೋಮು ಮತ್ತು ದ್ವೇಷ ಹರಡುವ ಟ್ವೀಟ್‌ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಅವರು ಭಾನುವಾರ ಜಾಫ್ರಾಬಾದ್ ಬಳಿಯ ಈಶಾನ್ಯ ದೆಹಲಿಯ ಮೌಜ್‌ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ್ಯಾಲಿಯನ್ನು ಮುನ್ನಡೆಸಿದ್ದರು. ಅಲ್ಲಿ ಈಗಾಗಲೇ ಪೌರತ್ವ ಕಾನೂನಿನ ವಿರುದ್ಧ ಶನಿವಾರ ರಾತ್ರಿಯಿಂದ ಪ್ರತಿಭಟನೆ ನಡೆಯುತ್ತಿತ್ತು. ರ್ಯಾಲಿಯಲ್ಲಿ ಅವರು ಪ್ರದೇಶದ ರಸ್ತೆಗಳನ್ನು ತೆರವುಗೊಳಿಸಲು ದೆಹಲಿ ಪೊಲೀಸರಿಗೆ ಗಡುವು ನೀಡಿದ್ದರು. ಇಲ್ಲದಿದ್ದರೆ ನಾವೂ ಬೀದಿಗಿಳಿಯಬೇಕಾಗುತ್ತದೆ ಎಂದು ಹೇಳಿದ್ದರು. ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನಾಕಾರರು ಮತ್ತು ಕಾನೂನನ್ನು ಬೆಂಬಲಿಸುವ ಗುಂಪಿನ ನಡುವೆ ಘರ್ಷಣೆಗಳು ಸಂಭವಿಸುವ ಕೆಲವೇ ಗಂಟೆಗಳ ಮೊದಲು ಮಿಶ್ರಾ ಈ ಹೇಳಿಕೆ ನೀಡಿದ್ದರು.

ಸರಣಿ ಟ್ವೀಟ್‌ಗಳಲ್ಲಿ ಮಿಶ್ರಾ ಅವರನ್ನು ನಿಂದಿಸಲಾಗುತ್ತಿದೆ. ಅಲ್ಲದೆ ನನಗೆ ಪ್ರಾಣ ಬೆದರಿಕೆ ಬಂದಿದೆ. ಸಿಎಎಗೆ ಬೆಂಬಲ ನೀಡುವ ಮೂಲಕ ನಾನು ಅಪರಾಧ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

“ನನ್ನನ್ನು ಕೊಲ್ಲಲು ನನಗೆ ಅನೇಕರಿಂದ ಕರೆಗಳು ಬಂದಿವೆ. ರಾಜಕಾರಣಿಗಳು ಮತ್ತು ಪತ್ರಕರ್ತರು ಸೇರಿದಂತೆ ಅನೇಕರು ನನ್ನನ್ನು ನಿಂದಿಸುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ನಾನು ಹೆದರುವುದಿಲ್ಲ” ಎಂದು ಕಪಿಲ್ ಮಿಶ್ರ ಹೇಳಿದ್ದಾರೆ.

ಈ ತಿಂಗಳ ದೆಹಲಿ ಚುನಾವಣೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಿದ ಕಪಿಲ್ ಮಿಶ್ರಾ, “ದೇಶದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಗಳನ್ನು ಕೂಗುವುದು ಸೇರಿದಂತೆ ಎರಡು ತಿಂಗಳ ಹಿಂದೆ ಸಿಎಎ ವಿರುದ್ಧ ಪ್ರತಿಭಟನೆಗಳು ನಡೆದಾಗಿನಿಂದ ಅವರ ದ್ವೇಷದ ಭಾಷಣಗಳನ್ನು ವ್ಯಾಪಕವಾಗಿ ಖಂಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...