Homeಮುಖಪುಟನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿದ್ದರಾಮಯ್ಯ

ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿದ್ದರಾಮಯ್ಯ

- Advertisement -
- Advertisement -

“ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಇಂದು ಸುದ್ದಿಗಾಗರೊಂದಿಗೆ ಮೂಡಾ ನಿವೇಶನ ವಿವಾದದ ಬಗ್ಗೆ ಮಾತನಾಡಿದ ಅವರು, “ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ” ಎಂದರು.

“ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ” ಎಂದರು.

“ರಾಜಭವನವನ್ನು ಬಳಸಿಕೊಂಡು ಬಿಜೆಪಿ-ಜೆಡಿಎಸ್ ಹಾಗೂ ಕೇಂದ್ರ ಬಿಜೆಪಿ ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ” ಎಂದರು.

“ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ” ಎಂದು ವಾಗ್ದಾಳಿ ನಡೆಸಿದರು.

ಅಶೋಕ್ ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರ ಆಗ್ರಹಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?” ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ,  “ಆರ್ ಅಶೋಕ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು; ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ್ಯ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು” ಎಂದು ಟೀಕಿಸಿದ್ದಾರೆ.

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ” ಎಂದು ಹೇಳಿದ್ದಾರೆ.

“ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ” ಎಂದು ಹಳೆ ಘಟನೆಗಳನ್ನು ಸಿಎಂ ಬಿಜೆಪಿ ನಾಯಕರಿಗೆ ನೆನಪಿಸಿದ್ದಾರೆ.

ಇದನ್ನೂ ಓದಿ; ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಒಪ್ಪಿಗೆ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಿದ್ದರಾಮಯ್ಯ; ಇಂದು ಮಧ್ಯಾಹ್ನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...