Homeಕರ್ನಾಟಕನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಅವರು ಕೂಡಲೇ ರಾಜೀನಾಮೆ ಕೊಡಬೇಕು - ಬಸವ ಜಯಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

“ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ, ಯಾವುದೇ ಸೂಚನೆಯನ್ನಾದರೂ ಕೇಂದ್ರವೇ ನೀಡಬೇಕು” ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾಗತಿಗೆ ಆಗ್ರಹಿಸಿದ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಆ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

“ನಮ್ಮದು ಪ್ರಾದೇಶಿಕ ಪಕ್ಷ ಅಲ್ಲ, ರಾಷ್ಟ್ರೀಯ ಪಕ್ಷ. ಯಾವುದೇ ಸಮಸ್ಯೆ ಇದ್ದರೂ ಕೇಂದ್ರದಲ್ಲಿ ಪ್ರಧಾನಿಯವರ ಮತ್ತು ಉಳಿದವರ ಸಲಹೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಬೇಕು. ಇದಾವುದಕ್ಕೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ. ಕರ್ನಾಟಕದಲ್ಲಿ 25 ಸಂಸದರಿದ್ದಾರೆ. ಯಾರು ಬೇಕೋ ಕರೆದುಕೊಂಡು ಹೋಗಿ ಕೇಂದ್ರದ ನಾಯಕರನ್ನ ಭೇಟಿ ಮಾಡಿ. ನಾನಂತು ಇಲ್ಲಿ ಕುಳಿತು ಯಾವುದೇ ಸಮಸ್ಯೆಗೆ ಪರಿಹಾರ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಭಾಷಣೆಯನ್ನು ಈ ವಿಡಿಯೋದ 1 ಗಂಟೆ 31 ನಿಮಿಷದ ನಂತರ ಕೇಳಬಹದು.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡರು.

ಇದರ ಬಗ್ಗೆ ಆಕ್ರೋಶಗೊಂಡ ಯತ್ನಾಳ್, ಇದು ನಮ್ಮ ಸಮುದಾಯವನ್ನು ಮುಗಿಸಲು ಮಾಡಿರುವ ಕುತಂತ್ರ ಎಂದು ಆರೋಪಿಸಿದರು. ಜೊತೆಗೆ ಯಡಿಯೂರಪ್ಪನವರ ಖಡಕ್ ಹೇಳಿಕೆಗೆ ರಾಜ್ಯದಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಪ್ರತಿಕ್ರಿಯಿಸಿ, “ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದರು. ಈ ವೀಡಿಯೋವನ್ನು ಇಲ್ಲಿ ನೋಡಬಹುದು.

ಇದೆಲ್ಲ ನಡೆದ ನಂತರ ರಾತ್ರೋರಾತ್ರಿ ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, “ಪಂಚಮಸಾಲಿ ಸಮುದಾಯದ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಯಡಿಯೂರಪ್ಪನವರು ಸದನದಲ್ಲಿ ನನಗೆ ಅಧಿಕಾರ ಇಲ್ಲ ಎಂದು ಹೇಳಿರುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಹಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತೋಣಿ ಜಾನ್ ಟಂಬುವವರು ಟ್ವೀಟ್ ಮಾಡಿ, “ನಿಮ್ಮ ಬಳಿ ಅಧಿಕಾರ ಇಲ್ಲ ಅಂತಾದರೆ, ಅಧಿಕಾರ ಕೊಡಿ ಅಧಿಕಾರ ಕೊಡಿ ಅಂತ ಜನರ ಮುಂದೆ (ಚುನಾವಣೆಯ ಹೊತ್ತಲ್ಲಿ) ಕೇಳಿಕೊಂಡದ್ದು ಯಾಕೆ!? ಇನ್ನು ಮುಂದೆ ಮುಖ್ಯಮಂತ್ರಿಗಳ ಪ್ರತಿಮೆ ವಿಧಾನ ಮಂಡಲದಲ್ಲಿ ಸ್ಥಾಪಿಸಿ ಆಡಳಿತ ನಡೆಸಬಹುದಲ್ಲ!? ರಾಜ್ಯದ ಹಿತ ಕಾಪಾಡುವ ಅಧಿಕಾರ ಇಲ್ಲದ ನೀವು ರಾಜೀನಾಮೆ ನೀಡುವ ಮೂಲಕವಾದರೂ ಕರ್ನಾಟಕದ ಹಿತ ಕಾಪಾಡಿ” ಎಂದು ಒತ್ತಾಯಿಸಿದ್ದಾರೆ.

ಚೇತನ್ ಶೆಟ್ಟಿ ಸಕಲೇಶಪುರ ಟ್ವೀಟ್ ಮಾಡಿ, “ಇವರು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಆಗೋಕೆ ನಾಲಾಯಕ್. ಅವರ ಪಕ್ಷದವರೇ ಕೇಳೋ ಒಂದು ಬೇಡಿಕೆ ಈಡೇರಿಸೋಕೆ ಆಗದೆ ಇರೋರು ನಮ್ಮಂಥ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಕೊಡ್ತಾರ. ಬರಿ ಕೇಂದ್ರದವರು ಹೇಳ್ದಂಗೆ ಮಾಡೋಕೆ ಇವರೇ ಬೇಕಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ಹಲವರು, ಯಡಿಯೂರಪ್ಪನವರೇ ತಾನು ರಬ್ಬರ್ ಸ್ಟ್ಯಾಂಪ್ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

(ನಾನುಗೌರಿ.ಕಾಂ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ)


ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಖ್ಯಮಂತ್ರಿ ಸ್ಥಾನವನ್ನು ಒಬ್ಬ ಗುಮಾಸ್ತನ ಮಟ್ಟಕ್ಕೆ ಇಳಿಸಿದ ಮಹಾನ್ ರಾಜಕಾರಣಿ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...