Homeಕರ್ನಾಟಕನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಅವರು ಕೂಡಲೇ ರಾಜೀನಾಮೆ ಕೊಡಬೇಕು - ಬಸವ ಜಯಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

“ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ, ಯಾವುದೇ ಸೂಚನೆಯನ್ನಾದರೂ ಕೇಂದ್ರವೇ ನೀಡಬೇಕು” ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾಗತಿಗೆ ಆಗ್ರಹಿಸಿದ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಆ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

“ನಮ್ಮದು ಪ್ರಾದೇಶಿಕ ಪಕ್ಷ ಅಲ್ಲ, ರಾಷ್ಟ್ರೀಯ ಪಕ್ಷ. ಯಾವುದೇ ಸಮಸ್ಯೆ ಇದ್ದರೂ ಕೇಂದ್ರದಲ್ಲಿ ಪ್ರಧಾನಿಯವರ ಮತ್ತು ಉಳಿದವರ ಸಲಹೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಬೇಕು. ಇದಾವುದಕ್ಕೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ. ಕರ್ನಾಟಕದಲ್ಲಿ 25 ಸಂಸದರಿದ್ದಾರೆ. ಯಾರು ಬೇಕೋ ಕರೆದುಕೊಂಡು ಹೋಗಿ ಕೇಂದ್ರದ ನಾಯಕರನ್ನ ಭೇಟಿ ಮಾಡಿ. ನಾನಂತು ಇಲ್ಲಿ ಕುಳಿತು ಯಾವುದೇ ಸಮಸ್ಯೆಗೆ ಪರಿಹಾರ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಭಾಷಣೆಯನ್ನು ಈ ವಿಡಿಯೋದ 1 ಗಂಟೆ 31 ನಿಮಿಷದ ನಂತರ ಕೇಳಬಹದು.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡರು.

ಇದರ ಬಗ್ಗೆ ಆಕ್ರೋಶಗೊಂಡ ಯತ್ನಾಳ್, ಇದು ನಮ್ಮ ಸಮುದಾಯವನ್ನು ಮುಗಿಸಲು ಮಾಡಿರುವ ಕುತಂತ್ರ ಎಂದು ಆರೋಪಿಸಿದರು. ಜೊತೆಗೆ ಯಡಿಯೂರಪ್ಪನವರ ಖಡಕ್ ಹೇಳಿಕೆಗೆ ರಾಜ್ಯದಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಪ್ರತಿಕ್ರಿಯಿಸಿ, “ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದರು. ಈ ವೀಡಿಯೋವನ್ನು ಇಲ್ಲಿ ನೋಡಬಹುದು.

ಇದೆಲ್ಲ ನಡೆದ ನಂತರ ರಾತ್ರೋರಾತ್ರಿ ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, “ಪಂಚಮಸಾಲಿ ಸಮುದಾಯದ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಯಡಿಯೂರಪ್ಪನವರು ಸದನದಲ್ಲಿ ನನಗೆ ಅಧಿಕಾರ ಇಲ್ಲ ಎಂದು ಹೇಳಿರುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಹಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತೋಣಿ ಜಾನ್ ಟಂಬುವವರು ಟ್ವೀಟ್ ಮಾಡಿ, “ನಿಮ್ಮ ಬಳಿ ಅಧಿಕಾರ ಇಲ್ಲ ಅಂತಾದರೆ, ಅಧಿಕಾರ ಕೊಡಿ ಅಧಿಕಾರ ಕೊಡಿ ಅಂತ ಜನರ ಮುಂದೆ (ಚುನಾವಣೆಯ ಹೊತ್ತಲ್ಲಿ) ಕೇಳಿಕೊಂಡದ್ದು ಯಾಕೆ!? ಇನ್ನು ಮುಂದೆ ಮುಖ್ಯಮಂತ್ರಿಗಳ ಪ್ರತಿಮೆ ವಿಧಾನ ಮಂಡಲದಲ್ಲಿ ಸ್ಥಾಪಿಸಿ ಆಡಳಿತ ನಡೆಸಬಹುದಲ್ಲ!? ರಾಜ್ಯದ ಹಿತ ಕಾಪಾಡುವ ಅಧಿಕಾರ ಇಲ್ಲದ ನೀವು ರಾಜೀನಾಮೆ ನೀಡುವ ಮೂಲಕವಾದರೂ ಕರ್ನಾಟಕದ ಹಿತ ಕಾಪಾಡಿ” ಎಂದು ಒತ್ತಾಯಿಸಿದ್ದಾರೆ.

ಚೇತನ್ ಶೆಟ್ಟಿ ಸಕಲೇಶಪುರ ಟ್ವೀಟ್ ಮಾಡಿ, “ಇವರು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಆಗೋಕೆ ನಾಲಾಯಕ್. ಅವರ ಪಕ್ಷದವರೇ ಕೇಳೋ ಒಂದು ಬೇಡಿಕೆ ಈಡೇರಿಸೋಕೆ ಆಗದೆ ಇರೋರು ನಮ್ಮಂಥ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಕೊಡ್ತಾರ. ಬರಿ ಕೇಂದ್ರದವರು ಹೇಳ್ದಂಗೆ ಮಾಡೋಕೆ ಇವರೇ ಬೇಕಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ಹಲವರು, ಯಡಿಯೂರಪ್ಪನವರೇ ತಾನು ರಬ್ಬರ್ ಸ್ಟ್ಯಾಂಪ್ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

(ನಾನುಗೌರಿ.ಕಾಂ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ)


ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಖ್ಯಮಂತ್ರಿ ಸ್ಥಾನವನ್ನು ಒಬ್ಬ ಗುಮಾಸ್ತನ ಮಟ್ಟಕ್ಕೆ ಇಳಿಸಿದ ಮಹಾನ್ ರಾಜಕಾರಣಿ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...