Homeಕರ್ನಾಟಕನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಅವರು ಕೂಡಲೇ ರಾಜೀನಾಮೆ ಕೊಡಬೇಕು - ಬಸವ ಜಯಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

“ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ, ಯಾವುದೇ ಸೂಚನೆಯನ್ನಾದರೂ ಕೇಂದ್ರವೇ ನೀಡಬೇಕು” ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾಗತಿಗೆ ಆಗ್ರಹಿಸಿದ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಆ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

“ನಮ್ಮದು ಪ್ರಾದೇಶಿಕ ಪಕ್ಷ ಅಲ್ಲ, ರಾಷ್ಟ್ರೀಯ ಪಕ್ಷ. ಯಾವುದೇ ಸಮಸ್ಯೆ ಇದ್ದರೂ ಕೇಂದ್ರದಲ್ಲಿ ಪ್ರಧಾನಿಯವರ ಮತ್ತು ಉಳಿದವರ ಸಲಹೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಬೇಕು. ಇದಾವುದಕ್ಕೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ. ಕರ್ನಾಟಕದಲ್ಲಿ 25 ಸಂಸದರಿದ್ದಾರೆ. ಯಾರು ಬೇಕೋ ಕರೆದುಕೊಂಡು ಹೋಗಿ ಕೇಂದ್ರದ ನಾಯಕರನ್ನ ಭೇಟಿ ಮಾಡಿ. ನಾನಂತು ಇಲ್ಲಿ ಕುಳಿತು ಯಾವುದೇ ಸಮಸ್ಯೆಗೆ ಪರಿಹಾರ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಭಾಷಣೆಯನ್ನು ಈ ವಿಡಿಯೋದ 1 ಗಂಟೆ 31 ನಿಮಿಷದ ನಂತರ ಕೇಳಬಹದು.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡರು.

ಇದರ ಬಗ್ಗೆ ಆಕ್ರೋಶಗೊಂಡ ಯತ್ನಾಳ್, ಇದು ನಮ್ಮ ಸಮುದಾಯವನ್ನು ಮುಗಿಸಲು ಮಾಡಿರುವ ಕುತಂತ್ರ ಎಂದು ಆರೋಪಿಸಿದರು. ಜೊತೆಗೆ ಯಡಿಯೂರಪ್ಪನವರ ಖಡಕ್ ಹೇಳಿಕೆಗೆ ರಾಜ್ಯದಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಪ್ರತಿಕ್ರಿಯಿಸಿ, “ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದರು. ಈ ವೀಡಿಯೋವನ್ನು ಇಲ್ಲಿ ನೋಡಬಹುದು.

ಇದೆಲ್ಲ ನಡೆದ ನಂತರ ರಾತ್ರೋರಾತ್ರಿ ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, “ಪಂಚಮಸಾಲಿ ಸಮುದಾಯದ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಯಡಿಯೂರಪ್ಪನವರು ಸದನದಲ್ಲಿ ನನಗೆ ಅಧಿಕಾರ ಇಲ್ಲ ಎಂದು ಹೇಳಿರುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಹಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತೋಣಿ ಜಾನ್ ಟಂಬುವವರು ಟ್ವೀಟ್ ಮಾಡಿ, “ನಿಮ್ಮ ಬಳಿ ಅಧಿಕಾರ ಇಲ್ಲ ಅಂತಾದರೆ, ಅಧಿಕಾರ ಕೊಡಿ ಅಧಿಕಾರ ಕೊಡಿ ಅಂತ ಜನರ ಮುಂದೆ (ಚುನಾವಣೆಯ ಹೊತ್ತಲ್ಲಿ) ಕೇಳಿಕೊಂಡದ್ದು ಯಾಕೆ!? ಇನ್ನು ಮುಂದೆ ಮುಖ್ಯಮಂತ್ರಿಗಳ ಪ್ರತಿಮೆ ವಿಧಾನ ಮಂಡಲದಲ್ಲಿ ಸ್ಥಾಪಿಸಿ ಆಡಳಿತ ನಡೆಸಬಹುದಲ್ಲ!? ರಾಜ್ಯದ ಹಿತ ಕಾಪಾಡುವ ಅಧಿಕಾರ ಇಲ್ಲದ ನೀವು ರಾಜೀನಾಮೆ ನೀಡುವ ಮೂಲಕವಾದರೂ ಕರ್ನಾಟಕದ ಹಿತ ಕಾಪಾಡಿ” ಎಂದು ಒತ್ತಾಯಿಸಿದ್ದಾರೆ.

ಚೇತನ್ ಶೆಟ್ಟಿ ಸಕಲೇಶಪುರ ಟ್ವೀಟ್ ಮಾಡಿ, “ಇವರು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಆಗೋಕೆ ನಾಲಾಯಕ್. ಅವರ ಪಕ್ಷದವರೇ ಕೇಳೋ ಒಂದು ಬೇಡಿಕೆ ಈಡೇರಿಸೋಕೆ ಆಗದೆ ಇರೋರು ನಮ್ಮಂಥ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಕೊಡ್ತಾರ. ಬರಿ ಕೇಂದ್ರದವರು ಹೇಳ್ದಂಗೆ ಮಾಡೋಕೆ ಇವರೇ ಬೇಕಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ಹಲವರು, ಯಡಿಯೂರಪ್ಪನವರೇ ತಾನು ರಬ್ಬರ್ ಸ್ಟ್ಯಾಂಪ್ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

(ನಾನುಗೌರಿ.ಕಾಂ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ)


ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಖ್ಯಮಂತ್ರಿ ಸ್ಥಾನವನ್ನು ಒಬ್ಬ ಗುಮಾಸ್ತನ ಮಟ್ಟಕ್ಕೆ ಇಳಿಸಿದ ಮಹಾನ್ ರಾಜಕಾರಣಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...