Homeಕರ್ನಾಟಕನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಅವರು ಕೂಡಲೇ ರಾಜೀನಾಮೆ ಕೊಡಬೇಕು - ಬಸವ ಜಯಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

“ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ, ಯಾವುದೇ ಸೂಚನೆಯನ್ನಾದರೂ ಕೇಂದ್ರವೇ ನೀಡಬೇಕು” ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾಗತಿಗೆ ಆಗ್ರಹಿಸಿದ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಆ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

“ನಮ್ಮದು ಪ್ರಾದೇಶಿಕ ಪಕ್ಷ ಅಲ್ಲ, ರಾಷ್ಟ್ರೀಯ ಪಕ್ಷ. ಯಾವುದೇ ಸಮಸ್ಯೆ ಇದ್ದರೂ ಕೇಂದ್ರದಲ್ಲಿ ಪ್ರಧಾನಿಯವರ ಮತ್ತು ಉಳಿದವರ ಸಲಹೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಬೇಕು. ಇದಾವುದಕ್ಕೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ. ಕರ್ನಾಟಕದಲ್ಲಿ 25 ಸಂಸದರಿದ್ದಾರೆ. ಯಾರು ಬೇಕೋ ಕರೆದುಕೊಂಡು ಹೋಗಿ ಕೇಂದ್ರದ ನಾಯಕರನ್ನ ಭೇಟಿ ಮಾಡಿ. ನಾನಂತು ಇಲ್ಲಿ ಕುಳಿತು ಯಾವುದೇ ಸಮಸ್ಯೆಗೆ ಪರಿಹಾರ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಭಾಷಣೆಯನ್ನು ಈ ವಿಡಿಯೋದ 1 ಗಂಟೆ 31 ನಿಮಿಷದ ನಂತರ ಕೇಳಬಹದು.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡರು.

ಇದರ ಬಗ್ಗೆ ಆಕ್ರೋಶಗೊಂಡ ಯತ್ನಾಳ್, ಇದು ನಮ್ಮ ಸಮುದಾಯವನ್ನು ಮುಗಿಸಲು ಮಾಡಿರುವ ಕುತಂತ್ರ ಎಂದು ಆರೋಪಿಸಿದರು. ಜೊತೆಗೆ ಯಡಿಯೂರಪ್ಪನವರ ಖಡಕ್ ಹೇಳಿಕೆಗೆ ರಾಜ್ಯದಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಪ್ರತಿಕ್ರಿಯಿಸಿ, “ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದರು. ಈ ವೀಡಿಯೋವನ್ನು ಇಲ್ಲಿ ನೋಡಬಹುದು.

ಇದೆಲ್ಲ ನಡೆದ ನಂತರ ರಾತ್ರೋರಾತ್ರಿ ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, “ಪಂಚಮಸಾಲಿ ಸಮುದಾಯದ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಯಡಿಯೂರಪ್ಪನವರು ಸದನದಲ್ಲಿ ನನಗೆ ಅಧಿಕಾರ ಇಲ್ಲ ಎಂದು ಹೇಳಿರುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಹಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತೋಣಿ ಜಾನ್ ಟಂಬುವವರು ಟ್ವೀಟ್ ಮಾಡಿ, “ನಿಮ್ಮ ಬಳಿ ಅಧಿಕಾರ ಇಲ್ಲ ಅಂತಾದರೆ, ಅಧಿಕಾರ ಕೊಡಿ ಅಧಿಕಾರ ಕೊಡಿ ಅಂತ ಜನರ ಮುಂದೆ (ಚುನಾವಣೆಯ ಹೊತ್ತಲ್ಲಿ) ಕೇಳಿಕೊಂಡದ್ದು ಯಾಕೆ!? ಇನ್ನು ಮುಂದೆ ಮುಖ್ಯಮಂತ್ರಿಗಳ ಪ್ರತಿಮೆ ವಿಧಾನ ಮಂಡಲದಲ್ಲಿ ಸ್ಥಾಪಿಸಿ ಆಡಳಿತ ನಡೆಸಬಹುದಲ್ಲ!? ರಾಜ್ಯದ ಹಿತ ಕಾಪಾಡುವ ಅಧಿಕಾರ ಇಲ್ಲದ ನೀವು ರಾಜೀನಾಮೆ ನೀಡುವ ಮೂಲಕವಾದರೂ ಕರ್ನಾಟಕದ ಹಿತ ಕಾಪಾಡಿ” ಎಂದು ಒತ್ತಾಯಿಸಿದ್ದಾರೆ.

ಚೇತನ್ ಶೆಟ್ಟಿ ಸಕಲೇಶಪುರ ಟ್ವೀಟ್ ಮಾಡಿ, “ಇವರು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಆಗೋಕೆ ನಾಲಾಯಕ್. ಅವರ ಪಕ್ಷದವರೇ ಕೇಳೋ ಒಂದು ಬೇಡಿಕೆ ಈಡೇರಿಸೋಕೆ ಆಗದೆ ಇರೋರು ನಮ್ಮಂಥ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಕೊಡ್ತಾರ. ಬರಿ ಕೇಂದ್ರದವರು ಹೇಳ್ದಂಗೆ ಮಾಡೋಕೆ ಇವರೇ ಬೇಕಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ಹಲವರು, ಯಡಿಯೂರಪ್ಪನವರೇ ತಾನು ರಬ್ಬರ್ ಸ್ಟ್ಯಾಂಪ್ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

(ನಾನುಗೌರಿ.ಕಾಂ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ)


ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಖ್ಯಮಂತ್ರಿ ಸ್ಥಾನವನ್ನು ಒಬ್ಬ ಗುಮಾಸ್ತನ ಮಟ್ಟಕ್ಕೆ ಇಳಿಸಿದ ಮಹಾನ್ ರಾಜಕಾರಣಿ.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...