Homeಕರ್ನಾಟಕಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

- Advertisement -
- Advertisement -

ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಜಾತಿ ಗಣತಿ ಸಮೀಕ್ಷೆಯು ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.

ನಿನ್ನೆ ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದ್ದರು. ಈ ಬಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.

‘ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂಬ ದೂರುಗಳು ಬಂದಿವೆ. ಎಲ್ಲ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರ್ಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲ ವರ್ಗದ ಜನರನ್ನು ಸಮಾನವಾಗಿ ನೋಡಬೇಕು’ ಎಂದರು.

ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿವೆ ಎಂಬ ವಿಚಾರವಾಗಿ ಮಾತನಾಡಿ, ‘ಈ ವಿಚಾರ ನನಗೆ ಗೊತ್ತಿಲ್ಲ. ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ’ ಎಂದು ಹೇಳಿದರು.

ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ:

ಲೋಕಸಭೆ ಚುನಾವಣೆ ನಂತರ ಪ್ರಭಾವಿ ಸಚಿವರು 50-60 ಶಾಸಕರೊಟ್ಟಿಗೆ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ನಿಮ್ಮನ್ನೇ ಗುರಿ ಮಾಡಿರುವಂತಿದೆ ಎಂದು ಕೇಳಿದಾಗ, ‘ನಾನು ಹುಟ್ಟುತ್ತಲೇ ಕಾಂಗ್ರೆಸ್ಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ. ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ. ನನಗೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಅಪಾರವಾದ ನಂಬಿಕೆ ಇದೆ. ಅವರು (ಕುಮಾರಸ್ವಾಮಿ) ಮಾತನಾಡಿದ್ದಕ್ಕೆಲ್ಲ ನಾನು ಬಾಧ್ಯಸ್ಥನಲ್ಲ. ಅವರು ಏನಾದರೂ ಹೇಳಿಕೊಂಡು ತಿರುಗಲಿ, ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದರು.

ಇದನ್ನೂ ಓದಿ; ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...