Homeಮುಖಪುಟ’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಗುರುವಾರ (ಅ.07) ಬಿಡುಗಡೆಯಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಸಂಸದ ವರುಣ್ ಗಾಂಧಿ ಮತ್ತು ಅವರ ತಾಯಿ ಮೇನಕಾ ಗಾಂಧಿಯನ್ನು ಕೈ ಬಿಟ್ಟಿರುವ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿರುವ ವರುಣ್ ಗಾಂಧಿ,’ ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ಸಭೆಗೂ ಹಾಜರಾಗಿಲ್ಲ. ಸಮಿತಿಯಲ್ಲಿ ಇದ್ದೆ ಎಂದು ನನಗೆ ಅನಿಸುತ್ತಿಲ್ಲ’ ಎಂದಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ರೈತರ ಕೊಲೆ ಬಗ್ಗೆ ತೀವ್ರ ಟೀಕೆಗಳ ಮೂಲಕ ಟ್ವೀಟ್ ಮಾಡಿ ವರುಣ್ ಗಾಂಧಿ ಸುದ್ದಿಯಾಗಿದ್ದರು. ಗುರುವಾರ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಅವರನ್ನು ಮತ್ತು ಅವರ ತಾಯಿ ಮೇನಕಾ ಗಾಂಧಿ ಹೆಸರನ್ನು ಕೈಬಿಡಲಾಗಿದೆ.

“ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಹಾಜರಾಗಿಲ್ಲ. ನಾನು ಅದರಲ್ಲಿ ಇದ್ದೆನೆಂದು ನಾನು ಭಾವಿಸುವುದಿಲ್ಲ” ಎಂದು 41 ವರ್ಷ ವಯಸ್ಸಿನ ವರುಣ್ ಗಾಂಧಿ ತಿಳಿಸಿದ್ದಾರೆ ಎಂದು ANI ಉಲ್ಲೇಖಿಸಿದೆ.

ಇದನ್ನೂ ಓದಿ: ‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

ಸುಬ್ರಮಣಿಯನ್ ಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಬೀರೇಂದ್ರ ಸಿಂಗ್ ಅವರು ಕೂಡ ಪಕ್ಷವನ್ನು ಟೀಕಿಸುತ್ತಿದ್ದು, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ನಿಲುವುಗಳನ್ನು ಹೊಂದಿದ್ದ ಇವರನ್ನು ಕಾರ್ಯಕಾರಿಣಿಯಿಂದ ಹೊರಗಿಡಲಾಗಿದೆ.

ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಂತಹ ಅನೇಕ ಕೇಂದ್ರ ಸಚಿವರು ಮತ್ತು ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಜೆಪಿಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಲಖಿಂಪುರ್ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿದ್ದು, ಪ್ರಕರಣ ದಾಖಲಾಗಿದೆ. ಆದರೆ, ಇಲ್ಲಿಯವರೆಗೂ ಇನ್ನು ಬಂಧಿಸಿಲ್ಲ. ಹತ್ಯಾಕಾಂಡದ ಬಗ್ಗೆ ಮಾತನಾಡಿದ ಏಕೈಕ ಬಿಜೆಪಿ ನಾಯಕ ವರುಣ್ ಗಾಂಧಿ.

ಘಟನೆಯ ಸ್ಪಷ್ಟ ಮತ್ತು ಧೀರ್ಘ ವಿಡಿಯೊವನ್ನು ಟ್ವೀಟ್ ಮಾಡಿದ್ದ ವರುಣ್‌ ಗಾಂಧಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದರು.

ಈ ಹಿಂದೆಯೂ ಟ್ವೀಟ್ ಮಾಡಿದ್ದ ಅವರು, ರೈತರ ಸಾವಿನಲ್ಲಿ ಭಾಗಿಯಾದವರನ್ನು ಖಂಡಿಸಿದ್ದಲ್ಲದೆ, ಸರ್ಕಾರವು ತಾಳ್ಮೆಯಿಂದ ಮತ್ತು ಸಂಯಮದಿಂದ ವರ್ತಿಬೇಕು ಎಂದು ಒತ್ತಾಯಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಮತ್ತು ಮೃತಪಟ್ಟ ರೈತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವಂತೆ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...