Homeಮುಖಪುಟ’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಗುರುವಾರ (ಅ.07) ಬಿಡುಗಡೆಯಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಸಂಸದ ವರುಣ್ ಗಾಂಧಿ ಮತ್ತು ಅವರ ತಾಯಿ ಮೇನಕಾ ಗಾಂಧಿಯನ್ನು ಕೈ ಬಿಟ್ಟಿರುವ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿರುವ ವರುಣ್ ಗಾಂಧಿ,’ ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ಸಭೆಗೂ ಹಾಜರಾಗಿಲ್ಲ. ಸಮಿತಿಯಲ್ಲಿ ಇದ್ದೆ ಎಂದು ನನಗೆ ಅನಿಸುತ್ತಿಲ್ಲ’ ಎಂದಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ರೈತರ ಕೊಲೆ ಬಗ್ಗೆ ತೀವ್ರ ಟೀಕೆಗಳ ಮೂಲಕ ಟ್ವೀಟ್ ಮಾಡಿ ವರುಣ್ ಗಾಂಧಿ ಸುದ್ದಿಯಾಗಿದ್ದರು. ಗುರುವಾರ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಅವರನ್ನು ಮತ್ತು ಅವರ ತಾಯಿ ಮೇನಕಾ ಗಾಂಧಿ ಹೆಸರನ್ನು ಕೈಬಿಡಲಾಗಿದೆ.

“ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಹಾಜರಾಗಿಲ್ಲ. ನಾನು ಅದರಲ್ಲಿ ಇದ್ದೆನೆಂದು ನಾನು ಭಾವಿಸುವುದಿಲ್ಲ” ಎಂದು 41 ವರ್ಷ ವಯಸ್ಸಿನ ವರುಣ್ ಗಾಂಧಿ ತಿಳಿಸಿದ್ದಾರೆ ಎಂದು ANI ಉಲ್ಲೇಖಿಸಿದೆ.

ಇದನ್ನೂ ಓದಿ: ‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

ಸುಬ್ರಮಣಿಯನ್ ಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಬೀರೇಂದ್ರ ಸಿಂಗ್ ಅವರು ಕೂಡ ಪಕ್ಷವನ್ನು ಟೀಕಿಸುತ್ತಿದ್ದು, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ನಿಲುವುಗಳನ್ನು ಹೊಂದಿದ್ದ ಇವರನ್ನು ಕಾರ್ಯಕಾರಿಣಿಯಿಂದ ಹೊರಗಿಡಲಾಗಿದೆ.

ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಂತಹ ಅನೇಕ ಕೇಂದ್ರ ಸಚಿವರು ಮತ್ತು ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಜೆಪಿಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಲಖಿಂಪುರ್ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿದ್ದು, ಪ್ರಕರಣ ದಾಖಲಾಗಿದೆ. ಆದರೆ, ಇಲ್ಲಿಯವರೆಗೂ ಇನ್ನು ಬಂಧಿಸಿಲ್ಲ. ಹತ್ಯಾಕಾಂಡದ ಬಗ್ಗೆ ಮಾತನಾಡಿದ ಏಕೈಕ ಬಿಜೆಪಿ ನಾಯಕ ವರುಣ್ ಗಾಂಧಿ.

ಘಟನೆಯ ಸ್ಪಷ್ಟ ಮತ್ತು ಧೀರ್ಘ ವಿಡಿಯೊವನ್ನು ಟ್ವೀಟ್ ಮಾಡಿದ್ದ ವರುಣ್‌ ಗಾಂಧಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದರು.

ಈ ಹಿಂದೆಯೂ ಟ್ವೀಟ್ ಮಾಡಿದ್ದ ಅವರು, ರೈತರ ಸಾವಿನಲ್ಲಿ ಭಾಗಿಯಾದವರನ್ನು ಖಂಡಿಸಿದ್ದಲ್ಲದೆ, ಸರ್ಕಾರವು ತಾಳ್ಮೆಯಿಂದ ಮತ್ತು ಸಂಯಮದಿಂದ ವರ್ತಿಬೇಕು ಎಂದು ಒತ್ತಾಯಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಮತ್ತು ಮೃತಪಟ್ಟ ರೈತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವಂತೆ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...