Homeಮುಖಪುಟ’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಗುರುವಾರ (ಅ.07) ಬಿಡುಗಡೆಯಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಸಂಸದ ವರುಣ್ ಗಾಂಧಿ ಮತ್ತು ಅವರ ತಾಯಿ ಮೇನಕಾ ಗಾಂಧಿಯನ್ನು ಕೈ ಬಿಟ್ಟಿರುವ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿರುವ ವರುಣ್ ಗಾಂಧಿ,’ ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ಸಭೆಗೂ ಹಾಜರಾಗಿಲ್ಲ. ಸಮಿತಿಯಲ್ಲಿ ಇದ್ದೆ ಎಂದು ನನಗೆ ಅನಿಸುತ್ತಿಲ್ಲ’ ಎಂದಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ರೈತರ ಕೊಲೆ ಬಗ್ಗೆ ತೀವ್ರ ಟೀಕೆಗಳ ಮೂಲಕ ಟ್ವೀಟ್ ಮಾಡಿ ವರುಣ್ ಗಾಂಧಿ ಸುದ್ದಿಯಾಗಿದ್ದರು. ಗುರುವಾರ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಅವರನ್ನು ಮತ್ತು ಅವರ ತಾಯಿ ಮೇನಕಾ ಗಾಂಧಿ ಹೆಸರನ್ನು ಕೈಬಿಡಲಾಗಿದೆ.

“ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಹಾಜರಾಗಿಲ್ಲ. ನಾನು ಅದರಲ್ಲಿ ಇದ್ದೆನೆಂದು ನಾನು ಭಾವಿಸುವುದಿಲ್ಲ” ಎಂದು 41 ವರ್ಷ ವಯಸ್ಸಿನ ವರುಣ್ ಗಾಂಧಿ ತಿಳಿಸಿದ್ದಾರೆ ಎಂದು ANI ಉಲ್ಲೇಖಿಸಿದೆ.

ಇದನ್ನೂ ಓದಿ: ‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

ಸುಬ್ರಮಣಿಯನ್ ಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಬೀರೇಂದ್ರ ಸಿಂಗ್ ಅವರು ಕೂಡ ಪಕ್ಷವನ್ನು ಟೀಕಿಸುತ್ತಿದ್ದು, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ನಿಲುವುಗಳನ್ನು ಹೊಂದಿದ್ದ ಇವರನ್ನು ಕಾರ್ಯಕಾರಿಣಿಯಿಂದ ಹೊರಗಿಡಲಾಗಿದೆ.

ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಂತಹ ಅನೇಕ ಕೇಂದ್ರ ಸಚಿವರು ಮತ್ತು ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಜೆಪಿಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಲಖಿಂಪುರ್ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿದ್ದು, ಪ್ರಕರಣ ದಾಖಲಾಗಿದೆ. ಆದರೆ, ಇಲ್ಲಿಯವರೆಗೂ ಇನ್ನು ಬಂಧಿಸಿಲ್ಲ. ಹತ್ಯಾಕಾಂಡದ ಬಗ್ಗೆ ಮಾತನಾಡಿದ ಏಕೈಕ ಬಿಜೆಪಿ ನಾಯಕ ವರುಣ್ ಗಾಂಧಿ.

ಘಟನೆಯ ಸ್ಪಷ್ಟ ಮತ್ತು ಧೀರ್ಘ ವಿಡಿಯೊವನ್ನು ಟ್ವೀಟ್ ಮಾಡಿದ್ದ ವರುಣ್‌ ಗಾಂಧಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದರು.

ಈ ಹಿಂದೆಯೂ ಟ್ವೀಟ್ ಮಾಡಿದ್ದ ಅವರು, ರೈತರ ಸಾವಿನಲ್ಲಿ ಭಾಗಿಯಾದವರನ್ನು ಖಂಡಿಸಿದ್ದಲ್ಲದೆ, ಸರ್ಕಾರವು ತಾಳ್ಮೆಯಿಂದ ಮತ್ತು ಸಂಯಮದಿಂದ ವರ್ತಿಬೇಕು ಎಂದು ಒತ್ತಾಯಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಮತ್ತು ಮೃತಪಟ್ಟ ರೈತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವಂತೆ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...