Homeಮುಖಪುಟ’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಗುರುವಾರ (ಅ.07) ಬಿಡುಗಡೆಯಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಿಂದ ಸಂಸದ ವರುಣ್ ಗಾಂಧಿ ಮತ್ತು ಅವರ ತಾಯಿ ಮೇನಕಾ ಗಾಂಧಿಯನ್ನು ಕೈ ಬಿಟ್ಟಿರುವ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿರುವ ವರುಣ್ ಗಾಂಧಿ,’ ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ಸಭೆಗೂ ಹಾಜರಾಗಿಲ್ಲ. ಸಮಿತಿಯಲ್ಲಿ ಇದ್ದೆ ಎಂದು ನನಗೆ ಅನಿಸುತ್ತಿಲ್ಲ’ ಎಂದಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ರೈತರ ಕೊಲೆ ಬಗ್ಗೆ ತೀವ್ರ ಟೀಕೆಗಳ ಮೂಲಕ ಟ್ವೀಟ್ ಮಾಡಿ ವರುಣ್ ಗಾಂಧಿ ಸುದ್ದಿಯಾಗಿದ್ದರು. ಗುರುವಾರ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಅವರನ್ನು ಮತ್ತು ಅವರ ತಾಯಿ ಮೇನಕಾ ಗಾಂಧಿ ಹೆಸರನ್ನು ಕೈಬಿಡಲಾಗಿದೆ.

“ಕಳೆದ ಐದು ವರ್ಷಗಳಿಂದ ನಾನು ಒಂದೇ ಒಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಹಾಜರಾಗಿಲ್ಲ. ನಾನು ಅದರಲ್ಲಿ ಇದ್ದೆನೆಂದು ನಾನು ಭಾವಿಸುವುದಿಲ್ಲ” ಎಂದು 41 ವರ್ಷ ವಯಸ್ಸಿನ ವರುಣ್ ಗಾಂಧಿ ತಿಳಿಸಿದ್ದಾರೆ ಎಂದು ANI ಉಲ್ಲೇಖಿಸಿದೆ.

ಇದನ್ನೂ ಓದಿ: ‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

ಸುಬ್ರಮಣಿಯನ್ ಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಬೀರೇಂದ್ರ ಸಿಂಗ್ ಅವರು ಕೂಡ ಪಕ್ಷವನ್ನು ಟೀಕಿಸುತ್ತಿದ್ದು, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ನಿಲುವುಗಳನ್ನು ಹೊಂದಿದ್ದ ಇವರನ್ನು ಕಾರ್ಯಕಾರಿಣಿಯಿಂದ ಹೊರಗಿಡಲಾಗಿದೆ.

ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಂತಹ ಅನೇಕ ಕೇಂದ್ರ ಸಚಿವರು ಮತ್ತು ಹಿರಿಯ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಜೆಪಿಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಲಖಿಂಪುರ್ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಯಾಗಿದ್ದು, ಪ್ರಕರಣ ದಾಖಲಾಗಿದೆ. ಆದರೆ, ಇಲ್ಲಿಯವರೆಗೂ ಇನ್ನು ಬಂಧಿಸಿಲ್ಲ. ಹತ್ಯಾಕಾಂಡದ ಬಗ್ಗೆ ಮಾತನಾಡಿದ ಏಕೈಕ ಬಿಜೆಪಿ ನಾಯಕ ವರುಣ್ ಗಾಂಧಿ.

ಘಟನೆಯ ಸ್ಪಷ್ಟ ಮತ್ತು ಧೀರ್ಘ ವಿಡಿಯೊವನ್ನು ಟ್ವೀಟ್ ಮಾಡಿದ್ದ ವರುಣ್‌ ಗಾಂಧಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದರು.

ಈ ಹಿಂದೆಯೂ ಟ್ವೀಟ್ ಮಾಡಿದ್ದ ಅವರು, ರೈತರ ಸಾವಿನಲ್ಲಿ ಭಾಗಿಯಾದವರನ್ನು ಖಂಡಿಸಿದ್ದಲ್ಲದೆ, ಸರ್ಕಾರವು ತಾಳ್ಮೆಯಿಂದ ಮತ್ತು ಸಂಯಮದಿಂದ ವರ್ತಿಬೇಕು ಎಂದು ಒತ್ತಾಯಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಮತ್ತು ಮೃತಪಟ್ಟ ರೈತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವಂತೆ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...