Homeಮುಖಪುಟಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

ಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

- Advertisement -
- Advertisement -

ಸಾಕ್ಷಿ ಮಲಿಕ್ ಅವರು ಸೋಮವಾರ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸುತ್ತಿವೆ. ಆದರೆ ಇದು ಸುಳ್ಳು ಸುದ್ದಿ ಎಂದು ಸಾಕ್ಷಿಮಲಿಕ್ ಹಾಗೂ ಬಜರಂಗ್ ಪುನಿಯಾ ಸ್ಪಷ್ಟಣೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ” ಎಂದು ಮಾಧ್ಯಮ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.

ಬಜರಂಗ್ ಪುನಿಯಾ ಕೂಡ ಟ್ವೀಟ್ ಮಾಡಿದ್ದು, ”ಚಳವಳಿ ಹಿಂಪಡೆಯುವ ಸುದ್ದಿ ಕೇವಲ ವದಂತಿಯಾಗಿದೆ. ನಮಗೆ ಹಾನಿ ಮಾಡಲು ಈ ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಹಿಂದೆ ಸರಿದಿಲ್ಲ ಅಥವಾ ಚಳವಳಿಯನ್ನು ಹಿಂತೆಗೆದುಕೊಂಡಿಲ್ಲ. ಎಫ್‌ಐಆರ್‌ ದಾಖಲಿಸಿರುವುದನ್ನು ಮಹಿಳಾ ಕುಸ್ತಿಪಟುಗಳು ಹಿಂಪಡೆಯುತ್ತಾರೆ ಎಂಬ ಸುದ್ದಿಯೂ ಸುಳ್ಳು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಿರುಕುಳ ಆರೋಪ ಮಾಡಿದ್ದು, ಅವರನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್​-ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಶನಿವಾರ ತಡರಾತ್ರಿ ಸಭೆ ನಡೆದಿದ್ದು, ಕುಸ್ತಿಪಟುಗಳು ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಎತ್ತಿದ್ದರಿಂದ ರಾತ್ರಿಯವರೆಗೂ ಸಭೆ ನಡೆಯಿತು.

ಸಭೆಯು ರಾತ್ರಿ 11 ಗಂಟೆಗೆ ಪ್ರಾರಂಭವಾಯಿತು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

”ನಾವು ಗೃಹ ಸಚಿವರಿಂದ ನಾವು ಬಯಸಿದ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ. ಆದ್ದರಿಂದ ನಾವು ಸಭೆಯಿಂದ ಹೊರಬಂದೆವು. ನಾವು ಪ್ರತಿಭಟನೆಯ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ. ನಾವು ಹಿಂದೆ ಸರಿಯುವುದಿಲ್ಲ” ಎಂದು ಕಡಿಯನ್ ಹೇಳಿದರು. ಕುಸ್ತಿಪಟುಗಳು ತಮ್ಮ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಹೋದ ಕೆಲವು ದಿನಗಳ ನಂತರ ಸಭೆ ನಡೆಸಲಾಯಿತು. ಆದರೆ ರೈತರ ಮುಖಂಡ ನರೇಶ್ ಟಿಕಾಯತ್ ಅವರನ್ನು ಆ ಸಭೆಯಿಂದ ಹೊರಗಿಡಲಾಯಿತು. ಆ ನಂತರ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಆಗ್ರಹಿಸಲಾಯಿತು.

ಅಮಿತ್ ಶಾ ಭೇಟಿಗೂ ಮುನ್ನ ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದರು. ಠಾಕೂರ್ ಅವರು ”ಕ್ರೀಡಾಪುಟಗಳು ಮಾಡಿರುವ ಆರೋಪಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುತ್ತೇವೆ” ಎಂದು ಭರವಸೆ ನೀಡಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ವಯಸ್ಕ ಸೇರಿದಂತೆ ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇಲ್ಲಿಯವರೆಗೆ, ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ. ಆದರೆ ಈವರೆಗೂ ಬಂಧಿಸದಿರುವುದಕ್ಕೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...