Homeಮುಖಪುಟಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

ಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

- Advertisement -
- Advertisement -

ಸಾಕ್ಷಿ ಮಲಿಕ್ ಅವರು ಸೋಮವಾರ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸುತ್ತಿವೆ. ಆದರೆ ಇದು ಸುಳ್ಳು ಸುದ್ದಿ ಎಂದು ಸಾಕ್ಷಿಮಲಿಕ್ ಹಾಗೂ ಬಜರಂಗ್ ಪುನಿಯಾ ಸ್ಪಷ್ಟಣೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ” ಎಂದು ಮಾಧ್ಯಮ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.

ಬಜರಂಗ್ ಪುನಿಯಾ ಕೂಡ ಟ್ವೀಟ್ ಮಾಡಿದ್ದು, ”ಚಳವಳಿ ಹಿಂಪಡೆಯುವ ಸುದ್ದಿ ಕೇವಲ ವದಂತಿಯಾಗಿದೆ. ನಮಗೆ ಹಾನಿ ಮಾಡಲು ಈ ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಹಿಂದೆ ಸರಿದಿಲ್ಲ ಅಥವಾ ಚಳವಳಿಯನ್ನು ಹಿಂತೆಗೆದುಕೊಂಡಿಲ್ಲ. ಎಫ್‌ಐಆರ್‌ ದಾಖಲಿಸಿರುವುದನ್ನು ಮಹಿಳಾ ಕುಸ್ತಿಪಟುಗಳು ಹಿಂಪಡೆಯುತ್ತಾರೆ ಎಂಬ ಸುದ್ದಿಯೂ ಸುಳ್ಳು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಿರುಕುಳ ಆರೋಪ ಮಾಡಿದ್ದು, ಅವರನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್​-ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಶನಿವಾರ ತಡರಾತ್ರಿ ಸಭೆ ನಡೆದಿದ್ದು, ಕುಸ್ತಿಪಟುಗಳು ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಎತ್ತಿದ್ದರಿಂದ ರಾತ್ರಿಯವರೆಗೂ ಸಭೆ ನಡೆಯಿತು.

ಸಭೆಯು ರಾತ್ರಿ 11 ಗಂಟೆಗೆ ಪ್ರಾರಂಭವಾಯಿತು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

”ನಾವು ಗೃಹ ಸಚಿವರಿಂದ ನಾವು ಬಯಸಿದ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ. ಆದ್ದರಿಂದ ನಾವು ಸಭೆಯಿಂದ ಹೊರಬಂದೆವು. ನಾವು ಪ್ರತಿಭಟನೆಯ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ. ನಾವು ಹಿಂದೆ ಸರಿಯುವುದಿಲ್ಲ” ಎಂದು ಕಡಿಯನ್ ಹೇಳಿದರು. ಕುಸ್ತಿಪಟುಗಳು ತಮ್ಮ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಹೋದ ಕೆಲವು ದಿನಗಳ ನಂತರ ಸಭೆ ನಡೆಸಲಾಯಿತು. ಆದರೆ ರೈತರ ಮುಖಂಡ ನರೇಶ್ ಟಿಕಾಯತ್ ಅವರನ್ನು ಆ ಸಭೆಯಿಂದ ಹೊರಗಿಡಲಾಯಿತು. ಆ ನಂತರ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಆಗ್ರಹಿಸಲಾಯಿತು.

ಅಮಿತ್ ಶಾ ಭೇಟಿಗೂ ಮುನ್ನ ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದರು. ಠಾಕೂರ್ ಅವರು ”ಕ್ರೀಡಾಪುಟಗಳು ಮಾಡಿರುವ ಆರೋಪಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುತ್ತೇವೆ” ಎಂದು ಭರವಸೆ ನೀಡಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ವಯಸ್ಕ ಸೇರಿದಂತೆ ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇಲ್ಲಿಯವರೆಗೆ, ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ. ಆದರೆ ಈವರೆಗೂ ಬಂಧಿಸದಿರುವುದಕ್ಕೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...