Homeಕರ್ನಾಟಕಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

- Advertisement -
- Advertisement -

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು.

ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ತಾರತಮ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸಲು ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒಕ್ಕೋರಲಿನಿಂದ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾತಿ ವಿರೋಧಿ ಕಾರ್ಯಕರ್ತರಾದ ರಾಧಿಕಾ ವೇಮುಲ, “ಶಾಂತ ಸ್ವಭಾವದ, ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ತಮ್ಮ ಮಗ ರೋಹಿತ್ ವೇಮುಲ ಹೀಗೆ ಒಂದು ದಿನ ಕಣ್ಮರೆಯಾಗುತ್ತಾನೆ ಎಂದು ಊಹಿಸಿರಲಿಲ್ಲ” ಎಂದು ಕಣ್ಣೀರಾದ ಅವರು, ದಲಿತ ವಿದ್ಯಾರ್ಥಿಗಳು ಸಾಂಸ್ಥಿಕವಾಗಿ ಹೇಗೆ ತಾರತಮ್ಯಕ್ಕೆ ಒಳಗಾಗಿದ್ದರೆ ಎಂಬುದನ್ನು ವಿವರಿಸಿದರು.

“ಐಐಎಂ-ಬಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಪ್ರೊ.ಗೋಪಾಲ ದಾಸ್‌ರವರ ಜೊತೆಗೆ ನಾವಿದ್ದೇವೆ. ಬಿಜೆಪಿ ಪಕ್ಷದಲ್ಲಿರುವ ದಲಿತ ವಿರೋಧಿ ಜನರಿಂದ ನನಗೆ ಈವರೆಗೂ ನ್ಯಾಯ ದೊರಕಿಲ್ಲ. ಜಾತಿ ನಿರ್ಮೂಲನೆಗಾಗಿ ನಾನು ನನ್ನ ಹೋರಾಟವನ್ನು ಹೀಗೆ ನಿರಂತರವಾಗಿ ಮುಂದುವರೆಸುತ್ತೇನೆ. ಏಕೆಂದರೆ, ನಾನು ಅನುಭಸಿದ ನೋವನ್ನು ಬೇರಾವ ತಾಯಿಯು ಅನುಭವಿಸಬಾರದು” ಎಂದು ಭಾವುಕರಾದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಜನರ ಆಂದೋಲನಗಳ ಬಗ್ಗೆ ಒಕ್ಕೂಟ ಸರ್ಕಾರ ಅಸಹಿಸ್ಣುತೆಯಿಂದ ನಡೆದುಕೊಳ್ಳುತ್ತಿದೆ” ಎಂದರು.

“ಬಿಜೆಪಿ ಸರ್ಕಾರದ ಕೋಮುವಾದಿ ಅಜೆಂಡಾದ ಫಲವಾಗಿ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ನಾಶವಾಗುತ್ತಿದೆ. ಈ ಹಿಂದೆ, ಸಿದ್ದರಾಮಯ್ಯ ಅವರ ಸರ್ಕಾರ ಮೂಢನಂಬಿಕೆಗಳ ವಿರುದ್ಧ ಕರಡು ಕಾಯ್ದೆಯನ್ನು ತಂದಿದ್ದರು. ಆದರೆ, ಅದು ಕಾನೂನಾಗಲಿಲ್ಲ. ಅದೇ ರೀತಿ, ಡಾ.ಸಿದ್ಧಲಿಂಗಯ್ಯ ರವರು ಅಂತರ್ಜಾತಿ ವಿವಾಹವಾದ ದಂಪತಿಗಳ ಮಕ್ಕಳಿಗೆ ಮೀಸಲಾತಿ ತರಬೇಕೆಂದು ಒತ್ತಾಯಿಸಿದ್ದರು. ಆದರೆ, ಅದು ಸಹ ಜಾರಿಯಾಗಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆಯರು ಮಾಡುವ ಮಧ್ಯಾಹ್ನದ ಬಿಸಿ ಊಟವನ್ನು ಮಕ್ಕಳು ನಿರಾಕರಿಸುವಂತೆ ಈ ಜಾತಿ ವ್ಯವಸ್ಥೆಯು ಅವರಿಗೆ ಹೇಳಿಕೊಡುತ್ತದೆ. ಜಾತಿವಾದವು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಟು ವ್ಯಾಪಕವಾಗಿದ್ದರೆ, ಇದರ ವಿರುದ್ಧ ಹೋರಾಡಲು ರೋಹಿತ್ ಕಾಯ್ದೆಯಂತಹ ವಿಶೇಷ ಕಾನೂನಿನ ಅಗತ್ಯವಿದೆ” ಎಂದು ಆಗ್ರಹಿಸಿದರು.

ರೋಹಿತ್ ವೆಮುಲಾ ಸಹಪಾಠಿಯಾದ ದೋಂತ ಪ್ರಶಾತ್ ರವರು ಮಾತನಾಡಿ, “ವಿನಾಕಾರಣ ಮೂರು ಬಾರಿ ರೋಹಿತ್ ವೇಮುಲ ಮತ್ತು ಅವರ ಮೂರು ಜನ ಸ್ನೇಹಿತರನ್ನು ಶಿಕ್ಷೆಗೆ ಒಳಪಡಿಸಿ, ಎಲ್ಲರ ಮೇಲೂ ಸಾಮಾಜಿಕ ಬಹಿಷ್ಕಾರ ಹೇರಿದ್ದರು” ಎಂದರು.

“ನಮ್ಮನ್ನು ‘ಗೂಂಡಾಗಳು’ ಎಂದು ಕರೆಯುತ್ತಿದ್ದರು, ದೇಶದಾದ್ಯಂತ ದಲಿತರನ್ನು ಇದೇ ರೀತಿ ಅವಮಾನಿಸುತ್ತಾರೆ, ಇದು ನಮ್ಮ ಘನತೆಗೆ ಧಕ್ಕೆಯುಂಟು ಮಾಡುವ ವಿಷಯ. ವಿಶ್ವವಿದ್ಯಾಲಯಗಳು ವ್ಯವಸ್ಥಿತವಾಗಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳನ್ನು ಬೇರ್ಪಡಿಸುತ್ತಿವೆ. ಇದಕ್ಕಾಗಿಯೇ ರೋಹಿತ್ ಕಾಯ್ದೆಯ ಅಗತ್ಯವಿದೆ” ಎಂದರು.

ಪ್ರಗತಿಪರ ಚಿಂತಕರು ಹಾಗು ಬರಹಗಾರರಾದ ವಿಕಾಸ್ ಮೌರ್ಯ ಮಾತನಾಡಿ, “ಸರ್ಕಾರ, ಶೈಕ್ಷಣಿಕ ಸಂಸ್ಥೆಗಳಲ್ಲಿ ಎಷ್ಟು ಜನ ಎಸ್‌ಸಿ/Sಎಸ್‌ಟಿ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಮಂಡಿಸಿದರು. ಆದರೆ, ಇದನ್ನು ತಡೆಯಲು ಏನು ಮಾಡಬೇಕು ಎಂದು ‌ಮಾತ್ರ ಸರ್ಕಾರ ಯೋಚಿಸುತ್ತಿಲ್ಲ. ಭಾರತದಲ್ಲಿ ಬ್ರಾಹ್ಮಣವಾದ ಹಾಗೂ ಬಂಡವಾಳಶಾಹಿ ಪದ್ದತಿ ಎರಡು ಸೇರಿ ದಲಿತ ಬಹುಜನ ವಿಧ್ಯಾರ್ಥಿಗಳನ್ನು ಮೂಲೆಗುಂಪು ಮಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ದಶಕಗಳ ನಂತರವೂ ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಡೊಂದು ಅಸಮಾನತೆ ಹಾಗೂ ತಾರತಮ್ಯ ಇರುವುದು ಬೇಸರದ ವಿಷಯ” ಎಂದರು.

ಆಲ್ ಇಂಡಿಯಾ ವಿಧ್ಯಾರ್ಥಿ ಸಂಘಟನೆಯ ಲೇಖಾ ಅಡವಿ ಅವರು ಮಾತನಾಡಿ, ” ಶೈಕ್ಷಣಿಕ ಸಂಸ್ಥೆಗಳಲ್ಲಿ ‌ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಇಂದು ಜಾತಿ ತಾರತಮ್ಯದಿಂದ ದಲಿತ ವಿಧ್ಯಾರ್ಥಿಗಳಿಗೆ ಕಾಲೇಜು ಪ್ರವೇಶಿಸುವುದು ಕಷ್ಟವಾಗಿದೆ. ಕಾಲೇಜು ಸೇರಿಕೊಂಡ ಮೇಲೆ ಅಲ್ಲಿ ತಾರತಮ್ಯ ಎದುರಿಸುತಿದ್ದಾರೆ, ಕೆಲವರಿಗೆ ತಮ್ಮ ಓದು ಮುಂದುವರಿಸಲಾಗುತ್ತಿಲ್ಲ. ಈ ತಾರತಮ್ಯ ಹಾಗೂ ಮಾನಸಿಕ ಹಿಂಸೆ ತಡೆಯಲಾರದೆ ಕೆಲ ವಿಧ್ಯಾರ್ಥಿಗಳು ತಮ್ಮ ಪ್ರಾಣತ್ಯಾಗ ಮಾಡುತಿದ್ದಾರೆ. ಹಾಗಾಗಿ, ನಾವು ಹಲವು ಸಂಘಟನೆಗಳು ಸೇರಿ ರೋಹಿತ್ ಕಾಯ್ದೆಗಾಗಿ ಜನಾಂದೋಲನದ ಅಡಿಯಲ್ಲಿ ಬಂದಿದ್ದೇವೆ. ರೋಹಿತ್ ಕಾಯ್ದೆಯು, ಜಾತಿ ತಾರತಮ್ಯ ತಡಿಯುವುದಲ್ಲದೆ , ಎಸ್‌ಸಿ/ಎಸ್‌ಟಿ ವಿಧ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದಕ್ಕೆ,‌ಕಾಲೇಜುಗಳಲ್ಲಿ ಅಕ್ಯಾಡೆಮಿಕ್ ಬೆಂಬಲ‌ ಸಹ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲ, ರಾಜ ವೇಮುಲ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಮಾವಳ್ಳಿ ಶಂಕರ್, ದೊಂತ ಪ್ರಶಾಂತ್, ಲೇಖಕರಾದ ವಿಕಾಸ್ ಆರ್ ಮೌರ್ಯ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸ್ಸೋಸಿಟೇಷನ್ (ಎಐಎಸ್‌ಎ) ನ ಲೇಖ ಅಡವಿ ಉಪಸ್ಥಿತರಿದ್ದರು.

ಇದನ್ನೂ ಓದಿ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...