Homeಕರ್ನಾಟಕಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

- Advertisement -
- Advertisement -

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು.

ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ತಾರತಮ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸಲು ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒಕ್ಕೋರಲಿನಿಂದ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾತಿ ವಿರೋಧಿ ಕಾರ್ಯಕರ್ತರಾದ ರಾಧಿಕಾ ವೇಮುಲ, “ಶಾಂತ ಸ್ವಭಾವದ, ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ತಮ್ಮ ಮಗ ರೋಹಿತ್ ವೇಮುಲ ಹೀಗೆ ಒಂದು ದಿನ ಕಣ್ಮರೆಯಾಗುತ್ತಾನೆ ಎಂದು ಊಹಿಸಿರಲಿಲ್ಲ” ಎಂದು ಕಣ್ಣೀರಾದ ಅವರು, ದಲಿತ ವಿದ್ಯಾರ್ಥಿಗಳು ಸಾಂಸ್ಥಿಕವಾಗಿ ಹೇಗೆ ತಾರತಮ್ಯಕ್ಕೆ ಒಳಗಾಗಿದ್ದರೆ ಎಂಬುದನ್ನು ವಿವರಿಸಿದರು.

“ಐಐಎಂ-ಬಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಪ್ರೊ.ಗೋಪಾಲ ದಾಸ್‌ರವರ ಜೊತೆಗೆ ನಾವಿದ್ದೇವೆ. ಬಿಜೆಪಿ ಪಕ್ಷದಲ್ಲಿರುವ ದಲಿತ ವಿರೋಧಿ ಜನರಿಂದ ನನಗೆ ಈವರೆಗೂ ನ್ಯಾಯ ದೊರಕಿಲ್ಲ. ಜಾತಿ ನಿರ್ಮೂಲನೆಗಾಗಿ ನಾನು ನನ್ನ ಹೋರಾಟವನ್ನು ಹೀಗೆ ನಿರಂತರವಾಗಿ ಮುಂದುವರೆಸುತ್ತೇನೆ. ಏಕೆಂದರೆ, ನಾನು ಅನುಭಸಿದ ನೋವನ್ನು ಬೇರಾವ ತಾಯಿಯು ಅನುಭವಿಸಬಾರದು” ಎಂದು ಭಾವುಕರಾದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಜನರ ಆಂದೋಲನಗಳ ಬಗ್ಗೆ ಒಕ್ಕೂಟ ಸರ್ಕಾರ ಅಸಹಿಸ್ಣುತೆಯಿಂದ ನಡೆದುಕೊಳ್ಳುತ್ತಿದೆ” ಎಂದರು.

“ಬಿಜೆಪಿ ಸರ್ಕಾರದ ಕೋಮುವಾದಿ ಅಜೆಂಡಾದ ಫಲವಾಗಿ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ನಾಶವಾಗುತ್ತಿದೆ. ಈ ಹಿಂದೆ, ಸಿದ್ದರಾಮಯ್ಯ ಅವರ ಸರ್ಕಾರ ಮೂಢನಂಬಿಕೆಗಳ ವಿರುದ್ಧ ಕರಡು ಕಾಯ್ದೆಯನ್ನು ತಂದಿದ್ದರು. ಆದರೆ, ಅದು ಕಾನೂನಾಗಲಿಲ್ಲ. ಅದೇ ರೀತಿ, ಡಾ.ಸಿದ್ಧಲಿಂಗಯ್ಯ ರವರು ಅಂತರ್ಜಾತಿ ವಿವಾಹವಾದ ದಂಪತಿಗಳ ಮಕ್ಕಳಿಗೆ ಮೀಸಲಾತಿ ತರಬೇಕೆಂದು ಒತ್ತಾಯಿಸಿದ್ದರು. ಆದರೆ, ಅದು ಸಹ ಜಾರಿಯಾಗಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆಯರು ಮಾಡುವ ಮಧ್ಯಾಹ್ನದ ಬಿಸಿ ಊಟವನ್ನು ಮಕ್ಕಳು ನಿರಾಕರಿಸುವಂತೆ ಈ ಜಾತಿ ವ್ಯವಸ್ಥೆಯು ಅವರಿಗೆ ಹೇಳಿಕೊಡುತ್ತದೆ. ಜಾತಿವಾದವು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಟು ವ್ಯಾಪಕವಾಗಿದ್ದರೆ, ಇದರ ವಿರುದ್ಧ ಹೋರಾಡಲು ರೋಹಿತ್ ಕಾಯ್ದೆಯಂತಹ ವಿಶೇಷ ಕಾನೂನಿನ ಅಗತ್ಯವಿದೆ” ಎಂದು ಆಗ್ರಹಿಸಿದರು.

ರೋಹಿತ್ ವೆಮುಲಾ ಸಹಪಾಠಿಯಾದ ದೋಂತ ಪ್ರಶಾತ್ ರವರು ಮಾತನಾಡಿ, “ವಿನಾಕಾರಣ ಮೂರು ಬಾರಿ ರೋಹಿತ್ ವೇಮುಲ ಮತ್ತು ಅವರ ಮೂರು ಜನ ಸ್ನೇಹಿತರನ್ನು ಶಿಕ್ಷೆಗೆ ಒಳಪಡಿಸಿ, ಎಲ್ಲರ ಮೇಲೂ ಸಾಮಾಜಿಕ ಬಹಿಷ್ಕಾರ ಹೇರಿದ್ದರು” ಎಂದರು.

“ನಮ್ಮನ್ನು ‘ಗೂಂಡಾಗಳು’ ಎಂದು ಕರೆಯುತ್ತಿದ್ದರು, ದೇಶದಾದ್ಯಂತ ದಲಿತರನ್ನು ಇದೇ ರೀತಿ ಅವಮಾನಿಸುತ್ತಾರೆ, ಇದು ನಮ್ಮ ಘನತೆಗೆ ಧಕ್ಕೆಯುಂಟು ಮಾಡುವ ವಿಷಯ. ವಿಶ್ವವಿದ್ಯಾಲಯಗಳು ವ್ಯವಸ್ಥಿತವಾಗಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳನ್ನು ಬೇರ್ಪಡಿಸುತ್ತಿವೆ. ಇದಕ್ಕಾಗಿಯೇ ರೋಹಿತ್ ಕಾಯ್ದೆಯ ಅಗತ್ಯವಿದೆ” ಎಂದರು.

ಪ್ರಗತಿಪರ ಚಿಂತಕರು ಹಾಗು ಬರಹಗಾರರಾದ ವಿಕಾಸ್ ಮೌರ್ಯ ಮಾತನಾಡಿ, “ಸರ್ಕಾರ, ಶೈಕ್ಷಣಿಕ ಸಂಸ್ಥೆಗಳಲ್ಲಿ ಎಷ್ಟು ಜನ ಎಸ್‌ಸಿ/Sಎಸ್‌ಟಿ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಮಂಡಿಸಿದರು. ಆದರೆ, ಇದನ್ನು ತಡೆಯಲು ಏನು ಮಾಡಬೇಕು ಎಂದು ‌ಮಾತ್ರ ಸರ್ಕಾರ ಯೋಚಿಸುತ್ತಿಲ್ಲ. ಭಾರತದಲ್ಲಿ ಬ್ರಾಹ್ಮಣವಾದ ಹಾಗೂ ಬಂಡವಾಳಶಾಹಿ ಪದ್ದತಿ ಎರಡು ಸೇರಿ ದಲಿತ ಬಹುಜನ ವಿಧ್ಯಾರ್ಥಿಗಳನ್ನು ಮೂಲೆಗುಂಪು ಮಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ದಶಕಗಳ ನಂತರವೂ ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಡೊಂದು ಅಸಮಾನತೆ ಹಾಗೂ ತಾರತಮ್ಯ ಇರುವುದು ಬೇಸರದ ವಿಷಯ” ಎಂದರು.

ಆಲ್ ಇಂಡಿಯಾ ವಿಧ್ಯಾರ್ಥಿ ಸಂಘಟನೆಯ ಲೇಖಾ ಅಡವಿ ಅವರು ಮಾತನಾಡಿ, ” ಶೈಕ್ಷಣಿಕ ಸಂಸ್ಥೆಗಳಲ್ಲಿ ‌ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಇಂದು ಜಾತಿ ತಾರತಮ್ಯದಿಂದ ದಲಿತ ವಿಧ್ಯಾರ್ಥಿಗಳಿಗೆ ಕಾಲೇಜು ಪ್ರವೇಶಿಸುವುದು ಕಷ್ಟವಾಗಿದೆ. ಕಾಲೇಜು ಸೇರಿಕೊಂಡ ಮೇಲೆ ಅಲ್ಲಿ ತಾರತಮ್ಯ ಎದುರಿಸುತಿದ್ದಾರೆ, ಕೆಲವರಿಗೆ ತಮ್ಮ ಓದು ಮುಂದುವರಿಸಲಾಗುತ್ತಿಲ್ಲ. ಈ ತಾರತಮ್ಯ ಹಾಗೂ ಮಾನಸಿಕ ಹಿಂಸೆ ತಡೆಯಲಾರದೆ ಕೆಲ ವಿಧ್ಯಾರ್ಥಿಗಳು ತಮ್ಮ ಪ್ರಾಣತ್ಯಾಗ ಮಾಡುತಿದ್ದಾರೆ. ಹಾಗಾಗಿ, ನಾವು ಹಲವು ಸಂಘಟನೆಗಳು ಸೇರಿ ರೋಹಿತ್ ಕಾಯ್ದೆಗಾಗಿ ಜನಾಂದೋಲನದ ಅಡಿಯಲ್ಲಿ ಬಂದಿದ್ದೇವೆ. ರೋಹಿತ್ ಕಾಯ್ದೆಯು, ಜಾತಿ ತಾರತಮ್ಯ ತಡಿಯುವುದಲ್ಲದೆ , ಎಸ್‌ಸಿ/ಎಸ್‌ಟಿ ವಿಧ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದಕ್ಕೆ,‌ಕಾಲೇಜುಗಳಲ್ಲಿ ಅಕ್ಯಾಡೆಮಿಕ್ ಬೆಂಬಲ‌ ಸಹ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲ, ರಾಜ ವೇಮುಲ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಮಾವಳ್ಳಿ ಶಂಕರ್, ದೊಂತ ಪ್ರಶಾಂತ್, ಲೇಖಕರಾದ ವಿಕಾಸ್ ಆರ್ ಮೌರ್ಯ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸ್ಸೋಸಿಟೇಷನ್ (ಎಐಎಸ್‌ಎ) ನ ಲೇಖ ಅಡವಿ ಉಪಸ್ಥಿತರಿದ್ದರು.

ಇದನ್ನೂ ಓದಿ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...