Homeಕರ್ನಾಟಕಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

- Advertisement -
- Advertisement -

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು.

ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ತಾರತಮ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸಲು ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒಕ್ಕೋರಲಿನಿಂದ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾತಿ ವಿರೋಧಿ ಕಾರ್ಯಕರ್ತರಾದ ರಾಧಿಕಾ ವೇಮುಲ, “ಶಾಂತ ಸ್ವಭಾವದ, ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ತಮ್ಮ ಮಗ ರೋಹಿತ್ ವೇಮುಲ ಹೀಗೆ ಒಂದು ದಿನ ಕಣ್ಮರೆಯಾಗುತ್ತಾನೆ ಎಂದು ಊಹಿಸಿರಲಿಲ್ಲ” ಎಂದು ಕಣ್ಣೀರಾದ ಅವರು, ದಲಿತ ವಿದ್ಯಾರ್ಥಿಗಳು ಸಾಂಸ್ಥಿಕವಾಗಿ ಹೇಗೆ ತಾರತಮ್ಯಕ್ಕೆ ಒಳಗಾಗಿದ್ದರೆ ಎಂಬುದನ್ನು ವಿವರಿಸಿದರು.

“ಐಐಎಂ-ಬಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಪ್ರೊ.ಗೋಪಾಲ ದಾಸ್‌ರವರ ಜೊತೆಗೆ ನಾವಿದ್ದೇವೆ. ಬಿಜೆಪಿ ಪಕ್ಷದಲ್ಲಿರುವ ದಲಿತ ವಿರೋಧಿ ಜನರಿಂದ ನನಗೆ ಈವರೆಗೂ ನ್ಯಾಯ ದೊರಕಿಲ್ಲ. ಜಾತಿ ನಿರ್ಮೂಲನೆಗಾಗಿ ನಾನು ನನ್ನ ಹೋರಾಟವನ್ನು ಹೀಗೆ ನಿರಂತರವಾಗಿ ಮುಂದುವರೆಸುತ್ತೇನೆ. ಏಕೆಂದರೆ, ನಾನು ಅನುಭಸಿದ ನೋವನ್ನು ಬೇರಾವ ತಾಯಿಯು ಅನುಭವಿಸಬಾರದು” ಎಂದು ಭಾವುಕರಾದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಜನರ ಆಂದೋಲನಗಳ ಬಗ್ಗೆ ಒಕ್ಕೂಟ ಸರ್ಕಾರ ಅಸಹಿಸ್ಣುತೆಯಿಂದ ನಡೆದುಕೊಳ್ಳುತ್ತಿದೆ” ಎಂದರು.

“ಬಿಜೆಪಿ ಸರ್ಕಾರದ ಕೋಮುವಾದಿ ಅಜೆಂಡಾದ ಫಲವಾಗಿ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ನಾಶವಾಗುತ್ತಿದೆ. ಈ ಹಿಂದೆ, ಸಿದ್ದರಾಮಯ್ಯ ಅವರ ಸರ್ಕಾರ ಮೂಢನಂಬಿಕೆಗಳ ವಿರುದ್ಧ ಕರಡು ಕಾಯ್ದೆಯನ್ನು ತಂದಿದ್ದರು. ಆದರೆ, ಅದು ಕಾನೂನಾಗಲಿಲ್ಲ. ಅದೇ ರೀತಿ, ಡಾ.ಸಿದ್ಧಲಿಂಗಯ್ಯ ರವರು ಅಂತರ್ಜಾತಿ ವಿವಾಹವಾದ ದಂಪತಿಗಳ ಮಕ್ಕಳಿಗೆ ಮೀಸಲಾತಿ ತರಬೇಕೆಂದು ಒತ್ತಾಯಿಸಿದ್ದರು. ಆದರೆ, ಅದು ಸಹ ಜಾರಿಯಾಗಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆಯರು ಮಾಡುವ ಮಧ್ಯಾಹ್ನದ ಬಿಸಿ ಊಟವನ್ನು ಮಕ್ಕಳು ನಿರಾಕರಿಸುವಂತೆ ಈ ಜಾತಿ ವ್ಯವಸ್ಥೆಯು ಅವರಿಗೆ ಹೇಳಿಕೊಡುತ್ತದೆ. ಜಾತಿವಾದವು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಟು ವ್ಯಾಪಕವಾಗಿದ್ದರೆ, ಇದರ ವಿರುದ್ಧ ಹೋರಾಡಲು ರೋಹಿತ್ ಕಾಯ್ದೆಯಂತಹ ವಿಶೇಷ ಕಾನೂನಿನ ಅಗತ್ಯವಿದೆ” ಎಂದು ಆಗ್ರಹಿಸಿದರು.

ರೋಹಿತ್ ವೆಮುಲಾ ಸಹಪಾಠಿಯಾದ ದೋಂತ ಪ್ರಶಾತ್ ರವರು ಮಾತನಾಡಿ, “ವಿನಾಕಾರಣ ಮೂರು ಬಾರಿ ರೋಹಿತ್ ವೇಮುಲ ಮತ್ತು ಅವರ ಮೂರು ಜನ ಸ್ನೇಹಿತರನ್ನು ಶಿಕ್ಷೆಗೆ ಒಳಪಡಿಸಿ, ಎಲ್ಲರ ಮೇಲೂ ಸಾಮಾಜಿಕ ಬಹಿಷ್ಕಾರ ಹೇರಿದ್ದರು” ಎಂದರು.

“ನಮ್ಮನ್ನು ‘ಗೂಂಡಾಗಳು’ ಎಂದು ಕರೆಯುತ್ತಿದ್ದರು, ದೇಶದಾದ್ಯಂತ ದಲಿತರನ್ನು ಇದೇ ರೀತಿ ಅವಮಾನಿಸುತ್ತಾರೆ, ಇದು ನಮ್ಮ ಘನತೆಗೆ ಧಕ್ಕೆಯುಂಟು ಮಾಡುವ ವಿಷಯ. ವಿಶ್ವವಿದ್ಯಾಲಯಗಳು ವ್ಯವಸ್ಥಿತವಾಗಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳನ್ನು ಬೇರ್ಪಡಿಸುತ್ತಿವೆ. ಇದಕ್ಕಾಗಿಯೇ ರೋಹಿತ್ ಕಾಯ್ದೆಯ ಅಗತ್ಯವಿದೆ” ಎಂದರು.

ಪ್ರಗತಿಪರ ಚಿಂತಕರು ಹಾಗು ಬರಹಗಾರರಾದ ವಿಕಾಸ್ ಮೌರ್ಯ ಮಾತನಾಡಿ, “ಸರ್ಕಾರ, ಶೈಕ್ಷಣಿಕ ಸಂಸ್ಥೆಗಳಲ್ಲಿ ಎಷ್ಟು ಜನ ಎಸ್‌ಸಿ/Sಎಸ್‌ಟಿ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಮಂಡಿಸಿದರು. ಆದರೆ, ಇದನ್ನು ತಡೆಯಲು ಏನು ಮಾಡಬೇಕು ಎಂದು ‌ಮಾತ್ರ ಸರ್ಕಾರ ಯೋಚಿಸುತ್ತಿಲ್ಲ. ಭಾರತದಲ್ಲಿ ಬ್ರಾಹ್ಮಣವಾದ ಹಾಗೂ ಬಂಡವಾಳಶಾಹಿ ಪದ್ದತಿ ಎರಡು ಸೇರಿ ದಲಿತ ಬಹುಜನ ವಿಧ್ಯಾರ್ಥಿಗಳನ್ನು ಮೂಲೆಗುಂಪು ಮಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ದಶಕಗಳ ನಂತರವೂ ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಡೊಂದು ಅಸಮಾನತೆ ಹಾಗೂ ತಾರತಮ್ಯ ಇರುವುದು ಬೇಸರದ ವಿಷಯ” ಎಂದರು.

ಆಲ್ ಇಂಡಿಯಾ ವಿಧ್ಯಾರ್ಥಿ ಸಂಘಟನೆಯ ಲೇಖಾ ಅಡವಿ ಅವರು ಮಾತನಾಡಿ, ” ಶೈಕ್ಷಣಿಕ ಸಂಸ್ಥೆಗಳಲ್ಲಿ ‌ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಇಂದು ಜಾತಿ ತಾರತಮ್ಯದಿಂದ ದಲಿತ ವಿಧ್ಯಾರ್ಥಿಗಳಿಗೆ ಕಾಲೇಜು ಪ್ರವೇಶಿಸುವುದು ಕಷ್ಟವಾಗಿದೆ. ಕಾಲೇಜು ಸೇರಿಕೊಂಡ ಮೇಲೆ ಅಲ್ಲಿ ತಾರತಮ್ಯ ಎದುರಿಸುತಿದ್ದಾರೆ, ಕೆಲವರಿಗೆ ತಮ್ಮ ಓದು ಮುಂದುವರಿಸಲಾಗುತ್ತಿಲ್ಲ. ಈ ತಾರತಮ್ಯ ಹಾಗೂ ಮಾನಸಿಕ ಹಿಂಸೆ ತಡೆಯಲಾರದೆ ಕೆಲ ವಿಧ್ಯಾರ್ಥಿಗಳು ತಮ್ಮ ಪ್ರಾಣತ್ಯಾಗ ಮಾಡುತಿದ್ದಾರೆ. ಹಾಗಾಗಿ, ನಾವು ಹಲವು ಸಂಘಟನೆಗಳು ಸೇರಿ ರೋಹಿತ್ ಕಾಯ್ದೆಗಾಗಿ ಜನಾಂದೋಲನದ ಅಡಿಯಲ್ಲಿ ಬಂದಿದ್ದೇವೆ. ರೋಹಿತ್ ಕಾಯ್ದೆಯು, ಜಾತಿ ತಾರತಮ್ಯ ತಡಿಯುವುದಲ್ಲದೆ , ಎಸ್‌ಸಿ/ಎಸ್‌ಟಿ ವಿಧ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದಕ್ಕೆ,‌ಕಾಲೇಜುಗಳಲ್ಲಿ ಅಕ್ಯಾಡೆಮಿಕ್ ಬೆಂಬಲ‌ ಸಹ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲ, ರಾಜ ವೇಮುಲ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಮಾವಳ್ಳಿ ಶಂಕರ್, ದೊಂತ ಪ್ರಶಾಂತ್, ಲೇಖಕರಾದ ವಿಕಾಸ್ ಆರ್ ಮೌರ್ಯ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸ್ಸೋಸಿಟೇಷನ್ (ಎಐಎಸ್‌ಎ) ನ ಲೇಖ ಅಡವಿ ಉಪಸ್ಥಿತರಿದ್ದರು.

ಇದನ್ನೂ ಓದಿ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...