Homeಕರ್ನಾಟಕಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

- Advertisement -
- Advertisement -

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು.

ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ತಾರತಮ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸಲು ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒಕ್ಕೋರಲಿನಿಂದ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾತಿ ವಿರೋಧಿ ಕಾರ್ಯಕರ್ತರಾದ ರಾಧಿಕಾ ವೇಮುಲ, “ಶಾಂತ ಸ್ವಭಾವದ, ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ತಮ್ಮ ಮಗ ರೋಹಿತ್ ವೇಮುಲ ಹೀಗೆ ಒಂದು ದಿನ ಕಣ್ಮರೆಯಾಗುತ್ತಾನೆ ಎಂದು ಊಹಿಸಿರಲಿಲ್ಲ” ಎಂದು ಕಣ್ಣೀರಾದ ಅವರು, ದಲಿತ ವಿದ್ಯಾರ್ಥಿಗಳು ಸಾಂಸ್ಥಿಕವಾಗಿ ಹೇಗೆ ತಾರತಮ್ಯಕ್ಕೆ ಒಳಗಾಗಿದ್ದರೆ ಎಂಬುದನ್ನು ವಿವರಿಸಿದರು.

“ಐಐಎಂ-ಬಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಪ್ರೊ.ಗೋಪಾಲ ದಾಸ್‌ರವರ ಜೊತೆಗೆ ನಾವಿದ್ದೇವೆ. ಬಿಜೆಪಿ ಪಕ್ಷದಲ್ಲಿರುವ ದಲಿತ ವಿರೋಧಿ ಜನರಿಂದ ನನಗೆ ಈವರೆಗೂ ನ್ಯಾಯ ದೊರಕಿಲ್ಲ. ಜಾತಿ ನಿರ್ಮೂಲನೆಗಾಗಿ ನಾನು ನನ್ನ ಹೋರಾಟವನ್ನು ಹೀಗೆ ನಿರಂತರವಾಗಿ ಮುಂದುವರೆಸುತ್ತೇನೆ. ಏಕೆಂದರೆ, ನಾನು ಅನುಭಸಿದ ನೋವನ್ನು ಬೇರಾವ ತಾಯಿಯು ಅನುಭವಿಸಬಾರದು” ಎಂದು ಭಾವುಕರಾದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಜನರ ಆಂದೋಲನಗಳ ಬಗ್ಗೆ ಒಕ್ಕೂಟ ಸರ್ಕಾರ ಅಸಹಿಸ್ಣುತೆಯಿಂದ ನಡೆದುಕೊಳ್ಳುತ್ತಿದೆ” ಎಂದರು.

“ಬಿಜೆಪಿ ಸರ್ಕಾರದ ಕೋಮುವಾದಿ ಅಜೆಂಡಾದ ಫಲವಾಗಿ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ನಾಶವಾಗುತ್ತಿದೆ. ಈ ಹಿಂದೆ, ಸಿದ್ದರಾಮಯ್ಯ ಅವರ ಸರ್ಕಾರ ಮೂಢನಂಬಿಕೆಗಳ ವಿರುದ್ಧ ಕರಡು ಕಾಯ್ದೆಯನ್ನು ತಂದಿದ್ದರು. ಆದರೆ, ಅದು ಕಾನೂನಾಗಲಿಲ್ಲ. ಅದೇ ರೀತಿ, ಡಾ.ಸಿದ್ಧಲಿಂಗಯ್ಯ ರವರು ಅಂತರ್ಜಾತಿ ವಿವಾಹವಾದ ದಂಪತಿಗಳ ಮಕ್ಕಳಿಗೆ ಮೀಸಲಾತಿ ತರಬೇಕೆಂದು ಒತ್ತಾಯಿಸಿದ್ದರು. ಆದರೆ, ಅದು ಸಹ ಜಾರಿಯಾಗಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆಯರು ಮಾಡುವ ಮಧ್ಯಾಹ್ನದ ಬಿಸಿ ಊಟವನ್ನು ಮಕ್ಕಳು ನಿರಾಕರಿಸುವಂತೆ ಈ ಜಾತಿ ವ್ಯವಸ್ಥೆಯು ಅವರಿಗೆ ಹೇಳಿಕೊಡುತ್ತದೆ. ಜಾತಿವಾದವು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಟು ವ್ಯಾಪಕವಾಗಿದ್ದರೆ, ಇದರ ವಿರುದ್ಧ ಹೋರಾಡಲು ರೋಹಿತ್ ಕಾಯ್ದೆಯಂತಹ ವಿಶೇಷ ಕಾನೂನಿನ ಅಗತ್ಯವಿದೆ” ಎಂದು ಆಗ್ರಹಿಸಿದರು.

ರೋಹಿತ್ ವೆಮುಲಾ ಸಹಪಾಠಿಯಾದ ದೋಂತ ಪ್ರಶಾತ್ ರವರು ಮಾತನಾಡಿ, “ವಿನಾಕಾರಣ ಮೂರು ಬಾರಿ ರೋಹಿತ್ ವೇಮುಲ ಮತ್ತು ಅವರ ಮೂರು ಜನ ಸ್ನೇಹಿತರನ್ನು ಶಿಕ್ಷೆಗೆ ಒಳಪಡಿಸಿ, ಎಲ್ಲರ ಮೇಲೂ ಸಾಮಾಜಿಕ ಬಹಿಷ್ಕಾರ ಹೇರಿದ್ದರು” ಎಂದರು.

“ನಮ್ಮನ್ನು ‘ಗೂಂಡಾಗಳು’ ಎಂದು ಕರೆಯುತ್ತಿದ್ದರು, ದೇಶದಾದ್ಯಂತ ದಲಿತರನ್ನು ಇದೇ ರೀತಿ ಅವಮಾನಿಸುತ್ತಾರೆ, ಇದು ನಮ್ಮ ಘನತೆಗೆ ಧಕ್ಕೆಯುಂಟು ಮಾಡುವ ವಿಷಯ. ವಿಶ್ವವಿದ್ಯಾಲಯಗಳು ವ್ಯವಸ್ಥಿತವಾಗಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳನ್ನು ಬೇರ್ಪಡಿಸುತ್ತಿವೆ. ಇದಕ್ಕಾಗಿಯೇ ರೋಹಿತ್ ಕಾಯ್ದೆಯ ಅಗತ್ಯವಿದೆ” ಎಂದರು.

ಪ್ರಗತಿಪರ ಚಿಂತಕರು ಹಾಗು ಬರಹಗಾರರಾದ ವಿಕಾಸ್ ಮೌರ್ಯ ಮಾತನಾಡಿ, “ಸರ್ಕಾರ, ಶೈಕ್ಷಣಿಕ ಸಂಸ್ಥೆಗಳಲ್ಲಿ ಎಷ್ಟು ಜನ ಎಸ್‌ಸಿ/Sಎಸ್‌ಟಿ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಮಂಡಿಸಿದರು. ಆದರೆ, ಇದನ್ನು ತಡೆಯಲು ಏನು ಮಾಡಬೇಕು ಎಂದು ‌ಮಾತ್ರ ಸರ್ಕಾರ ಯೋಚಿಸುತ್ತಿಲ್ಲ. ಭಾರತದಲ್ಲಿ ಬ್ರಾಹ್ಮಣವಾದ ಹಾಗೂ ಬಂಡವಾಳಶಾಹಿ ಪದ್ದತಿ ಎರಡು ಸೇರಿ ದಲಿತ ಬಹುಜನ ವಿಧ್ಯಾರ್ಥಿಗಳನ್ನು ಮೂಲೆಗುಂಪು ಮಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ದಶಕಗಳ ನಂತರವೂ ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಡೊಂದು ಅಸಮಾನತೆ ಹಾಗೂ ತಾರತಮ್ಯ ಇರುವುದು ಬೇಸರದ ವಿಷಯ” ಎಂದರು.

ಆಲ್ ಇಂಡಿಯಾ ವಿಧ್ಯಾರ್ಥಿ ಸಂಘಟನೆಯ ಲೇಖಾ ಅಡವಿ ಅವರು ಮಾತನಾಡಿ, ” ಶೈಕ್ಷಣಿಕ ಸಂಸ್ಥೆಗಳಲ್ಲಿ ‌ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಇಂದು ಜಾತಿ ತಾರತಮ್ಯದಿಂದ ದಲಿತ ವಿಧ್ಯಾರ್ಥಿಗಳಿಗೆ ಕಾಲೇಜು ಪ್ರವೇಶಿಸುವುದು ಕಷ್ಟವಾಗಿದೆ. ಕಾಲೇಜು ಸೇರಿಕೊಂಡ ಮೇಲೆ ಅಲ್ಲಿ ತಾರತಮ್ಯ ಎದುರಿಸುತಿದ್ದಾರೆ, ಕೆಲವರಿಗೆ ತಮ್ಮ ಓದು ಮುಂದುವರಿಸಲಾಗುತ್ತಿಲ್ಲ. ಈ ತಾರತಮ್ಯ ಹಾಗೂ ಮಾನಸಿಕ ಹಿಂಸೆ ತಡೆಯಲಾರದೆ ಕೆಲ ವಿಧ್ಯಾರ್ಥಿಗಳು ತಮ್ಮ ಪ್ರಾಣತ್ಯಾಗ ಮಾಡುತಿದ್ದಾರೆ. ಹಾಗಾಗಿ, ನಾವು ಹಲವು ಸಂಘಟನೆಗಳು ಸೇರಿ ರೋಹಿತ್ ಕಾಯ್ದೆಗಾಗಿ ಜನಾಂದೋಲನದ ಅಡಿಯಲ್ಲಿ ಬಂದಿದ್ದೇವೆ. ರೋಹಿತ್ ಕಾಯ್ದೆಯು, ಜಾತಿ ತಾರತಮ್ಯ ತಡಿಯುವುದಲ್ಲದೆ , ಎಸ್‌ಸಿ/ಎಸ್‌ಟಿ ವಿಧ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದಕ್ಕೆ,‌ಕಾಲೇಜುಗಳಲ್ಲಿ ಅಕ್ಯಾಡೆಮಿಕ್ ಬೆಂಬಲ‌ ಸಹ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲ, ರಾಜ ವೇಮುಲ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಮಾವಳ್ಳಿ ಶಂಕರ್, ದೊಂತ ಪ್ರಶಾಂತ್, ಲೇಖಕರಾದ ವಿಕಾಸ್ ಆರ್ ಮೌರ್ಯ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸ್ಸೋಸಿಟೇಷನ್ (ಎಐಎಸ್‌ಎ) ನ ಲೇಖ ಅಡವಿ ಉಪಸ್ಥಿತರಿದ್ದರು.

ಇದನ್ನೂ ಓದಿ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...