Homeಕರ್ನಾಟಕಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

- Advertisement -
- Advertisement -

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು.

ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ತಾರತಮ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸಲು ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒಕ್ಕೋರಲಿನಿಂದ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾತಿ ವಿರೋಧಿ ಕಾರ್ಯಕರ್ತರಾದ ರಾಧಿಕಾ ವೇಮುಲ, “ಶಾಂತ ಸ್ವಭಾವದ, ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ತಮ್ಮ ಮಗ ರೋಹಿತ್ ವೇಮುಲ ಹೀಗೆ ಒಂದು ದಿನ ಕಣ್ಮರೆಯಾಗುತ್ತಾನೆ ಎಂದು ಊಹಿಸಿರಲಿಲ್ಲ” ಎಂದು ಕಣ್ಣೀರಾದ ಅವರು, ದಲಿತ ವಿದ್ಯಾರ್ಥಿಗಳು ಸಾಂಸ್ಥಿಕವಾಗಿ ಹೇಗೆ ತಾರತಮ್ಯಕ್ಕೆ ಒಳಗಾಗಿದ್ದರೆ ಎಂಬುದನ್ನು ವಿವರಿಸಿದರು.

“ಐಐಎಂ-ಬಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಪ್ರೊ.ಗೋಪಾಲ ದಾಸ್‌ರವರ ಜೊತೆಗೆ ನಾವಿದ್ದೇವೆ. ಬಿಜೆಪಿ ಪಕ್ಷದಲ್ಲಿರುವ ದಲಿತ ವಿರೋಧಿ ಜನರಿಂದ ನನಗೆ ಈವರೆಗೂ ನ್ಯಾಯ ದೊರಕಿಲ್ಲ. ಜಾತಿ ನಿರ್ಮೂಲನೆಗಾಗಿ ನಾನು ನನ್ನ ಹೋರಾಟವನ್ನು ಹೀಗೆ ನಿರಂತರವಾಗಿ ಮುಂದುವರೆಸುತ್ತೇನೆ. ಏಕೆಂದರೆ, ನಾನು ಅನುಭಸಿದ ನೋವನ್ನು ಬೇರಾವ ತಾಯಿಯು ಅನುಭವಿಸಬಾರದು” ಎಂದು ಭಾವುಕರಾದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಜನರ ಆಂದೋಲನಗಳ ಬಗ್ಗೆ ಒಕ್ಕೂಟ ಸರ್ಕಾರ ಅಸಹಿಸ್ಣುತೆಯಿಂದ ನಡೆದುಕೊಳ್ಳುತ್ತಿದೆ” ಎಂದರು.

“ಬಿಜೆಪಿ ಸರ್ಕಾರದ ಕೋಮುವಾದಿ ಅಜೆಂಡಾದ ಫಲವಾಗಿ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ನಾಶವಾಗುತ್ತಿದೆ. ಈ ಹಿಂದೆ, ಸಿದ್ದರಾಮಯ್ಯ ಅವರ ಸರ್ಕಾರ ಮೂಢನಂಬಿಕೆಗಳ ವಿರುದ್ಧ ಕರಡು ಕಾಯ್ದೆಯನ್ನು ತಂದಿದ್ದರು. ಆದರೆ, ಅದು ಕಾನೂನಾಗಲಿಲ್ಲ. ಅದೇ ರೀತಿ, ಡಾ.ಸಿದ್ಧಲಿಂಗಯ್ಯ ರವರು ಅಂತರ್ಜಾತಿ ವಿವಾಹವಾದ ದಂಪತಿಗಳ ಮಕ್ಕಳಿಗೆ ಮೀಸಲಾತಿ ತರಬೇಕೆಂದು ಒತ್ತಾಯಿಸಿದ್ದರು. ಆದರೆ, ಅದು ಸಹ ಜಾರಿಯಾಗಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆಯರು ಮಾಡುವ ಮಧ್ಯಾಹ್ನದ ಬಿಸಿ ಊಟವನ್ನು ಮಕ್ಕಳು ನಿರಾಕರಿಸುವಂತೆ ಈ ಜಾತಿ ವ್ಯವಸ್ಥೆಯು ಅವರಿಗೆ ಹೇಳಿಕೊಡುತ್ತದೆ. ಜಾತಿವಾದವು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಟು ವ್ಯಾಪಕವಾಗಿದ್ದರೆ, ಇದರ ವಿರುದ್ಧ ಹೋರಾಡಲು ರೋಹಿತ್ ಕಾಯ್ದೆಯಂತಹ ವಿಶೇಷ ಕಾನೂನಿನ ಅಗತ್ಯವಿದೆ” ಎಂದು ಆಗ್ರಹಿಸಿದರು.

ರೋಹಿತ್ ವೆಮುಲಾ ಸಹಪಾಠಿಯಾದ ದೋಂತ ಪ್ರಶಾತ್ ರವರು ಮಾತನಾಡಿ, “ವಿನಾಕಾರಣ ಮೂರು ಬಾರಿ ರೋಹಿತ್ ವೇಮುಲ ಮತ್ತು ಅವರ ಮೂರು ಜನ ಸ್ನೇಹಿತರನ್ನು ಶಿಕ್ಷೆಗೆ ಒಳಪಡಿಸಿ, ಎಲ್ಲರ ಮೇಲೂ ಸಾಮಾಜಿಕ ಬಹಿಷ್ಕಾರ ಹೇರಿದ್ದರು” ಎಂದರು.

“ನಮ್ಮನ್ನು ‘ಗೂಂಡಾಗಳು’ ಎಂದು ಕರೆಯುತ್ತಿದ್ದರು, ದೇಶದಾದ್ಯಂತ ದಲಿತರನ್ನು ಇದೇ ರೀತಿ ಅವಮಾನಿಸುತ್ತಾರೆ, ಇದು ನಮ್ಮ ಘನತೆಗೆ ಧಕ್ಕೆಯುಂಟು ಮಾಡುವ ವಿಷಯ. ವಿಶ್ವವಿದ್ಯಾಲಯಗಳು ವ್ಯವಸ್ಥಿತವಾಗಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳನ್ನು ಬೇರ್ಪಡಿಸುತ್ತಿವೆ. ಇದಕ್ಕಾಗಿಯೇ ರೋಹಿತ್ ಕಾಯ್ದೆಯ ಅಗತ್ಯವಿದೆ” ಎಂದರು.

ಪ್ರಗತಿಪರ ಚಿಂತಕರು ಹಾಗು ಬರಹಗಾರರಾದ ವಿಕಾಸ್ ಮೌರ್ಯ ಮಾತನಾಡಿ, “ಸರ್ಕಾರ, ಶೈಕ್ಷಣಿಕ ಸಂಸ್ಥೆಗಳಲ್ಲಿ ಎಷ್ಟು ಜನ ಎಸ್‌ಸಿ/Sಎಸ್‌ಟಿ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಮಂಡಿಸಿದರು. ಆದರೆ, ಇದನ್ನು ತಡೆಯಲು ಏನು ಮಾಡಬೇಕು ಎಂದು ‌ಮಾತ್ರ ಸರ್ಕಾರ ಯೋಚಿಸುತ್ತಿಲ್ಲ. ಭಾರತದಲ್ಲಿ ಬ್ರಾಹ್ಮಣವಾದ ಹಾಗೂ ಬಂಡವಾಳಶಾಹಿ ಪದ್ದತಿ ಎರಡು ಸೇರಿ ದಲಿತ ಬಹುಜನ ವಿಧ್ಯಾರ್ಥಿಗಳನ್ನು ಮೂಲೆಗುಂಪು ಮಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ದಶಕಗಳ ನಂತರವೂ ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಡೊಂದು ಅಸಮಾನತೆ ಹಾಗೂ ತಾರತಮ್ಯ ಇರುವುದು ಬೇಸರದ ವಿಷಯ” ಎಂದರು.

ಆಲ್ ಇಂಡಿಯಾ ವಿಧ್ಯಾರ್ಥಿ ಸಂಘಟನೆಯ ಲೇಖಾ ಅಡವಿ ಅವರು ಮಾತನಾಡಿ, ” ಶೈಕ್ಷಣಿಕ ಸಂಸ್ಥೆಗಳಲ್ಲಿ ‌ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಇಂದು ಜಾತಿ ತಾರತಮ್ಯದಿಂದ ದಲಿತ ವಿಧ್ಯಾರ್ಥಿಗಳಿಗೆ ಕಾಲೇಜು ಪ್ರವೇಶಿಸುವುದು ಕಷ್ಟವಾಗಿದೆ. ಕಾಲೇಜು ಸೇರಿಕೊಂಡ ಮೇಲೆ ಅಲ್ಲಿ ತಾರತಮ್ಯ ಎದುರಿಸುತಿದ್ದಾರೆ, ಕೆಲವರಿಗೆ ತಮ್ಮ ಓದು ಮುಂದುವರಿಸಲಾಗುತ್ತಿಲ್ಲ. ಈ ತಾರತಮ್ಯ ಹಾಗೂ ಮಾನಸಿಕ ಹಿಂಸೆ ತಡೆಯಲಾರದೆ ಕೆಲ ವಿಧ್ಯಾರ್ಥಿಗಳು ತಮ್ಮ ಪ್ರಾಣತ್ಯಾಗ ಮಾಡುತಿದ್ದಾರೆ. ಹಾಗಾಗಿ, ನಾವು ಹಲವು ಸಂಘಟನೆಗಳು ಸೇರಿ ರೋಹಿತ್ ಕಾಯ್ದೆಗಾಗಿ ಜನಾಂದೋಲನದ ಅಡಿಯಲ್ಲಿ ಬಂದಿದ್ದೇವೆ. ರೋಹಿತ್ ಕಾಯ್ದೆಯು, ಜಾತಿ ತಾರತಮ್ಯ ತಡಿಯುವುದಲ್ಲದೆ , ಎಸ್‌ಸಿ/ಎಸ್‌ಟಿ ವಿಧ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದಕ್ಕೆ,‌ಕಾಲೇಜುಗಳಲ್ಲಿ ಅಕ್ಯಾಡೆಮಿಕ್ ಬೆಂಬಲ‌ ಸಹ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲ, ರಾಜ ವೇಮುಲ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಮಾವಳ್ಳಿ ಶಂಕರ್, ದೊಂತ ಪ್ರಶಾಂತ್, ಲೇಖಕರಾದ ವಿಕಾಸ್ ಆರ್ ಮೌರ್ಯ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸ್ಸೋಸಿಟೇಷನ್ (ಎಐಎಸ್‌ಎ) ನ ಲೇಖ ಅಡವಿ ಉಪಸ್ಥಿತರಿದ್ದರು.

ಇದನ್ನೂ ಓದಿ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...