Homeಕರ್ನಾಟಕಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

- Advertisement -
- Advertisement -

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು.

ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ತಾರತಮ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸಲು ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒಕ್ಕೋರಲಿನಿಂದ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾತಿ ವಿರೋಧಿ ಕಾರ್ಯಕರ್ತರಾದ ರಾಧಿಕಾ ವೇಮುಲ, “ಶಾಂತ ಸ್ವಭಾವದ, ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ತಮ್ಮ ಮಗ ರೋಹಿತ್ ವೇಮುಲ ಹೀಗೆ ಒಂದು ದಿನ ಕಣ್ಮರೆಯಾಗುತ್ತಾನೆ ಎಂದು ಊಹಿಸಿರಲಿಲ್ಲ” ಎಂದು ಕಣ್ಣೀರಾದ ಅವರು, ದಲಿತ ವಿದ್ಯಾರ್ಥಿಗಳು ಸಾಂಸ್ಥಿಕವಾಗಿ ಹೇಗೆ ತಾರತಮ್ಯಕ್ಕೆ ಒಳಗಾಗಿದ್ದರೆ ಎಂಬುದನ್ನು ವಿವರಿಸಿದರು.

“ಐಐಎಂ-ಬಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಪ್ರೊ.ಗೋಪಾಲ ದಾಸ್‌ರವರ ಜೊತೆಗೆ ನಾವಿದ್ದೇವೆ. ಬಿಜೆಪಿ ಪಕ್ಷದಲ್ಲಿರುವ ದಲಿತ ವಿರೋಧಿ ಜನರಿಂದ ನನಗೆ ಈವರೆಗೂ ನ್ಯಾಯ ದೊರಕಿಲ್ಲ. ಜಾತಿ ನಿರ್ಮೂಲನೆಗಾಗಿ ನಾನು ನನ್ನ ಹೋರಾಟವನ್ನು ಹೀಗೆ ನಿರಂತರವಾಗಿ ಮುಂದುವರೆಸುತ್ತೇನೆ. ಏಕೆಂದರೆ, ನಾನು ಅನುಭಸಿದ ನೋವನ್ನು ಬೇರಾವ ತಾಯಿಯು ಅನುಭವಿಸಬಾರದು” ಎಂದು ಭಾವುಕರಾದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಜನರ ಆಂದೋಲನಗಳ ಬಗ್ಗೆ ಒಕ್ಕೂಟ ಸರ್ಕಾರ ಅಸಹಿಸ್ಣುತೆಯಿಂದ ನಡೆದುಕೊಳ್ಳುತ್ತಿದೆ” ಎಂದರು.

“ಬಿಜೆಪಿ ಸರ್ಕಾರದ ಕೋಮುವಾದಿ ಅಜೆಂಡಾದ ಫಲವಾಗಿ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ನಾಶವಾಗುತ್ತಿದೆ. ಈ ಹಿಂದೆ, ಸಿದ್ದರಾಮಯ್ಯ ಅವರ ಸರ್ಕಾರ ಮೂಢನಂಬಿಕೆಗಳ ವಿರುದ್ಧ ಕರಡು ಕಾಯ್ದೆಯನ್ನು ತಂದಿದ್ದರು. ಆದರೆ, ಅದು ಕಾನೂನಾಗಲಿಲ್ಲ. ಅದೇ ರೀತಿ, ಡಾ.ಸಿದ್ಧಲಿಂಗಯ್ಯ ರವರು ಅಂತರ್ಜಾತಿ ವಿವಾಹವಾದ ದಂಪತಿಗಳ ಮಕ್ಕಳಿಗೆ ಮೀಸಲಾತಿ ತರಬೇಕೆಂದು ಒತ್ತಾಯಿಸಿದ್ದರು. ಆದರೆ, ಅದು ಸಹ ಜಾರಿಯಾಗಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆಯರು ಮಾಡುವ ಮಧ್ಯಾಹ್ನದ ಬಿಸಿ ಊಟವನ್ನು ಮಕ್ಕಳು ನಿರಾಕರಿಸುವಂತೆ ಈ ಜಾತಿ ವ್ಯವಸ್ಥೆಯು ಅವರಿಗೆ ಹೇಳಿಕೊಡುತ್ತದೆ. ಜಾತಿವಾದವು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಟು ವ್ಯಾಪಕವಾಗಿದ್ದರೆ, ಇದರ ವಿರುದ್ಧ ಹೋರಾಡಲು ರೋಹಿತ್ ಕಾಯ್ದೆಯಂತಹ ವಿಶೇಷ ಕಾನೂನಿನ ಅಗತ್ಯವಿದೆ” ಎಂದು ಆಗ್ರಹಿಸಿದರು.

ರೋಹಿತ್ ವೆಮುಲಾ ಸಹಪಾಠಿಯಾದ ದೋಂತ ಪ್ರಶಾತ್ ರವರು ಮಾತನಾಡಿ, “ವಿನಾಕಾರಣ ಮೂರು ಬಾರಿ ರೋಹಿತ್ ವೇಮುಲ ಮತ್ತು ಅವರ ಮೂರು ಜನ ಸ್ನೇಹಿತರನ್ನು ಶಿಕ್ಷೆಗೆ ಒಳಪಡಿಸಿ, ಎಲ್ಲರ ಮೇಲೂ ಸಾಮಾಜಿಕ ಬಹಿಷ್ಕಾರ ಹೇರಿದ್ದರು” ಎಂದರು.

“ನಮ್ಮನ್ನು ‘ಗೂಂಡಾಗಳು’ ಎಂದು ಕರೆಯುತ್ತಿದ್ದರು, ದೇಶದಾದ್ಯಂತ ದಲಿತರನ್ನು ಇದೇ ರೀತಿ ಅವಮಾನಿಸುತ್ತಾರೆ, ಇದು ನಮ್ಮ ಘನತೆಗೆ ಧಕ್ಕೆಯುಂಟು ಮಾಡುವ ವಿಷಯ. ವಿಶ್ವವಿದ್ಯಾಲಯಗಳು ವ್ಯವಸ್ಥಿತವಾಗಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳನ್ನು ಬೇರ್ಪಡಿಸುತ್ತಿವೆ. ಇದಕ್ಕಾಗಿಯೇ ರೋಹಿತ್ ಕಾಯ್ದೆಯ ಅಗತ್ಯವಿದೆ” ಎಂದರು.

ಪ್ರಗತಿಪರ ಚಿಂತಕರು ಹಾಗು ಬರಹಗಾರರಾದ ವಿಕಾಸ್ ಮೌರ್ಯ ಮಾತನಾಡಿ, “ಸರ್ಕಾರ, ಶೈಕ್ಷಣಿಕ ಸಂಸ್ಥೆಗಳಲ್ಲಿ ಎಷ್ಟು ಜನ ಎಸ್‌ಸಿ/Sಎಸ್‌ಟಿ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಮಂಡಿಸಿದರು. ಆದರೆ, ಇದನ್ನು ತಡೆಯಲು ಏನು ಮಾಡಬೇಕು ಎಂದು ‌ಮಾತ್ರ ಸರ್ಕಾರ ಯೋಚಿಸುತ್ತಿಲ್ಲ. ಭಾರತದಲ್ಲಿ ಬ್ರಾಹ್ಮಣವಾದ ಹಾಗೂ ಬಂಡವಾಳಶಾಹಿ ಪದ್ದತಿ ಎರಡು ಸೇರಿ ದಲಿತ ಬಹುಜನ ವಿಧ್ಯಾರ್ಥಿಗಳನ್ನು ಮೂಲೆಗುಂಪು ಮಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ದಶಕಗಳ ನಂತರವೂ ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಡೊಂದು ಅಸಮಾನತೆ ಹಾಗೂ ತಾರತಮ್ಯ ಇರುವುದು ಬೇಸರದ ವಿಷಯ” ಎಂದರು.

ಆಲ್ ಇಂಡಿಯಾ ವಿಧ್ಯಾರ್ಥಿ ಸಂಘಟನೆಯ ಲೇಖಾ ಅಡವಿ ಅವರು ಮಾತನಾಡಿ, ” ಶೈಕ್ಷಣಿಕ ಸಂಸ್ಥೆಗಳಲ್ಲಿ ‌ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಇಂದು ಜಾತಿ ತಾರತಮ್ಯದಿಂದ ದಲಿತ ವಿಧ್ಯಾರ್ಥಿಗಳಿಗೆ ಕಾಲೇಜು ಪ್ರವೇಶಿಸುವುದು ಕಷ್ಟವಾಗಿದೆ. ಕಾಲೇಜು ಸೇರಿಕೊಂಡ ಮೇಲೆ ಅಲ್ಲಿ ತಾರತಮ್ಯ ಎದುರಿಸುತಿದ್ದಾರೆ, ಕೆಲವರಿಗೆ ತಮ್ಮ ಓದು ಮುಂದುವರಿಸಲಾಗುತ್ತಿಲ್ಲ. ಈ ತಾರತಮ್ಯ ಹಾಗೂ ಮಾನಸಿಕ ಹಿಂಸೆ ತಡೆಯಲಾರದೆ ಕೆಲ ವಿಧ್ಯಾರ್ಥಿಗಳು ತಮ್ಮ ಪ್ರಾಣತ್ಯಾಗ ಮಾಡುತಿದ್ದಾರೆ. ಹಾಗಾಗಿ, ನಾವು ಹಲವು ಸಂಘಟನೆಗಳು ಸೇರಿ ರೋಹಿತ್ ಕಾಯ್ದೆಗಾಗಿ ಜನಾಂದೋಲನದ ಅಡಿಯಲ್ಲಿ ಬಂದಿದ್ದೇವೆ. ರೋಹಿತ್ ಕಾಯ್ದೆಯು, ಜಾತಿ ತಾರತಮ್ಯ ತಡಿಯುವುದಲ್ಲದೆ , ಎಸ್‌ಸಿ/ಎಸ್‌ಟಿ ವಿಧ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದಕ್ಕೆ,‌ಕಾಲೇಜುಗಳಲ್ಲಿ ಅಕ್ಯಾಡೆಮಿಕ್ ಬೆಂಬಲ‌ ಸಹ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲ, ರಾಜ ವೇಮುಲ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಮಾವಳ್ಳಿ ಶಂಕರ್, ದೊಂತ ಪ್ರಶಾಂತ್, ಲೇಖಕರಾದ ವಿಕಾಸ್ ಆರ್ ಮೌರ್ಯ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸ್ಸೋಸಿಟೇಷನ್ (ಎಐಎಸ್‌ಎ) ನ ಲೇಖ ಅಡವಿ ಉಪಸ್ಥಿತರಿದ್ದರು.

ಇದನ್ನೂ ಓದಿ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...