Homeಮುಖಪುಟಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

- Advertisement -
- Advertisement -

‘ನಾನು ಈಗಾಗಲೇ ಕುಸ್ತಿ ಚಟುವಟಿಕೆಯಿಂದ ಸಂಪೂರ್ಣ ನಿವೃತ್ತಿ ಹೊಂದಿದ್ದೇನೆ; ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ನೂತನ ಆಡಳಿತ ಮಂಡಳಿ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಸಂಸ್ಥೆಯ ಮಾಜಿ ಅಧ್ಯಕ್ಷ, ಅಪ್ರಾಪ್ತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತು ಮಾಡಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದ್ದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಸದ್ಯಕ್ಕೆ ಯಾವುದೇ ವಿವಾದವನ್ನು ಎದುರಿಸಲು ಸಿದ್ಧನಿಲ್ಲ. ದೇಶದ ಕುಸ್ತಿ ಜಗತ್ತಿನಲ್ಲಿ ಇತ್ತೀಚಿನ ಯಾವ ಬೆಳವಣಿಗೆಗಳಿಗೂ, ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದರು.

‘ಕುಸ್ತಿ ಫೆಡರೇಷನ್ ನೂತನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಕಾರಣ ಕ್ರೀಡಾ ಸಚಿವಾಲಯವು ಇಂದು ಅಮಾನತು ಆದೇಶ ಹೊರಡಿಸಿದೆ. ಸಂಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಹೊಸದಾಗಿ ಆಯ್ಕೆಯಾದ ಮಂಡಳಿಯು ನಿಯಮಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದೆ. ಹೊಸದಾಗಿ ಆಯ್ಕೆಯಾದ ಮಂಡಳಿಯು ಹಿಂದಿನ ಅಧ್ಯಕ್ಷರ ನಿಯಂತ್ರಣದಲ್ಲಿದೆ; ಅವರನ್ನು ಲೈಂಗಿಕ ಕಿರುಕುಳದ ಆರೋಪದ ಅಡಿಯಲ್ಲಿ ಅಮಾನತುಗೊಳಿಸಲಾಗಿತ್ತು’ ಎಂದು ಸಚಿವಾಲಯ ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಬ್ರಿಜ್ ಭೂಷಣ್, ’12 ವರ್ಷ ಕುಸ್ತಿಪಟುಗಳಿಗಾಗಿ ದುಡಿದಿದ್ದೇನೆ, ನ್ಯಾಯ ಕೊಡಿಸಿದ್ದೇನೆಯೇ ಇಲ್ಲವೇ ಎನ್ನುವುದನ್ನು ಕಾಲವೇ ಹೇಳುತ್ತದೆ. ಸದ್ಯಕ್ಕೆ ಕುಸ್ತಿಯಿಂದ ಸಂಪೂರ್ಣ ನಿವೃತ್ತಿ ಹೊಂದಿದ್ದೇನೆ, ಕುಸ್ತಿಯಿಂದ ನಂಟು ಕಡಿದುಕೊಂಡಿದ್ದೇನೆ. ಈಗ ಸರ್ಕಾರದ ನಿರ್ಧಾರದ ಕುರಿತು ಮಾತುಕತೆಯನ್ನು ಒಕ್ಕೂಟದ ಚುನಾಯಿತ ಪದಾಧಿಕಾರಿಗಳೆ ಮಾಡುತ್ತಾರೆ’ ಎಂದು ನವ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬ್ರಿಜ್ ಭೂಷಣ್ ಸಿಂಗ್ ಅವರು ಹಲವಾರು ಯುವ ಜೂನಿಯರ್ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಸಾಕ್ಷಿ ಮಲ್ಲಿಕ್ ಸೇರಿದಂತೆ ಹಲವು ಹಿರಿಯ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಆ ನಂತರ ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯೂಎಫ್ಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಲಂಪಿಕ್ ಬೆಳ್ಳಿ ಪದಕ ವಿಜೇತೆ, ಭಾರತದ ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಸಂಜಯ್ ಸಿಂಗ್ ಆಯ್ಕೆಯಿಂದ ನೊಂದು, ಕಣ್ಣೀರಿಡುತ್ತಲೇ ನಿವೃತ್ತಿ ಘೋಷಿಸಿದ್ದರು. ಮತ್ತೊಂದು ಗಂಭೀರ ಆರೋಪ ಮಾಡಿದ್ದ ಅವರು, ‘ಮಾಜಿ ಅಧ್ಯಕ್ಷರ ಭದ್ರಕೋಟೆಯಾದ ಗೊಂಡಾದಲ್ಲಿ ಜೂನಿಯರ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳು ನಡೆಯುತ್ತಿವೆ ಎಂದು ಹಲವಾರು ಯುವ ಮಹಿಳಾ ಕುಸ್ತಿಪಟುಗಳಿಂದ ನನಗೆ ಕರೆಗಳು ಬಂದಿವೆ’ ಎಂದು ಶನಿವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಸಚಿವಾಲಯವು ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ. ಈ ಆದೇಶದ ವಿರುದ್ಧ ಸಂಜಯ್ ಸಿಂಗ್ ನೇತೃತ್ವದ ಡಬ್ಲ್ಯುಎಫ್ಐ ದೆಹಲಿ ಹೈಕೋರ್ಟಿಗೆ ಮೊರೆ ಹೋಗಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...