Homeಮುಖಪುಟಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

- Advertisement -
- Advertisement -

‘ನಾನು ಈಗಾಗಲೇ ಕುಸ್ತಿ ಚಟುವಟಿಕೆಯಿಂದ ಸಂಪೂರ್ಣ ನಿವೃತ್ತಿ ಹೊಂದಿದ್ದೇನೆ; ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ನೂತನ ಆಡಳಿತ ಮಂಡಳಿ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಸಂಸ್ಥೆಯ ಮಾಜಿ ಅಧ್ಯಕ್ಷ, ಅಪ್ರಾಪ್ತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತು ಮಾಡಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದ್ದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಸದ್ಯಕ್ಕೆ ಯಾವುದೇ ವಿವಾದವನ್ನು ಎದುರಿಸಲು ಸಿದ್ಧನಿಲ್ಲ. ದೇಶದ ಕುಸ್ತಿ ಜಗತ್ತಿನಲ್ಲಿ ಇತ್ತೀಚಿನ ಯಾವ ಬೆಳವಣಿಗೆಗಳಿಗೂ, ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದರು.

‘ಕುಸ್ತಿ ಫೆಡರೇಷನ್ ನೂತನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಕಾರಣ ಕ್ರೀಡಾ ಸಚಿವಾಲಯವು ಇಂದು ಅಮಾನತು ಆದೇಶ ಹೊರಡಿಸಿದೆ. ಸಂಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಹೊಸದಾಗಿ ಆಯ್ಕೆಯಾದ ಮಂಡಳಿಯು ನಿಯಮಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದೆ. ಹೊಸದಾಗಿ ಆಯ್ಕೆಯಾದ ಮಂಡಳಿಯು ಹಿಂದಿನ ಅಧ್ಯಕ್ಷರ ನಿಯಂತ್ರಣದಲ್ಲಿದೆ; ಅವರನ್ನು ಲೈಂಗಿಕ ಕಿರುಕುಳದ ಆರೋಪದ ಅಡಿಯಲ್ಲಿ ಅಮಾನತುಗೊಳಿಸಲಾಗಿತ್ತು’ ಎಂದು ಸಚಿವಾಲಯ ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಬ್ರಿಜ್ ಭೂಷಣ್, ’12 ವರ್ಷ ಕುಸ್ತಿಪಟುಗಳಿಗಾಗಿ ದುಡಿದಿದ್ದೇನೆ, ನ್ಯಾಯ ಕೊಡಿಸಿದ್ದೇನೆಯೇ ಇಲ್ಲವೇ ಎನ್ನುವುದನ್ನು ಕಾಲವೇ ಹೇಳುತ್ತದೆ. ಸದ್ಯಕ್ಕೆ ಕುಸ್ತಿಯಿಂದ ಸಂಪೂರ್ಣ ನಿವೃತ್ತಿ ಹೊಂದಿದ್ದೇನೆ, ಕುಸ್ತಿಯಿಂದ ನಂಟು ಕಡಿದುಕೊಂಡಿದ್ದೇನೆ. ಈಗ ಸರ್ಕಾರದ ನಿರ್ಧಾರದ ಕುರಿತು ಮಾತುಕತೆಯನ್ನು ಒಕ್ಕೂಟದ ಚುನಾಯಿತ ಪದಾಧಿಕಾರಿಗಳೆ ಮಾಡುತ್ತಾರೆ’ ಎಂದು ನವ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬ್ರಿಜ್ ಭೂಷಣ್ ಸಿಂಗ್ ಅವರು ಹಲವಾರು ಯುವ ಜೂನಿಯರ್ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಸಾಕ್ಷಿ ಮಲ್ಲಿಕ್ ಸೇರಿದಂತೆ ಹಲವು ಹಿರಿಯ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಆ ನಂತರ ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯೂಎಫ್ಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಲಂಪಿಕ್ ಬೆಳ್ಳಿ ಪದಕ ವಿಜೇತೆ, ಭಾರತದ ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಸಂಜಯ್ ಸಿಂಗ್ ಆಯ್ಕೆಯಿಂದ ನೊಂದು, ಕಣ್ಣೀರಿಡುತ್ತಲೇ ನಿವೃತ್ತಿ ಘೋಷಿಸಿದ್ದರು. ಮತ್ತೊಂದು ಗಂಭೀರ ಆರೋಪ ಮಾಡಿದ್ದ ಅವರು, ‘ಮಾಜಿ ಅಧ್ಯಕ್ಷರ ಭದ್ರಕೋಟೆಯಾದ ಗೊಂಡಾದಲ್ಲಿ ಜೂನಿಯರ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳು ನಡೆಯುತ್ತಿವೆ ಎಂದು ಹಲವಾರು ಯುವ ಮಹಿಳಾ ಕುಸ್ತಿಪಟುಗಳಿಂದ ನನಗೆ ಕರೆಗಳು ಬಂದಿವೆ’ ಎಂದು ಶನಿವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಸಚಿವಾಲಯವು ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ. ಈ ಆದೇಶದ ವಿರುದ್ಧ ಸಂಜಯ್ ಸಿಂಗ್ ನೇತೃತ್ವದ ಡಬ್ಲ್ಯುಎಫ್ಐ ದೆಹಲಿ ಹೈಕೋರ್ಟಿಗೆ ಮೊರೆ ಹೋಗಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...