Homeಮುಖಪುಟಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

- Advertisement -
- Advertisement -

‘ನಾನು ಈಗಾಗಲೇ ಕುಸ್ತಿ ಚಟುವಟಿಕೆಯಿಂದ ಸಂಪೂರ್ಣ ನಿವೃತ್ತಿ ಹೊಂದಿದ್ದೇನೆ; ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ನೂತನ ಆಡಳಿತ ಮಂಡಳಿ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಸಂಸ್ಥೆಯ ಮಾಜಿ ಅಧ್ಯಕ್ಷ, ಅಪ್ರಾಪ್ತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತು ಮಾಡಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದ್ದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಸದ್ಯಕ್ಕೆ ಯಾವುದೇ ವಿವಾದವನ್ನು ಎದುರಿಸಲು ಸಿದ್ಧನಿಲ್ಲ. ದೇಶದ ಕುಸ್ತಿ ಜಗತ್ತಿನಲ್ಲಿ ಇತ್ತೀಚಿನ ಯಾವ ಬೆಳವಣಿಗೆಗಳಿಗೂ, ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದರು.

‘ಕುಸ್ತಿ ಫೆಡರೇಷನ್ ನೂತನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಕಾರಣ ಕ್ರೀಡಾ ಸಚಿವಾಲಯವು ಇಂದು ಅಮಾನತು ಆದೇಶ ಹೊರಡಿಸಿದೆ. ಸಂಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಹೊಸದಾಗಿ ಆಯ್ಕೆಯಾದ ಮಂಡಳಿಯು ನಿಯಮಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದೆ. ಹೊಸದಾಗಿ ಆಯ್ಕೆಯಾದ ಮಂಡಳಿಯು ಹಿಂದಿನ ಅಧ್ಯಕ್ಷರ ನಿಯಂತ್ರಣದಲ್ಲಿದೆ; ಅವರನ್ನು ಲೈಂಗಿಕ ಕಿರುಕುಳದ ಆರೋಪದ ಅಡಿಯಲ್ಲಿ ಅಮಾನತುಗೊಳಿಸಲಾಗಿತ್ತು’ ಎಂದು ಸಚಿವಾಲಯ ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಬ್ರಿಜ್ ಭೂಷಣ್, ’12 ವರ್ಷ ಕುಸ್ತಿಪಟುಗಳಿಗಾಗಿ ದುಡಿದಿದ್ದೇನೆ, ನ್ಯಾಯ ಕೊಡಿಸಿದ್ದೇನೆಯೇ ಇಲ್ಲವೇ ಎನ್ನುವುದನ್ನು ಕಾಲವೇ ಹೇಳುತ್ತದೆ. ಸದ್ಯಕ್ಕೆ ಕುಸ್ತಿಯಿಂದ ಸಂಪೂರ್ಣ ನಿವೃತ್ತಿ ಹೊಂದಿದ್ದೇನೆ, ಕುಸ್ತಿಯಿಂದ ನಂಟು ಕಡಿದುಕೊಂಡಿದ್ದೇನೆ. ಈಗ ಸರ್ಕಾರದ ನಿರ್ಧಾರದ ಕುರಿತು ಮಾತುಕತೆಯನ್ನು ಒಕ್ಕೂಟದ ಚುನಾಯಿತ ಪದಾಧಿಕಾರಿಗಳೆ ಮಾಡುತ್ತಾರೆ’ ಎಂದು ನವ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬ್ರಿಜ್ ಭೂಷಣ್ ಸಿಂಗ್ ಅವರು ಹಲವಾರು ಯುವ ಜೂನಿಯರ್ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಸಾಕ್ಷಿ ಮಲ್ಲಿಕ್ ಸೇರಿದಂತೆ ಹಲವು ಹಿರಿಯ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಆ ನಂತರ ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯೂಎಫ್ಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಲಂಪಿಕ್ ಬೆಳ್ಳಿ ಪದಕ ವಿಜೇತೆ, ಭಾರತದ ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಸಂಜಯ್ ಸಿಂಗ್ ಆಯ್ಕೆಯಿಂದ ನೊಂದು, ಕಣ್ಣೀರಿಡುತ್ತಲೇ ನಿವೃತ್ತಿ ಘೋಷಿಸಿದ್ದರು. ಮತ್ತೊಂದು ಗಂಭೀರ ಆರೋಪ ಮಾಡಿದ್ದ ಅವರು, ‘ಮಾಜಿ ಅಧ್ಯಕ್ಷರ ಭದ್ರಕೋಟೆಯಾದ ಗೊಂಡಾದಲ್ಲಿ ಜೂನಿಯರ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳು ನಡೆಯುತ್ತಿವೆ ಎಂದು ಹಲವಾರು ಯುವ ಮಹಿಳಾ ಕುಸ್ತಿಪಟುಗಳಿಂದ ನನಗೆ ಕರೆಗಳು ಬಂದಿವೆ’ ಎಂದು ಶನಿವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಸಚಿವಾಲಯವು ಹೊಸದಾಗಿ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದೆ. ಈ ಆದೇಶದ ವಿರುದ್ಧ ಸಂಜಯ್ ಸಿಂಗ್ ನೇತೃತ್ವದ ಡಬ್ಲ್ಯುಎಫ್ಐ ದೆಹಲಿ ಹೈಕೋರ್ಟಿಗೆ ಮೊರೆ ಹೋಗಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...