ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. 2 ವರ್ಷಗಳ ಸರಕಾರ ಪೂರ್ಣಗೊಂಡ ನಂತರ ಬೇರೊಬ್ಬರು ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುವುದಕ್ಕಾಗಿ ನಾನು ಸ್ವಂತ ನಿರ್ಧಾರ ತೆಗೆದುಕೊಂಡು ರಾಜೀನಾಮೆ ನೀಡಿದ್ದೇನೆ ಎಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ನನ್ನ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.I have resigned voluntarily. Nobody forced me to quit ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ನಾನು ಕೆಲಸ ಮಾಡುತ್ತೇನೆ. ನನ್ನ ನಂತರ ಉತ್ತರಾಧಿಕಾರಿಯಾದ ಯಾರ ಹೆಸರನ್ನು ನಾನು ಸೂಚಿಸಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
Nobody pressurised me to resign. I did it on my own so that someone else can take over as CM after completion of 2 years of govt. I'll work to bring BJP back in power in the next election. I've not given name of anyone who should succeed me: Outgoing Karnataka CM BS Yediyurappa pic.twitter.com/AQvGmDQYbP
— ANI (@ANI) July 26, 2021
ಪಕ್ಷದ ಹೈಕಮಾಂಡ್ ಯಾರನ್ನು ಹೊಸ ಸಿಎಂ ಆಗಿ ನೇಮಿಸುತ್ತದೆಯೋ ಅವರ ಅಡಿಯಲ್ಲಿ ನಾವು ಕೆಲಸ ಮಾಡುತ್ತೇವೆ. ನಾನು ನನ್ನ 100% ಸಮಯವನ್ನು ಪಕ್ಷ ಬಲವರ್ಧನೆಗೆ ನೀಡುತ್ತೇನೆ ಮತ್ತು ನನ್ನ ಬೆಂಬಲಿಗರು ಸಹ ತಮ್ಮ 100% ಅನ್ನು ಸಹ ನೀಡುತ್ತಾರೆ. ರಾಜೀನಾಮೆ ಕುರಿತು ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಬಿಎಸ್ವೈ ತಿಳಿಸಿದ್ದಾರೆ.
“75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ. ಮುಂದೆಯೇ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಅವರ ನಿರೀಕ್ಷೆಯಂತೆ ಕೆಲಸ ಮಾಡೋಣ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದು ವಿಧಾನಸೌಧದಲ್ಲಿ ಈ ಮೊದಲು ಘೋಷಿಸಿದ್ದರು.
ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್ ಯಡಿಯೂರಪ್ಪ


