Homeಮುಖಪುಟ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನು ಅರೆಬಿಯನ್‍ ಆತಂಕವಾದಿಗಳ ವಿರುದ್ಧ ಯುದ್ಧ ಮಾಡಬೇಕಿದೆ. ನನಗೆ ಯೋಧರು ಅಥವಾ ನೇತಾಗಳ ಅಗತ್ಯವಿಲ್ಲ. ಕೈಯಲ್ಲಿ ಹತ್ಯಾರ್ (ಆಯುಧ) ಹಿಡಿದಿರುವವರು ನನ್ನ ಸಹಚರರಾಗಬಹುದು.

- Advertisement -
- Advertisement -

ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಯತಿ ನರಸಿಂಗಾನಂದರು ಮತ್ತೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಅವರು ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’ ಎಂಬ ಹೇಳಿಕೆ ನೀಡಿರುವುದು ಬಹಿರಂಗ ಭಯೋತ್ಪಾದನೆಗೆ ಕರೆಯಲ್ಲವೇ ಎಂದು ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಯತಿ ನರಸಿಂಗಾನಂದರು ಪ್ರಚೋದನಾಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಅವರ ಖಾತೆಯನ್ನು ಟ್ವಿಟರ್ ಬ್ಲಾಕ್ ಮಾಡಿತ್ತು. ಮತ್ತೊಂದು ಖಾತೆಯಲ್ಲಿ ಅವರು ಮತ್ತೆ ಹಿಂಸೆಗೆ ಪ್ರಚೋದನೆ ನೀಡುವು ಹೇಳಿಕೆ ನೀಡಿದ್ದಾರೆ.

ಹಿಂದಿಯಲ್ಲಿರುವ ಆತನ ಟ್ವೀಟ್‍ ಸಾರಾಂಶ ಇಲ್ಲಿದೆ:

ಹರಹರ ಮಹಾದೇವ, ನಾನು ಅರೆಬಿಯನ್‍ ಆತಂಕವಾದಿಗಳ ವಿರುದ್ಧ ಯುದ್ಧ ಮಾಡಬೇಕಿದೆ. ನನಗೆ ಯೋಧರು ಅಥವಾ ನೇತಾಗಳ ಅಗತ್ಯವಿಲ್ಲ. ಕೈಯಲ್ಲಿ ಹತ್ಯಾರ್ (ಆಯುಧ) ಹಿಡಿದಿರುವವರು ನನ್ನ ಸಹಚರರಾಗಬಹುದು. ನಮ್ಮ ಧರ್ಮವನ್ನು ಕೊಲ್ಲುವವರನ್ನು ನಾಶ ಮಾಡಲು ಬಯಸುವವರು ನನ್ನ ಸಹಚರರಾಗಬಹುದು…

ನನಗೆ ರಾಜಕೀಯ ಬೇಕಿಲ್ಲ. ನಾನು ನನ್ನ ಜನರನ್ನು ರಕ್ಷಿಸಬೇಕಿದೆ. ನನ್ನ ಮಕ್ಕಳು, ಹೆಣ್ಣು ಮಕ್ಕಳಿಗಾಗಿ ಯುದ್ಧ ಮಾಡಬೇಕಿದೆ… ಸನಾತನಕ್ಕಾಗಿ, ಹಿಂದೂ ಧರ್ಮ‍ಕ್ಕಾಗಿ ಕೆಲಸ ಮಾಡುವವರನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಹಿಂದೂ ಧರ್ಮಕ್ಕೆ ದ್ರೋಹ ಬಗೆಯುವವರನ್ನು ಪ್ರಶ್ನಿಸುತ್ತೇನೆ ಮತ್ತು ವಿರೋಧಿಸುತ್ತೇನೆ…

ಇದಿಷ್ಟು ಈತನ ಕರೆ! ಅಂದರೆ, ಈತ ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸೆಗೆ ಪ್ರಚೋದಿಸುವ ತನ್ನ ಕಸುಬನ್ನು ಇಲ್ಲೂ ಮುಂದುವರೆಸಿದ್ದಾನೆ. ಹತ್ಯಾರ ಹಿಡಿದ ಯುವಕರು ಈತನಿಗೆ ಬೇಕಂತೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ನಂತರ ಅವರು ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

ಇದನ್ನು ಉಪೇಕ್ಷಿಸುವಂತಿಲ್ಲ. ಈತನ ವಿಡಿಯೋ ನೋಡಿ, ಈತನ ಪ್ರಭಾವಕ್ಕೆ ಒಳಗಾದ ಎಷ್ಟೋ ಯುವಕರು 2020ರ ಫೆಬ್ರುವರಿಯ ದೆಹಲಿ ಗಲಭೆಯಲ್ಲಿ ಭಾಗಿಯಾಗಿದ್ದಾರೆ. ಹಿಂಸೆಗೆ ಈತ ಪ್ರಚೋದನೆ ನೀಡಿದ ವಿಡಿಯೋಗಳು ಸಾರ್ವಜನಿಕವಾಗಿ ಲಭ್ಯವಿದ್ದಾಗಲೂ ದೆಹಲಿ ಪೊಲೀಸರು ಒಂದು ದೂರು ದಾಖಲಿಸುವುದಿರಲಿ, ಈತನನ್ನು ಪ್ರಶ್ನಿಸಲೂ ಇಲ್ಲ. ದೆಹಲಿ ಗಲಭೆಯಲ್ಲಿ 53 ಜನ ಸಾವಿಗೀಡಾದರು ಮತ್ತು ಅಪಾರ ಆಸ್ತಿ ನಾಶವಾಗಿತು. ಇಲ್ಲಿ ಜೀವ ನಷ್ಟ ಮತ್ತು ಆಸ್ತಿ ನಷ್ಟ ಅನುಭವಿಸಿದವರು ಮುಸ್ಲಿಮರು. ಈ ಗಲಭೆಯ ಟಾರ್ಗೆಟ್‍ ಅವರೇ ಆಗಿದ್ದರು.

ನರಸಿಂಗಾನಂದನಿಗೆ ರಾಜಕೀಯದಲ್ಲಿರುವ ಹಿಂದೂತ್ವವಾದಿ ಉನ್ನತ ನಾಯಕರ ಬೆಂಬಲವೂ ಇದೆ ಎಂಬುದು ‘ ‘ದಿ ವೈರ್’’ ಪ್ರಕಟಿಸಿದ ತನಿಖಾ ವರದಿಯಲ್ಲಿ ಸಾಬೀತಾಗಿತ್ತು.

ಗಾಜಿಯಾಬಾದ್‌ನ ದೇವಮಾನವ!

ಯತಿ ನರಸಿಂಗಾನಂದ್ ಉಗ್ರ ಹಿಂದೂತ್ವ ನಾಯಕರಾಗಿದ್ದು, ಅವರ ಪ್ರಧಾನ ಕಚೇರಿ ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸ್ನಾದಲ್ಲಿದೆ. ಅವರ ದೇವಸ್ಥಾನವೊಂದರಲ್ಲಿ ಮುಸ್ಲಿಂ ಬಾಲಕ ನೀರು ಕುಡಿದಿದ್ದದಕ್ಕಾಗಿ ಆ ಬಾಲಕನ ಮೇಲೆ ಅಮಾನು‍ಷ ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿ, ತೀವ್ರ ಖಂಡನೆಗೆ ಒಳಗಾಗಿತ್ತು. ಕಪಿಲ್ ಮಿಶ್ರಾ ಅವರಂತಹ ಭಾರತೀಯ ಜನತಾ ಪಕ್ಷದ ಉನ್ನತ ನಾಯಕರೊಂದಿಗಿನ ಒಡನಾಟದಿಂದಾಗಿ ದೆಹಲಿಯ ಭೂಗತ ಹಿಂದುತ್ವ ಜಾಲಗಳಲ್ಲಿ ನರಸಿಂಗಾನಂದನ ಪ್ರಭಾವವು ಮಹತ್ತರವಾಗಿ ಬೆಳೆದಿದೆ.

ಉದಾಹರಣೆಗೆ,  2020ರ ಫೆಬ್ರುವರಿ ದೆಹಲಿ ಗಲಭೆಗೆ ಎರಡು ತಿಂಗಳ ಮೊದಲು, ನರಸಿಂಗಾನಂದ ಮುಸ್ಲಿಮರನ್ನು ರಾಕ್ಷಸರು ಎಂದು ಬಣ್ಣಿಸಿದ್ದ. “ನಮ್ಮ ಪ್ರಸ್ತುತ ಯುಗದಲ್ಲಿ ನಾವು ಮುಸ್ಲಿಮರು ಎಂದು ಕರೆಯುವವರನ್ನು ಹಿಂದಿನ ಯುಗಗಳಲ್ಲಿ ರಾಕ್ಷಸರು ಎಂದು ಕರೆಯಲಾಗುತ್ತಿತ್ತು”  ಎಂದು ಭಾಷಣ ಮಾಡುತ್ತಿದ್ದರು.

ನರಸಿಂಹಾನಂದ್ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅಭಿಮಾನಿ: ‘ನಾಥುರಾಮ್ ಗೋಡ್ಸೆ ಜಿ, ವೀರ್ ಸಾವರ್ಕರ್ ಜಿ ನನ್ನ ದೊಡ್ಡ ನಾಯಕರು ಎಂದು ನಾನು ಪರಿಗಣಿಸುತ್ತೇನೆ’ ಎಂದು ವೇದಿಕೆಗಳಲ್ಲಿ ಹೇಳುತ್ತ ಬಂದಿದ್ದಾರೆ.

ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ನರಸಿಂಗಾನಂದನ ಕರೆಗಳು ವಾಸ್ತವವಾಗಿ ಸಿಎಎ ಮತ್ತು ಅದರ ವಿರುದ್ಧದ ಪ್ರತಿಭಟನೆಗಳಿಗೆ ಮುಂಚೆಯೇ ಆರಂಭವಾಗಿದ್ದವು.  2019 ರ ಅಕ್ಟೋಬರ್‌ನಲ್ಲಿ ಲಖನೌದಲ್ಲಿ ಉಗ್ರಗಾಮಿ ಹಿಂದುತ್ವ ನಾಯಕ ಕಮಲೇಶ್ ತಿವಾರಿ ಇರಿತಕ್ಕೊಳಗಾದ ನಂತರ, “ಹಿಂದೂ ಸಿಂಹವನ್ನು ಕೊಲ್ಲಲಾಗಿದೆ ಮತ್ತು ನಮ್ಮ ಎಲ್ಲಾ ಮನೆಗಳು ಶೋಕದಲ್ಲಿರುವುದರಿಂದ ವಿಶ್ವದಾದ್ಯಂತ ಮುಸ್ಲಿಮರು ಸಂಭ್ರಮ ಆಚರಿಸುತ್ತಿದ್ದಾರೆ. ನಾನು ಆ ಎಲ್ಲ ಕಿಡಿಗೇಡಿಗಳಿಗೆ ಹೇಳುತ್ತಿದ್ದೇನೆ, ಮುಸ್ಲಿಮರಿಗೆ ಹೇಳುತ್ತಿದ್ದೇನೆ, ಕಮಲೇಶ್ ತಿವಾರಿ ಅವರ ಮನೆ ಇಂದು ಶೋಕಿಸುತ್ತಿರುವ ರೀತಿಯಲ್ಲಿ ನಾನು ನಿಮ್ಮನ್ನು ಶೋಕಿಸದಿದ್ದರೆ, ನಾನು ನನ್ನ ತಂದೆಯ ಮಗನಲ್ಲ. ನಾನು ಬದುಕಿರುವವರೆಗೂ ಶಸ್ತ್ರಾಸ್ತ್ರಗಳನ್ನು ಬಳಸುತ್ತೇನೆ. ನಾನು ಪ್ರತಿಯೊಬ್ಬ ಮುಸ್ಲಿಮರಿಗೂ ಹೇಳುತ್ತಿದ್ದೇನೆ, ನಾವು ಒಂದು ದಿನ ಇಸ್ಲಾಂ ಧರ್ಮವನ್ನು ದೇಶದಿಂದ ನಿರ್ಮೂಲನೆ ಮಾಡುತ್ತೇವೆ’ ಎಂದು ಇವರು ಬಹಿರಂಗವಾಗಿ ಬೆದರಿಕೆ ಹಾಕಿದ್ದರು.

ನರಸಿಂಗಾನಂದನ ಸಹಚರನಾಗಿರುವ  ಹಿಂದುತ್ವ ನಾಯಕ ದೀಪಕ್ ಸಿಂಗ್ ಹಿಂದೂ, ದೆಹಲಿಯ ಮೌಜ್‌ಪುರ್ ಚೌಕ್‌ನಲ್ಲಿ ಗಲಭೆ ಶುರುವಾದ ದಿನದ ಮಧ್ಯಾಹ್ನ 2.30ಕ್ಕೆ ಜನಸಮೂಹವನ್ನು ಒಟ್ಟುಗೂಡಿಸಲು ಕರೆ ನೀಡಿದ್ದ.. ನಂತರ ದೆಹಲಿ ಗಲಭೆ ಶೀಘ್ರದಲ್ಲೇ ಪ್ರಾರಂಭವಾಯಿತು.

ಫೆಬ್ರವರಿ 2020ರ  ದೆಹಲಿ ಗಲಭೆಗೆ ವಾರಗಳು ಮತ್ತು ತಿಂಗಳುಗಳ ಮೊದಲಿನಿಂದ  ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಯತಿ ನರಸಿಂಗಾನಂದನ ಸಾರ್ವಜನಿಕ ಮಾತುಗಳು  ಪ್ರಚೋದನಾಕಾರಿ ಆಗಿದ್ದವು. ಮುಸ್ಲಿಮರಿಗೆ ಪಾಠ ಕಲಿಸಲು, ಗಲಭೆ ಉಂಟಾಗುವಂತೆ ಹಿಂದೂಗಳನ್ನು ಶಸ್ತ್ರಾಸ್ತ್ರಗಳೊಂದಿಗೆ ಬೀದಿಗೆ ತರುವುದು ಅವರ ಉದ್ದೇಶವಾಗಿತ್ತು.

ನರಸಿಂಗಾನಂದನ  ಪ್ರಚೋದನೆಗೆ ನೆರವಾಗಿದ್ದು ಸಾಮಾಜಿಕ ಮಾಧ್ಯಮ ಮತ್ತು ವಿಡಿಯೋ ಬಳಕೆ. ನ್ಯೂಸ್ ನೇಷನ್, ಸುದರ್ಶನ್ ಟಿವಿ ಮತ್ತು ಆಜ್‌ತಕ್‌ನಂತಹ ಪ್ರಮುಖ ಹಿಂದಿ ಸುದ್ದಿ ವಾಹಿನಿಗಳ ಚರ್ಚಾ ಪ್ಯಾನೆಲ್‌ಗಳಲ್ಲಿ ಅವರು ಕಾಣಿಸಿಕೊಂಡಿದ್ದ ಮತ್ತು ಈಗಲೂ ಕಾಣಿಸಿಕೊಳ್ಳುತ್ತಾನೆ. ಯೂಟ್ಯೂಬ್‌ನಲ್ಲಿ ಹಲವಾರು ಉಗ್ರಗಾಮಿ ಹಿಂದುತ್ವ ಜಾಲಗಳಿಗೆ ಯತಿ ಹೀರೋ ಆಗಿದ್ದಾನೆ. ಹಿಂಸಾಚಾರದ ಕರೆಗಳು ಲಕ್ಷಾಂತರ ಜನರನ್ನು ತಲುಪುವಂತೆ ನರಸಿಂಗಾನಂದ ನೋಡಿಕೊಳ್ಳುತ್ತಾರೆ ಎಂದು ಆತನ ಬಗ್ಗೆ  ಹಿಂದೂತ್ವ ಕಾರ್ಯಕರ್ತರಿಗೆ ಅಭಿಮಾನವಿದೆ.

2019 ರ ಡಿಸೆಂಬರ್‌ನಲ್ಲಿ ಮತ್ತು ನಂತರ ಜನವರಿ ಮತ್ತು ಫೆಬ್ರವರಿ 2020 ರಲ್ಲಿ ಆತನ ಭಾಷಣಗಳು ದ್ವೇಷ ಭಾಷಣಗಳೇ ಆಗಿದ್ದವು. ಆದರೆ ಅಂತಿಮವಾಗಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಹಿನ್ನೆಲೆಯಲ್ಲಿ ನೋಡಿದಾಗ, ಆತನ ಭಾಷಣಗಳು ಹಿಂಸಾಚಾರಕ್ಕೆ ನೂರಾರು ಮತ್ತು ಸಾವಿರಾರು ಜನರನ್ನು ಆಮೂಲಾಗ್ರಗೊಳಿಸಲು ಮತ್ತು ಸಜ್ಜುಗೊಳಿಸಲು ಒಂದು ಪ್ರಮುಖ ಸಾಧನವಾಗಿತ್ತು ಎಂಬುದು ಸ್ಪಷ್ಟವಾಗಿದೆ. ಯತಿ ನರಸಿಂಗಾನಂದ್ ಸರಸ್ವತಿಯನ್ನು ಗಲಭೆಯ ಪ್ರಮುಖ ಸಂಚುಕೋರ ಎಂದು ಪೊಲೀಸರು ಪರಿಗಣಿಸುವುದಿಲ್ಲ ಎಂಬುದು ವಿಚಿತ್ರ.

ನರಸಿಂಗಾನಂದ ಮುಸ್ಲಿಮರಿಗೆ ‘ಸುವ್ವರ್’ ಮತ್ತು ‘ಕಟುವಾಸ್‍ನಂತಹ ನಿಂದನೀಯ ಪದಗಳನ್ನು ಬಳಸುತ್ತಾರೆ ಮತ್ತು ನಂತರ ಅವರ ಕಣ್ಣುಗಳನ್ನು ಕಿತ್ತುವಂತೆ ಕರೆ ನೀಡುತ್ತಾನೆ.

ದೆಹಲಿ ಗಲಭೆಗೆ ಎಂಟು ವಾರಗಳ ಮೊದಲು ಆತ ಡಿಸೆಂಬರ್ 25, 2019ರಂದು ಹೀಗೆ ಹೇಳಿದ್ದರು:

“ನಾನು ಮತ್ತೊಮ್ಮೆ ಹಿಂದೂಗಳಿಗೆ ಮನವಿ ಮಾಡುತ್ತಿದ್ದೇನೆ, ಇಂದು ಸಮಯ ಬಂದಿದೆ, ಇಂದಿಗೂ ನಾವು ಎದ್ದು ನಿಲ್ಲದಿದ್ದರೆ ನಾವು ಬದುಕುಳಿಯುವುದಿಲ್ಲ. ಇದು ಅಂತಿಮ ಯುದ್ಧ ಎಂದು ನಾನು ಹಿಂದೂಗಳಿಗೆ ಹೇಳಲು ಬಯಸುತ್ತೇನೆ, ನೀವು ಈ ಯುದ್ಧವನ್ನು ಕಳೆದುಕೊಂಡರೆ ಏನೂ ಉಳಿಯುವುದಿಲ್ಲ. ”

“ಈ ಮುಸ್ಲಿಮರು ದೇಶದ ಶತ್ರುಗಳು, ಅವರನ್ನು ಜೈಲಿಗೆ ಹಾಕಬೇಕು. ಮತ್ತು ಜೈಲಿನಲ್ಲಿದ್ದ ನಂತರ ಅವರು ಸುಧಾರಣೆ ಆಗದಿದ್ದರೆ, ಅವರಿಗೆ ಮರಣದಂಡನೆ ವಿಧಿಸಬೇಕು’ ಎಂದೂ ಯುಟ್ಯೂಬ್‍ ಚಾನೆಲ್‍ಗಳಿಗೆ ಸಂದರ್ಶನ ನೀಡುತ್ತಿದ್ದ ಇವರನ್ನು ದೆಹಲಿ ಪೊಲೀಸರು ಬಂಧಿಸಿದ್ದರೆ ದೆಹಲಿ ಗಲಭೆಗಳೇ ನಡೆಯುತ್ತಿರಲಿಲ್ಲವೇನೋ?

ಈಗ ಮತ್ತೆ ಟ್ವೀಟ್‍ ಮೂಲಕ ಹಿಂಸೆಯನ್ನು ಉತ್ತೇಜಿಸುವ ಮಾತುಗಳನ್ನು ಬಹಿರಂಗವಾಗಿ ಆಡಿದ್ದಾನೆ. ಗಾಜಿಯಾಬಾದ್‍ ಅಥವಾ ದೆಹಲಿ ಪೊಲೀಸರು ಈಗಲಾದರೂ ಸ್ವಯಂಪ್ರೇರಿತ ದೂರು ದಾಖಲಿಸುವರೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...