Homeಮುಖಪುಟ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನು ಅರೆಬಿಯನ್‍ ಆತಂಕವಾದಿಗಳ ವಿರುದ್ಧ ಯುದ್ಧ ಮಾಡಬೇಕಿದೆ. ನನಗೆ ಯೋಧರು ಅಥವಾ ನೇತಾಗಳ ಅಗತ್ಯವಿಲ್ಲ. ಕೈಯಲ್ಲಿ ಹತ್ಯಾರ್ (ಆಯುಧ) ಹಿಡಿದಿರುವವರು ನನ್ನ ಸಹಚರರಾಗಬಹುದು.

- Advertisement -
- Advertisement -

ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಯತಿ ನರಸಿಂಗಾನಂದರು ಮತ್ತೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಅವರು ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’ ಎಂಬ ಹೇಳಿಕೆ ನೀಡಿರುವುದು ಬಹಿರಂಗ ಭಯೋತ್ಪಾದನೆಗೆ ಕರೆಯಲ್ಲವೇ ಎಂದು ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಯತಿ ನರಸಿಂಗಾನಂದರು ಪ್ರಚೋದನಾಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಅವರ ಖಾತೆಯನ್ನು ಟ್ವಿಟರ್ ಬ್ಲಾಕ್ ಮಾಡಿತ್ತು. ಮತ್ತೊಂದು ಖಾತೆಯಲ್ಲಿ ಅವರು ಮತ್ತೆ ಹಿಂಸೆಗೆ ಪ್ರಚೋದನೆ ನೀಡುವು ಹೇಳಿಕೆ ನೀಡಿದ್ದಾರೆ.

ಹಿಂದಿಯಲ್ಲಿರುವ ಆತನ ಟ್ವೀಟ್‍ ಸಾರಾಂಶ ಇಲ್ಲಿದೆ:

ಹರಹರ ಮಹಾದೇವ, ನಾನು ಅರೆಬಿಯನ್‍ ಆತಂಕವಾದಿಗಳ ವಿರುದ್ಧ ಯುದ್ಧ ಮಾಡಬೇಕಿದೆ. ನನಗೆ ಯೋಧರು ಅಥವಾ ನೇತಾಗಳ ಅಗತ್ಯವಿಲ್ಲ. ಕೈಯಲ್ಲಿ ಹತ್ಯಾರ್ (ಆಯುಧ) ಹಿಡಿದಿರುವವರು ನನ್ನ ಸಹಚರರಾಗಬಹುದು. ನಮ್ಮ ಧರ್ಮವನ್ನು ಕೊಲ್ಲುವವರನ್ನು ನಾಶ ಮಾಡಲು ಬಯಸುವವರು ನನ್ನ ಸಹಚರರಾಗಬಹುದು…

ನನಗೆ ರಾಜಕೀಯ ಬೇಕಿಲ್ಲ. ನಾನು ನನ್ನ ಜನರನ್ನು ರಕ್ಷಿಸಬೇಕಿದೆ. ನನ್ನ ಮಕ್ಕಳು, ಹೆಣ್ಣು ಮಕ್ಕಳಿಗಾಗಿ ಯುದ್ಧ ಮಾಡಬೇಕಿದೆ… ಸನಾತನಕ್ಕಾಗಿ, ಹಿಂದೂ ಧರ್ಮ‍ಕ್ಕಾಗಿ ಕೆಲಸ ಮಾಡುವವರನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಹಿಂದೂ ಧರ್ಮಕ್ಕೆ ದ್ರೋಹ ಬಗೆಯುವವರನ್ನು ಪ್ರಶ್ನಿಸುತ್ತೇನೆ ಮತ್ತು ವಿರೋಧಿಸುತ್ತೇನೆ…

ಇದಿಷ್ಟು ಈತನ ಕರೆ! ಅಂದರೆ, ಈತ ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸೆಗೆ ಪ್ರಚೋದಿಸುವ ತನ್ನ ಕಸುಬನ್ನು ಇಲ್ಲೂ ಮುಂದುವರೆಸಿದ್ದಾನೆ. ಹತ್ಯಾರ ಹಿಡಿದ ಯುವಕರು ಈತನಿಗೆ ಬೇಕಂತೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ನಂತರ ಅವರು ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

ಇದನ್ನು ಉಪೇಕ್ಷಿಸುವಂತಿಲ್ಲ. ಈತನ ವಿಡಿಯೋ ನೋಡಿ, ಈತನ ಪ್ರಭಾವಕ್ಕೆ ಒಳಗಾದ ಎಷ್ಟೋ ಯುವಕರು 2020ರ ಫೆಬ್ರುವರಿಯ ದೆಹಲಿ ಗಲಭೆಯಲ್ಲಿ ಭಾಗಿಯಾಗಿದ್ದಾರೆ. ಹಿಂಸೆಗೆ ಈತ ಪ್ರಚೋದನೆ ನೀಡಿದ ವಿಡಿಯೋಗಳು ಸಾರ್ವಜನಿಕವಾಗಿ ಲಭ್ಯವಿದ್ದಾಗಲೂ ದೆಹಲಿ ಪೊಲೀಸರು ಒಂದು ದೂರು ದಾಖಲಿಸುವುದಿರಲಿ, ಈತನನ್ನು ಪ್ರಶ್ನಿಸಲೂ ಇಲ್ಲ. ದೆಹಲಿ ಗಲಭೆಯಲ್ಲಿ 53 ಜನ ಸಾವಿಗೀಡಾದರು ಮತ್ತು ಅಪಾರ ಆಸ್ತಿ ನಾಶವಾಗಿತು. ಇಲ್ಲಿ ಜೀವ ನಷ್ಟ ಮತ್ತು ಆಸ್ತಿ ನಷ್ಟ ಅನುಭವಿಸಿದವರು ಮುಸ್ಲಿಮರು. ಈ ಗಲಭೆಯ ಟಾರ್ಗೆಟ್‍ ಅವರೇ ಆಗಿದ್ದರು.

ನರಸಿಂಗಾನಂದನಿಗೆ ರಾಜಕೀಯದಲ್ಲಿರುವ ಹಿಂದೂತ್ವವಾದಿ ಉನ್ನತ ನಾಯಕರ ಬೆಂಬಲವೂ ಇದೆ ಎಂಬುದು ‘ ‘ದಿ ವೈರ್’’ ಪ್ರಕಟಿಸಿದ ತನಿಖಾ ವರದಿಯಲ್ಲಿ ಸಾಬೀತಾಗಿತ್ತು.

ಗಾಜಿಯಾಬಾದ್‌ನ ದೇವಮಾನವ!

ಯತಿ ನರಸಿಂಗಾನಂದ್ ಉಗ್ರ ಹಿಂದೂತ್ವ ನಾಯಕರಾಗಿದ್ದು, ಅವರ ಪ್ರಧಾನ ಕಚೇರಿ ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸ್ನಾದಲ್ಲಿದೆ. ಅವರ ದೇವಸ್ಥಾನವೊಂದರಲ್ಲಿ ಮುಸ್ಲಿಂ ಬಾಲಕ ನೀರು ಕುಡಿದಿದ್ದದಕ್ಕಾಗಿ ಆ ಬಾಲಕನ ಮೇಲೆ ಅಮಾನು‍ಷ ಹಲ್ಲೆ ಮಾಡಿದ್ದ ವಿಡಿಯೋ ವೈರಲ್ ಆಗಿ, ತೀವ್ರ ಖಂಡನೆಗೆ ಒಳಗಾಗಿತ್ತು. ಕಪಿಲ್ ಮಿಶ್ರಾ ಅವರಂತಹ ಭಾರತೀಯ ಜನತಾ ಪಕ್ಷದ ಉನ್ನತ ನಾಯಕರೊಂದಿಗಿನ ಒಡನಾಟದಿಂದಾಗಿ ದೆಹಲಿಯ ಭೂಗತ ಹಿಂದುತ್ವ ಜಾಲಗಳಲ್ಲಿ ನರಸಿಂಗಾನಂದನ ಪ್ರಭಾವವು ಮಹತ್ತರವಾಗಿ ಬೆಳೆದಿದೆ.

ಉದಾಹರಣೆಗೆ,  2020ರ ಫೆಬ್ರುವರಿ ದೆಹಲಿ ಗಲಭೆಗೆ ಎರಡು ತಿಂಗಳ ಮೊದಲು, ನರಸಿಂಗಾನಂದ ಮುಸ್ಲಿಮರನ್ನು ರಾಕ್ಷಸರು ಎಂದು ಬಣ್ಣಿಸಿದ್ದ. “ನಮ್ಮ ಪ್ರಸ್ತುತ ಯುಗದಲ್ಲಿ ನಾವು ಮುಸ್ಲಿಮರು ಎಂದು ಕರೆಯುವವರನ್ನು ಹಿಂದಿನ ಯುಗಗಳಲ್ಲಿ ರಾಕ್ಷಸರು ಎಂದು ಕರೆಯಲಾಗುತ್ತಿತ್ತು”  ಎಂದು ಭಾಷಣ ಮಾಡುತ್ತಿದ್ದರು.

ನರಸಿಂಹಾನಂದ್ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅಭಿಮಾನಿ: ‘ನಾಥುರಾಮ್ ಗೋಡ್ಸೆ ಜಿ, ವೀರ್ ಸಾವರ್ಕರ್ ಜಿ ನನ್ನ ದೊಡ್ಡ ನಾಯಕರು ಎಂದು ನಾನು ಪರಿಗಣಿಸುತ್ತೇನೆ’ ಎಂದು ವೇದಿಕೆಗಳಲ್ಲಿ ಹೇಳುತ್ತ ಬಂದಿದ್ದಾರೆ.

ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ನರಸಿಂಗಾನಂದನ ಕರೆಗಳು ವಾಸ್ತವವಾಗಿ ಸಿಎಎ ಮತ್ತು ಅದರ ವಿರುದ್ಧದ ಪ್ರತಿಭಟನೆಗಳಿಗೆ ಮುಂಚೆಯೇ ಆರಂಭವಾಗಿದ್ದವು.  2019 ರ ಅಕ್ಟೋಬರ್‌ನಲ್ಲಿ ಲಖನೌದಲ್ಲಿ ಉಗ್ರಗಾಮಿ ಹಿಂದುತ್ವ ನಾಯಕ ಕಮಲೇಶ್ ತಿವಾರಿ ಇರಿತಕ್ಕೊಳಗಾದ ನಂತರ, “ಹಿಂದೂ ಸಿಂಹವನ್ನು ಕೊಲ್ಲಲಾಗಿದೆ ಮತ್ತು ನಮ್ಮ ಎಲ್ಲಾ ಮನೆಗಳು ಶೋಕದಲ್ಲಿರುವುದರಿಂದ ವಿಶ್ವದಾದ್ಯಂತ ಮುಸ್ಲಿಮರು ಸಂಭ್ರಮ ಆಚರಿಸುತ್ತಿದ್ದಾರೆ. ನಾನು ಆ ಎಲ್ಲ ಕಿಡಿಗೇಡಿಗಳಿಗೆ ಹೇಳುತ್ತಿದ್ದೇನೆ, ಮುಸ್ಲಿಮರಿಗೆ ಹೇಳುತ್ತಿದ್ದೇನೆ, ಕಮಲೇಶ್ ತಿವಾರಿ ಅವರ ಮನೆ ಇಂದು ಶೋಕಿಸುತ್ತಿರುವ ರೀತಿಯಲ್ಲಿ ನಾನು ನಿಮ್ಮನ್ನು ಶೋಕಿಸದಿದ್ದರೆ, ನಾನು ನನ್ನ ತಂದೆಯ ಮಗನಲ್ಲ. ನಾನು ಬದುಕಿರುವವರೆಗೂ ಶಸ್ತ್ರಾಸ್ತ್ರಗಳನ್ನು ಬಳಸುತ್ತೇನೆ. ನಾನು ಪ್ರತಿಯೊಬ್ಬ ಮುಸ್ಲಿಮರಿಗೂ ಹೇಳುತ್ತಿದ್ದೇನೆ, ನಾವು ಒಂದು ದಿನ ಇಸ್ಲಾಂ ಧರ್ಮವನ್ನು ದೇಶದಿಂದ ನಿರ್ಮೂಲನೆ ಮಾಡುತ್ತೇವೆ’ ಎಂದು ಇವರು ಬಹಿರಂಗವಾಗಿ ಬೆದರಿಕೆ ಹಾಕಿದ್ದರು.

ನರಸಿಂಗಾನಂದನ ಸಹಚರನಾಗಿರುವ  ಹಿಂದುತ್ವ ನಾಯಕ ದೀಪಕ್ ಸಿಂಗ್ ಹಿಂದೂ, ದೆಹಲಿಯ ಮೌಜ್‌ಪುರ್ ಚೌಕ್‌ನಲ್ಲಿ ಗಲಭೆ ಶುರುವಾದ ದಿನದ ಮಧ್ಯಾಹ್ನ 2.30ಕ್ಕೆ ಜನಸಮೂಹವನ್ನು ಒಟ್ಟುಗೂಡಿಸಲು ಕರೆ ನೀಡಿದ್ದ.. ನಂತರ ದೆಹಲಿ ಗಲಭೆ ಶೀಘ್ರದಲ್ಲೇ ಪ್ರಾರಂಭವಾಯಿತು.

ಫೆಬ್ರವರಿ 2020ರ  ದೆಹಲಿ ಗಲಭೆಗೆ ವಾರಗಳು ಮತ್ತು ತಿಂಗಳುಗಳ ಮೊದಲಿನಿಂದ  ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಯತಿ ನರಸಿಂಗಾನಂದನ ಸಾರ್ವಜನಿಕ ಮಾತುಗಳು  ಪ್ರಚೋದನಾಕಾರಿ ಆಗಿದ್ದವು. ಮುಸ್ಲಿಮರಿಗೆ ಪಾಠ ಕಲಿಸಲು, ಗಲಭೆ ಉಂಟಾಗುವಂತೆ ಹಿಂದೂಗಳನ್ನು ಶಸ್ತ್ರಾಸ್ತ್ರಗಳೊಂದಿಗೆ ಬೀದಿಗೆ ತರುವುದು ಅವರ ಉದ್ದೇಶವಾಗಿತ್ತು.

ನರಸಿಂಗಾನಂದನ  ಪ್ರಚೋದನೆಗೆ ನೆರವಾಗಿದ್ದು ಸಾಮಾಜಿಕ ಮಾಧ್ಯಮ ಮತ್ತು ವಿಡಿಯೋ ಬಳಕೆ. ನ್ಯೂಸ್ ನೇಷನ್, ಸುದರ್ಶನ್ ಟಿವಿ ಮತ್ತು ಆಜ್‌ತಕ್‌ನಂತಹ ಪ್ರಮುಖ ಹಿಂದಿ ಸುದ್ದಿ ವಾಹಿನಿಗಳ ಚರ್ಚಾ ಪ್ಯಾನೆಲ್‌ಗಳಲ್ಲಿ ಅವರು ಕಾಣಿಸಿಕೊಂಡಿದ್ದ ಮತ್ತು ಈಗಲೂ ಕಾಣಿಸಿಕೊಳ್ಳುತ್ತಾನೆ. ಯೂಟ್ಯೂಬ್‌ನಲ್ಲಿ ಹಲವಾರು ಉಗ್ರಗಾಮಿ ಹಿಂದುತ್ವ ಜಾಲಗಳಿಗೆ ಯತಿ ಹೀರೋ ಆಗಿದ್ದಾನೆ. ಹಿಂಸಾಚಾರದ ಕರೆಗಳು ಲಕ್ಷಾಂತರ ಜನರನ್ನು ತಲುಪುವಂತೆ ನರಸಿಂಗಾನಂದ ನೋಡಿಕೊಳ್ಳುತ್ತಾರೆ ಎಂದು ಆತನ ಬಗ್ಗೆ  ಹಿಂದೂತ್ವ ಕಾರ್ಯಕರ್ತರಿಗೆ ಅಭಿಮಾನವಿದೆ.

2019 ರ ಡಿಸೆಂಬರ್‌ನಲ್ಲಿ ಮತ್ತು ನಂತರ ಜನವರಿ ಮತ್ತು ಫೆಬ್ರವರಿ 2020 ರಲ್ಲಿ ಆತನ ಭಾಷಣಗಳು ದ್ವೇಷ ಭಾಷಣಗಳೇ ಆಗಿದ್ದವು. ಆದರೆ ಅಂತಿಮವಾಗಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಹಿನ್ನೆಲೆಯಲ್ಲಿ ನೋಡಿದಾಗ, ಆತನ ಭಾಷಣಗಳು ಹಿಂಸಾಚಾರಕ್ಕೆ ನೂರಾರು ಮತ್ತು ಸಾವಿರಾರು ಜನರನ್ನು ಆಮೂಲಾಗ್ರಗೊಳಿಸಲು ಮತ್ತು ಸಜ್ಜುಗೊಳಿಸಲು ಒಂದು ಪ್ರಮುಖ ಸಾಧನವಾಗಿತ್ತು ಎಂಬುದು ಸ್ಪಷ್ಟವಾಗಿದೆ. ಯತಿ ನರಸಿಂಗಾನಂದ್ ಸರಸ್ವತಿಯನ್ನು ಗಲಭೆಯ ಪ್ರಮುಖ ಸಂಚುಕೋರ ಎಂದು ಪೊಲೀಸರು ಪರಿಗಣಿಸುವುದಿಲ್ಲ ಎಂಬುದು ವಿಚಿತ್ರ.

ನರಸಿಂಗಾನಂದ ಮುಸ್ಲಿಮರಿಗೆ ‘ಸುವ್ವರ್’ ಮತ್ತು ‘ಕಟುವಾಸ್‍ನಂತಹ ನಿಂದನೀಯ ಪದಗಳನ್ನು ಬಳಸುತ್ತಾರೆ ಮತ್ತು ನಂತರ ಅವರ ಕಣ್ಣುಗಳನ್ನು ಕಿತ್ತುವಂತೆ ಕರೆ ನೀಡುತ್ತಾನೆ.

ದೆಹಲಿ ಗಲಭೆಗೆ ಎಂಟು ವಾರಗಳ ಮೊದಲು ಆತ ಡಿಸೆಂಬರ್ 25, 2019ರಂದು ಹೀಗೆ ಹೇಳಿದ್ದರು:

“ನಾನು ಮತ್ತೊಮ್ಮೆ ಹಿಂದೂಗಳಿಗೆ ಮನವಿ ಮಾಡುತ್ತಿದ್ದೇನೆ, ಇಂದು ಸಮಯ ಬಂದಿದೆ, ಇಂದಿಗೂ ನಾವು ಎದ್ದು ನಿಲ್ಲದಿದ್ದರೆ ನಾವು ಬದುಕುಳಿಯುವುದಿಲ್ಲ. ಇದು ಅಂತಿಮ ಯುದ್ಧ ಎಂದು ನಾನು ಹಿಂದೂಗಳಿಗೆ ಹೇಳಲು ಬಯಸುತ್ತೇನೆ, ನೀವು ಈ ಯುದ್ಧವನ್ನು ಕಳೆದುಕೊಂಡರೆ ಏನೂ ಉಳಿಯುವುದಿಲ್ಲ. ”

“ಈ ಮುಸ್ಲಿಮರು ದೇಶದ ಶತ್ರುಗಳು, ಅವರನ್ನು ಜೈಲಿಗೆ ಹಾಕಬೇಕು. ಮತ್ತು ಜೈಲಿನಲ್ಲಿದ್ದ ನಂತರ ಅವರು ಸುಧಾರಣೆ ಆಗದಿದ್ದರೆ, ಅವರಿಗೆ ಮರಣದಂಡನೆ ವಿಧಿಸಬೇಕು’ ಎಂದೂ ಯುಟ್ಯೂಬ್‍ ಚಾನೆಲ್‍ಗಳಿಗೆ ಸಂದರ್ಶನ ನೀಡುತ್ತಿದ್ದ ಇವರನ್ನು ದೆಹಲಿ ಪೊಲೀಸರು ಬಂಧಿಸಿದ್ದರೆ ದೆಹಲಿ ಗಲಭೆಗಳೇ ನಡೆಯುತ್ತಿರಲಿಲ್ಲವೇನೋ?

ಈಗ ಮತ್ತೆ ಟ್ವೀಟ್‍ ಮೂಲಕ ಹಿಂಸೆಯನ್ನು ಉತ್ತೇಜಿಸುವ ಮಾತುಗಳನ್ನು ಬಹಿರಂಗವಾಗಿ ಆಡಿದ್ದಾನೆ. ಗಾಜಿಯಾಬಾದ್‍ ಅಥವಾ ದೆಹಲಿ ಪೊಲೀಸರು ಈಗಲಾದರೂ ಸ್ವಯಂಪ್ರೇರಿತ ದೂರು ದಾಖಲಿಸುವರೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...