Homeಕರ್ನಾಟಕಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ: 'ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ' ಹೇಳಿಕೆಗೆ ಎಂಬಿ ಪಾಟೀಲ್ ಸ್ಪಷ್ಟನೆ

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ: ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ’ ಹೇಳಿಕೆಗೆ ಎಂಬಿ ಪಾಟೀಲ್ ಸ್ಪಷ್ಟನೆ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಸಿಎಂ ಸ್ಥಾನಕ್ಕಾಗಿ ನಡೆದ ಫೈಟ್‌ನಲ್ಲಿ ಸಿದ್ದರಾಮಯ್ಯ ಅವರ ಕೈ ಮೇಲಾಗಿದೆ. ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿಸಿ ರಾಜ್ಯ ಕಾಂಗ್ರೆಸ್‌ನ ಬೇಗುದಿಯನ್ನು ಹೈಕಮಾಂಡ್ ಕಡಿಮೆ ಮಾಡಿದೆ. ಆದರೆ ಸಚಿವ ಎಂಬಿ ಪಾಟೀಲ್ ಅವರು, ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೇ ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದೆ.

ಸೋಮವಾರ ರಾತ್ರಿ ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ್ದ ಎಂ.ಬಿ. ಪಾಟೀಲ್ ಅವರು, ”ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ” ಎಂದು ಹೇಳಿದ್ದರು.

ಎಂಬಿಪಿ ಅವರು ಈ ಹೇಳಿಕಯನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ”ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚರ್ಚಿಸಬಾರದು” ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣದ ಸಚಿವರು, ಶಾಸಕರಿಗೆ ಎಚ್ಚರಿಕೆ ನೀಡಿದೆ.

”ಯಾರೂ ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ಈಗ ನಮ್ಮ ಆದ್ಯತೆ. ಇದರ ಕಡೆ ಗಮನ ಕೊಡಬೇಕಿದೆ. ಇದರ ಹೊರತಾಗಿ ಯಾವುದೇ ಗೊಂದಲದ ಹೇಳಿಕೆಗಳನ್ನು ನೀಡಬಾರದು. ಗೊಂದಲ ಮೂಡಿಸುವ ಹೇಳಿಕೆಗಳೂ ಸೇರಿದಂತೆ ಎಲ್ಲವನ್ನೂ ಎಐಸಿಸಿ ಗಮನಿಸುತ್ತದೆ. ಯಾವುದೇ ವಿಷಯಗಳಿದ್ದರೂ ಎಐಸಿಸಿ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ” ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ, ರಣದೀಪ್ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಆ ಬಳಿಕ ತಮ್ಮ ಹೇಳಿಕೆಯ ಬಗ್ಗೆ ಮಂಗಳವಾರ ಸ್ಪಷ್ಟಿಕರಣ ನೀಡಿದ ಎಂಬಿ ಪಾಟೀಲ್ ಅವರು, ”ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ನಮ್ಮ ನಾಯಕರು ಹೇಳಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದರೋ ಅದನ್ನೇ ನಾನು ಹೇಳಿದ್ದೇನೆ. ಅಧಿಕಾರ ಹಂಚಿಕೆ ಇಲ್ಲ. ಇದ್ದರೆ ಅದು ಜನರ ಜೊತೆ ಮಾತ್ರ ಎಂದೂ ವೇಣುಗೋಪಾಲ್ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಮುಂದುವರೆಯುತ್ತಾರೆ ಎಂದೂ ಹೇಳಿದ್ದರು. ನಾನು ಅದನ್ನೂ ಹೇಳಿದ್ದೇನೆ. ಅಧಿಕಾರ ಹಂಚಿಕೆಯ ಸಂಧಾನ ಸೂತ್ರ ನನಗೆ ಗೊತ್ತಿಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ” ಎಂದು ಸ್ಪಷ್ಟಿಕರಣ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

ಎಂಬಿ ಪಾಟೀಲ್‌ರ ಹೇಳಿಕೆ ಡಿ.ಕೆ. ಶಿವಕುಮಾರ್ ಅವರನ್ನು ಕೆರಳಿಸಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ”ಎಂ.ಬಿ. ಪಾಟೀಲ್‌ರಿಗೆ ಆ ಹೇಳಿಕೆ ನೀಡಲು ಅಧಿಕಾರ ಕೊಟ್ಟವರು ಯಾರು? ಅವರೇನು ಪಕ್ಷದ ಹೈಕಮಾಂಡೇ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ”ಈ ರೀತಿ ವರ್ತನೆ ಮುಂದುವರಿದರೆ ಪಕ್ಷದ ಅಧ್ಯಕ್ಷನಾಗಿ ಮುಂದುವರಿಯುವುದು ನನಗೆ ಕಷ್ಟವಾಗಲಿದೆ” ಎಂದಿದ್ದಾರೆಂದು ಹೇಳಿದ್ದಾರೆ. ಇದರಿಂದ ಶಿವಕುಮಾರ್ ಸಹೋದರ, ಸಂಸದ ಡಿ.ಕೆ. ಸುರೇಶ್ ಕೂಡಾ ಕೆಂಡಾಮಂಡಲವಾಗಿದ್ದಾರೆ.

ರಾಜ್ಯ ಕೈ ನಾಯಕರ ಪ್ರತಿಕ್ರಿಯೆಗಳು:

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ”ಈ ವಿಚಾರ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಮಾತ್ರ ಗೊತ್ತಿದೆ. ಇದು ಆಂತರಿಕವಾಗಿ ನಡೆದಿರುವ ಚರ್ಚೆ. ಅವರನ್ನು ಬಿಟ್ಟು ಬೇರೆಯವರಿಗೆ ಈ ವಿಚಾರ ಗೊತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಚರ್ಚೆ ಆಗಿಲ್ಲ” ಎಂದಿದ್ದಾರೆ.

”ಈಗ ನಮ್ಮ ಮುಂದಿರುವುದು ಉತ್ತಮ ಆಡಳಿತ ನೀಡುವ ವಿಚಾರ, ಅಧಿಕಾರ ಹಂಚಿಕೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಈ ಬಗ್ಗೆ ಯಾರು ಗೊಂದಲ ಸೃಷ್ಟಿಸಬಾರದು. ಎಂ.ಬಿ. ಪಾಟೀಲ್‌ರಿಗೆ ಏನು ಮಾಹಿತಿ ಇದೆಯೋ ನನಗೆ ಗೊತ್ತಿಲ್ಲ. ನನಗೆ ಗೊತ್ತಿರುವುದನ್ನು ಹೇಳಿದ್ದೇನೆ” ಎಂದು ಅವರು ಹೇಲಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಶಾಸಕ ದಿನೇಶ್ ಗುಂಡೂರಾವ್ ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಎಐಸಿಸಿ ನಾಯಕರು ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಹೇಳಿದರು. ಅದಷ್ಟು ನಮಗೆ ಗೊತ್ತು. ಈಗ ಅಧಿಕಾರ ಹಂಚಿಕೆ ವಿಚಾರ ಏಕೆ? ಆ ಬಗ್ಗೆ ಏನು ಚರ್ಚೆ ಆಗಿದೆಯೆಂದು ಗೊತ್ತಿಲ್ಲ. 2013ರಲ್ಲಿ ಈ ಬಗ್ಗೆ ಚರ್ಚೆ ಆಗಿದೆಯೇ? ಈಗ ಚರ್ಚೆ ಏಕೆ” ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ”ಅಧಿಕಾರ ಹಂಚಿಕೆ ಕುರಿತು ಏನೇ ಮಾತುಕತೆ ಆಗಿದ್ದರೂ, ಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಮತ್ತು ಇಬ್ಬರು ನಾಯಕರ ನಡುವೆ ಮಾತ್ರ ಆಗಿದೆ. ಏನೇ ಇದ್ದರೂ ಈ ನಾಲ್ವರಿಗೆ ಮಾತ್ರ ಗೊತ್ತಿದೆ. ವರಿಷ್ಠರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ” ಎಂದರು.

ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, ”ನಾನು ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಮಾತನಾಡುವಷ್ಟು ಪ್ರಬಲ ಅಲ್ಲ. ಅಷ್ಟು ಎತ್ತರಕ್ಕೆ ನಾನು ಬೆಳೆದಿಲ್ಲ. ಅವೆಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತದೆ” ಎಂದರು.

ಕಾಂಗ್ರೆಸ್‌ನ ಈ ಆಂತರಿಕ ವಿಚಾರದ  ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ”ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದಿಲ್ಲ. ಅವರನ್ನು ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ. ಸಿದ್ದರಾಮಯ್ಯ ಅವರು ಪಾಟೀಲ್‌ರ ಹೇಳಿಕೆಯ ಮೂಲಕ ಸಂದೇಶ ರವಾನಿಸಿದ್ದಾರೆ. ಇದು ಡಿಕೆಶಿಗೆ ನೇರವಾದ ಎಚ್ಚರಿಕೆ. ಬಹುಮತ ಸಿಕ್ಕಿದ ನಂತರವೂ ಈವರೆಗಿನ ಬೆಳವಣಿಗೆಗಳನ್ನು ಗಮನಿಸಿದಾಗ ಈ ಸರ್ಕಾರ ಸ್ಥಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ. ಗ್ಯಾರಂಟಿಯೂ ಇಲ್ಲ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಎಟಿಎಂ ಸರ್ಕಾರ ರಚನೆಯಾಗಿದೆ. ಅದಷ್ಟೇ ಈ ಸರ್ಕಾರದ ಆದ್ಯತೆಯಾಗಿರುವುದು ರಾಜ್ಯದ ದುರಂತ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...