Homeಕರ್ನಾಟಕಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ: 'ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ' ಹೇಳಿಕೆಗೆ ಎಂಬಿ ಪಾಟೀಲ್ ಸ್ಪಷ್ಟನೆ

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ: ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ’ ಹೇಳಿಕೆಗೆ ಎಂಬಿ ಪಾಟೀಲ್ ಸ್ಪಷ್ಟನೆ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಸಿಎಂ ಸ್ಥಾನಕ್ಕಾಗಿ ನಡೆದ ಫೈಟ್‌ನಲ್ಲಿ ಸಿದ್ದರಾಮಯ್ಯ ಅವರ ಕೈ ಮೇಲಾಗಿದೆ. ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿಸಿ ರಾಜ್ಯ ಕಾಂಗ್ರೆಸ್‌ನ ಬೇಗುದಿಯನ್ನು ಹೈಕಮಾಂಡ್ ಕಡಿಮೆ ಮಾಡಿದೆ. ಆದರೆ ಸಚಿವ ಎಂಬಿ ಪಾಟೀಲ್ ಅವರು, ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೇ ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದೆ.

ಸೋಮವಾರ ರಾತ್ರಿ ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ್ದ ಎಂ.ಬಿ. ಪಾಟೀಲ್ ಅವರು, ”ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ” ಎಂದು ಹೇಳಿದ್ದರು.

ಎಂಬಿಪಿ ಅವರು ಈ ಹೇಳಿಕಯನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ”ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚರ್ಚಿಸಬಾರದು” ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣದ ಸಚಿವರು, ಶಾಸಕರಿಗೆ ಎಚ್ಚರಿಕೆ ನೀಡಿದೆ.

”ಯಾರೂ ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ಈಗ ನಮ್ಮ ಆದ್ಯತೆ. ಇದರ ಕಡೆ ಗಮನ ಕೊಡಬೇಕಿದೆ. ಇದರ ಹೊರತಾಗಿ ಯಾವುದೇ ಗೊಂದಲದ ಹೇಳಿಕೆಗಳನ್ನು ನೀಡಬಾರದು. ಗೊಂದಲ ಮೂಡಿಸುವ ಹೇಳಿಕೆಗಳೂ ಸೇರಿದಂತೆ ಎಲ್ಲವನ್ನೂ ಎಐಸಿಸಿ ಗಮನಿಸುತ್ತದೆ. ಯಾವುದೇ ವಿಷಯಗಳಿದ್ದರೂ ಎಐಸಿಸಿ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ” ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ, ರಣದೀಪ್ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಆ ಬಳಿಕ ತಮ್ಮ ಹೇಳಿಕೆಯ ಬಗ್ಗೆ ಮಂಗಳವಾರ ಸ್ಪಷ್ಟಿಕರಣ ನೀಡಿದ ಎಂಬಿ ಪಾಟೀಲ್ ಅವರು, ”ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ನಮ್ಮ ನಾಯಕರು ಹೇಳಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದರೋ ಅದನ್ನೇ ನಾನು ಹೇಳಿದ್ದೇನೆ. ಅಧಿಕಾರ ಹಂಚಿಕೆ ಇಲ್ಲ. ಇದ್ದರೆ ಅದು ಜನರ ಜೊತೆ ಮಾತ್ರ ಎಂದೂ ವೇಣುಗೋಪಾಲ್ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಮುಂದುವರೆಯುತ್ತಾರೆ ಎಂದೂ ಹೇಳಿದ್ದರು. ನಾನು ಅದನ್ನೂ ಹೇಳಿದ್ದೇನೆ. ಅಧಿಕಾರ ಹಂಚಿಕೆಯ ಸಂಧಾನ ಸೂತ್ರ ನನಗೆ ಗೊತ್ತಿಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ” ಎಂದು ಸ್ಪಷ್ಟಿಕರಣ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

ಎಂಬಿ ಪಾಟೀಲ್‌ರ ಹೇಳಿಕೆ ಡಿ.ಕೆ. ಶಿವಕುಮಾರ್ ಅವರನ್ನು ಕೆರಳಿಸಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ”ಎಂ.ಬಿ. ಪಾಟೀಲ್‌ರಿಗೆ ಆ ಹೇಳಿಕೆ ನೀಡಲು ಅಧಿಕಾರ ಕೊಟ್ಟವರು ಯಾರು? ಅವರೇನು ಪಕ್ಷದ ಹೈಕಮಾಂಡೇ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ”ಈ ರೀತಿ ವರ್ತನೆ ಮುಂದುವರಿದರೆ ಪಕ್ಷದ ಅಧ್ಯಕ್ಷನಾಗಿ ಮುಂದುವರಿಯುವುದು ನನಗೆ ಕಷ್ಟವಾಗಲಿದೆ” ಎಂದಿದ್ದಾರೆಂದು ಹೇಳಿದ್ದಾರೆ. ಇದರಿಂದ ಶಿವಕುಮಾರ್ ಸಹೋದರ, ಸಂಸದ ಡಿ.ಕೆ. ಸುರೇಶ್ ಕೂಡಾ ಕೆಂಡಾಮಂಡಲವಾಗಿದ್ದಾರೆ.

ರಾಜ್ಯ ಕೈ ನಾಯಕರ ಪ್ರತಿಕ್ರಿಯೆಗಳು:

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ”ಈ ವಿಚಾರ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಮಾತ್ರ ಗೊತ್ತಿದೆ. ಇದು ಆಂತರಿಕವಾಗಿ ನಡೆದಿರುವ ಚರ್ಚೆ. ಅವರನ್ನು ಬಿಟ್ಟು ಬೇರೆಯವರಿಗೆ ಈ ವಿಚಾರ ಗೊತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಚರ್ಚೆ ಆಗಿಲ್ಲ” ಎಂದಿದ್ದಾರೆ.

”ಈಗ ನಮ್ಮ ಮುಂದಿರುವುದು ಉತ್ತಮ ಆಡಳಿತ ನೀಡುವ ವಿಚಾರ, ಅಧಿಕಾರ ಹಂಚಿಕೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಈ ಬಗ್ಗೆ ಯಾರು ಗೊಂದಲ ಸೃಷ್ಟಿಸಬಾರದು. ಎಂ.ಬಿ. ಪಾಟೀಲ್‌ರಿಗೆ ಏನು ಮಾಹಿತಿ ಇದೆಯೋ ನನಗೆ ಗೊತ್ತಿಲ್ಲ. ನನಗೆ ಗೊತ್ತಿರುವುದನ್ನು ಹೇಳಿದ್ದೇನೆ” ಎಂದು ಅವರು ಹೇಲಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಶಾಸಕ ದಿನೇಶ್ ಗುಂಡೂರಾವ್ ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಎಐಸಿಸಿ ನಾಯಕರು ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಹೇಳಿದರು. ಅದಷ್ಟು ನಮಗೆ ಗೊತ್ತು. ಈಗ ಅಧಿಕಾರ ಹಂಚಿಕೆ ವಿಚಾರ ಏಕೆ? ಆ ಬಗ್ಗೆ ಏನು ಚರ್ಚೆ ಆಗಿದೆಯೆಂದು ಗೊತ್ತಿಲ್ಲ. 2013ರಲ್ಲಿ ಈ ಬಗ್ಗೆ ಚರ್ಚೆ ಆಗಿದೆಯೇ? ಈಗ ಚರ್ಚೆ ಏಕೆ” ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ”ಅಧಿಕಾರ ಹಂಚಿಕೆ ಕುರಿತು ಏನೇ ಮಾತುಕತೆ ಆಗಿದ್ದರೂ, ಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಮತ್ತು ಇಬ್ಬರು ನಾಯಕರ ನಡುವೆ ಮಾತ್ರ ಆಗಿದೆ. ಏನೇ ಇದ್ದರೂ ಈ ನಾಲ್ವರಿಗೆ ಮಾತ್ರ ಗೊತ್ತಿದೆ. ವರಿಷ್ಠರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ” ಎಂದರು.

ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, ”ನಾನು ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಮಾತನಾಡುವಷ್ಟು ಪ್ರಬಲ ಅಲ್ಲ. ಅಷ್ಟು ಎತ್ತರಕ್ಕೆ ನಾನು ಬೆಳೆದಿಲ್ಲ. ಅವೆಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತದೆ” ಎಂದರು.

ಕಾಂಗ್ರೆಸ್‌ನ ಈ ಆಂತರಿಕ ವಿಚಾರದ  ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ”ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದಿಲ್ಲ. ಅವರನ್ನು ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ. ಸಿದ್ದರಾಮಯ್ಯ ಅವರು ಪಾಟೀಲ್‌ರ ಹೇಳಿಕೆಯ ಮೂಲಕ ಸಂದೇಶ ರವಾನಿಸಿದ್ದಾರೆ. ಇದು ಡಿಕೆಶಿಗೆ ನೇರವಾದ ಎಚ್ಚರಿಕೆ. ಬಹುಮತ ಸಿಕ್ಕಿದ ನಂತರವೂ ಈವರೆಗಿನ ಬೆಳವಣಿಗೆಗಳನ್ನು ಗಮನಿಸಿದಾಗ ಈ ಸರ್ಕಾರ ಸ್ಥಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ. ಗ್ಯಾರಂಟಿಯೂ ಇಲ್ಲ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಎಟಿಎಂ ಸರ್ಕಾರ ರಚನೆಯಾಗಿದೆ. ಅದಷ್ಟೇ ಈ ಸರ್ಕಾರದ ಆದ್ಯತೆಯಾಗಿರುವುದು ರಾಜ್ಯದ ದುರಂತ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...