Homeಕರ್ನಾಟಕಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ: 'ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ' ಹೇಳಿಕೆಗೆ ಎಂಬಿ ಪಾಟೀಲ್ ಸ್ಪಷ್ಟನೆ

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ: ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ’ ಹೇಳಿಕೆಗೆ ಎಂಬಿ ಪಾಟೀಲ್ ಸ್ಪಷ್ಟನೆ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಸಿಎಂ ಸ್ಥಾನಕ್ಕಾಗಿ ನಡೆದ ಫೈಟ್‌ನಲ್ಲಿ ಸಿದ್ದರಾಮಯ್ಯ ಅವರ ಕೈ ಮೇಲಾಗಿದೆ. ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿಸಿ ರಾಜ್ಯ ಕಾಂಗ್ರೆಸ್‌ನ ಬೇಗುದಿಯನ್ನು ಹೈಕಮಾಂಡ್ ಕಡಿಮೆ ಮಾಡಿದೆ. ಆದರೆ ಸಚಿವ ಎಂಬಿ ಪಾಟೀಲ್ ಅವರು, ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೇ ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದೆ.

ಸೋಮವಾರ ರಾತ್ರಿ ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ್ದ ಎಂ.ಬಿ. ಪಾಟೀಲ್ ಅವರು, ”ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ” ಎಂದು ಹೇಳಿದ್ದರು.

ಎಂಬಿಪಿ ಅವರು ಈ ಹೇಳಿಕಯನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ”ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚರ್ಚಿಸಬಾರದು” ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣದ ಸಚಿವರು, ಶಾಸಕರಿಗೆ ಎಚ್ಚರಿಕೆ ನೀಡಿದೆ.

”ಯಾರೂ ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ಈಗ ನಮ್ಮ ಆದ್ಯತೆ. ಇದರ ಕಡೆ ಗಮನ ಕೊಡಬೇಕಿದೆ. ಇದರ ಹೊರತಾಗಿ ಯಾವುದೇ ಗೊಂದಲದ ಹೇಳಿಕೆಗಳನ್ನು ನೀಡಬಾರದು. ಗೊಂದಲ ಮೂಡಿಸುವ ಹೇಳಿಕೆಗಳೂ ಸೇರಿದಂತೆ ಎಲ್ಲವನ್ನೂ ಎಐಸಿಸಿ ಗಮನಿಸುತ್ತದೆ. ಯಾವುದೇ ವಿಷಯಗಳಿದ್ದರೂ ಎಐಸಿಸಿ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ” ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ, ರಣದೀಪ್ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಆ ಬಳಿಕ ತಮ್ಮ ಹೇಳಿಕೆಯ ಬಗ್ಗೆ ಮಂಗಳವಾರ ಸ್ಪಷ್ಟಿಕರಣ ನೀಡಿದ ಎಂಬಿ ಪಾಟೀಲ್ ಅವರು, ”ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ನಮ್ಮ ನಾಯಕರು ಹೇಳಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದರೋ ಅದನ್ನೇ ನಾನು ಹೇಳಿದ್ದೇನೆ. ಅಧಿಕಾರ ಹಂಚಿಕೆ ಇಲ್ಲ. ಇದ್ದರೆ ಅದು ಜನರ ಜೊತೆ ಮಾತ್ರ ಎಂದೂ ವೇಣುಗೋಪಾಲ್ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಮುಂದುವರೆಯುತ್ತಾರೆ ಎಂದೂ ಹೇಳಿದ್ದರು. ನಾನು ಅದನ್ನೂ ಹೇಳಿದ್ದೇನೆ. ಅಧಿಕಾರ ಹಂಚಿಕೆಯ ಸಂಧಾನ ಸೂತ್ರ ನನಗೆ ಗೊತ್ತಿಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ” ಎಂದು ಸ್ಪಷ್ಟಿಕರಣ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

ಎಂಬಿ ಪಾಟೀಲ್‌ರ ಹೇಳಿಕೆ ಡಿ.ಕೆ. ಶಿವಕುಮಾರ್ ಅವರನ್ನು ಕೆರಳಿಸಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ”ಎಂ.ಬಿ. ಪಾಟೀಲ್‌ರಿಗೆ ಆ ಹೇಳಿಕೆ ನೀಡಲು ಅಧಿಕಾರ ಕೊಟ್ಟವರು ಯಾರು? ಅವರೇನು ಪಕ್ಷದ ಹೈಕಮಾಂಡೇ?” ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ”ಈ ರೀತಿ ವರ್ತನೆ ಮುಂದುವರಿದರೆ ಪಕ್ಷದ ಅಧ್ಯಕ್ಷನಾಗಿ ಮುಂದುವರಿಯುವುದು ನನಗೆ ಕಷ್ಟವಾಗಲಿದೆ” ಎಂದಿದ್ದಾರೆಂದು ಹೇಳಿದ್ದಾರೆ. ಇದರಿಂದ ಶಿವಕುಮಾರ್ ಸಹೋದರ, ಸಂಸದ ಡಿ.ಕೆ. ಸುರೇಶ್ ಕೂಡಾ ಕೆಂಡಾಮಂಡಲವಾಗಿದ್ದಾರೆ.

ರಾಜ್ಯ ಕೈ ನಾಯಕರ ಪ್ರತಿಕ್ರಿಯೆಗಳು:

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ”ಈ ವಿಚಾರ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಮಾತ್ರ ಗೊತ್ತಿದೆ. ಇದು ಆಂತರಿಕವಾಗಿ ನಡೆದಿರುವ ಚರ್ಚೆ. ಅವರನ್ನು ಬಿಟ್ಟು ಬೇರೆಯವರಿಗೆ ಈ ವಿಚಾರ ಗೊತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಚರ್ಚೆ ಆಗಿಲ್ಲ” ಎಂದಿದ್ದಾರೆ.

”ಈಗ ನಮ್ಮ ಮುಂದಿರುವುದು ಉತ್ತಮ ಆಡಳಿತ ನೀಡುವ ವಿಚಾರ, ಅಧಿಕಾರ ಹಂಚಿಕೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಈ ಬಗ್ಗೆ ಯಾರು ಗೊಂದಲ ಸೃಷ್ಟಿಸಬಾರದು. ಎಂ.ಬಿ. ಪಾಟೀಲ್‌ರಿಗೆ ಏನು ಮಾಹಿತಿ ಇದೆಯೋ ನನಗೆ ಗೊತ್ತಿಲ್ಲ. ನನಗೆ ಗೊತ್ತಿರುವುದನ್ನು ಹೇಳಿದ್ದೇನೆ” ಎಂದು ಅವರು ಹೇಲಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಶಾಸಕ ದಿನೇಶ್ ಗುಂಡೂರಾವ್ ಈ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಎಐಸಿಸಿ ನಾಯಕರು ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಹೇಳಿದರು. ಅದಷ್ಟು ನಮಗೆ ಗೊತ್ತು. ಈಗ ಅಧಿಕಾರ ಹಂಚಿಕೆ ವಿಚಾರ ಏಕೆ? ಆ ಬಗ್ಗೆ ಏನು ಚರ್ಚೆ ಆಗಿದೆಯೆಂದು ಗೊತ್ತಿಲ್ಲ. 2013ರಲ್ಲಿ ಈ ಬಗ್ಗೆ ಚರ್ಚೆ ಆಗಿದೆಯೇ? ಈಗ ಚರ್ಚೆ ಏಕೆ” ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ”ಅಧಿಕಾರ ಹಂಚಿಕೆ ಕುರಿತು ಏನೇ ಮಾತುಕತೆ ಆಗಿದ್ದರೂ, ಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಮತ್ತು ಇಬ್ಬರು ನಾಯಕರ ನಡುವೆ ಮಾತ್ರ ಆಗಿದೆ. ಏನೇ ಇದ್ದರೂ ಈ ನಾಲ್ವರಿಗೆ ಮಾತ್ರ ಗೊತ್ತಿದೆ. ವರಿಷ್ಠರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ” ಎಂದರು.

ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, ”ನಾನು ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಮಾತನಾಡುವಷ್ಟು ಪ್ರಬಲ ಅಲ್ಲ. ಅಷ್ಟು ಎತ್ತರಕ್ಕೆ ನಾನು ಬೆಳೆದಿಲ್ಲ. ಅವೆಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತದೆ” ಎಂದರು.

ಕಾಂಗ್ರೆಸ್‌ನ ಈ ಆಂತರಿಕ ವಿಚಾರದ  ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ”ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದಿಲ್ಲ. ಅವರನ್ನು ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ. ಸಿದ್ದರಾಮಯ್ಯ ಅವರು ಪಾಟೀಲ್‌ರ ಹೇಳಿಕೆಯ ಮೂಲಕ ಸಂದೇಶ ರವಾನಿಸಿದ್ದಾರೆ. ಇದು ಡಿಕೆಶಿಗೆ ನೇರವಾದ ಎಚ್ಚರಿಕೆ. ಬಹುಮತ ಸಿಕ್ಕಿದ ನಂತರವೂ ಈವರೆಗಿನ ಬೆಳವಣಿಗೆಗಳನ್ನು ಗಮನಿಸಿದಾಗ ಈ ಸರ್ಕಾರ ಸ್ಥಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ. ಗ್ಯಾರಂಟಿಯೂ ಇಲ್ಲ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಎಟಿಎಂ ಸರ್ಕಾರ ರಚನೆಯಾಗಿದೆ. ಅದಷ್ಟೇ ಈ ಸರ್ಕಾರದ ಆದ್ಯತೆಯಾಗಿರುವುದು ರಾಜ್ಯದ ದುರಂತ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...